ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ. ನರೇಗಾ ಯೋಜನೆಯಲ್ಲಿ ಕೇಂದ್ರ ಸರ್ಕಾರ ಕೆಲ ಸುಧಾರಣೆಗಳನ್ನು ತಂದಿದ್ದು, ಅದನ್ನೇ ನೆಪ ಮಾಡಿಕೊಂಡು ಕಾಂಗ್ರೆಸ್ ಅಪಪ್ರಚಾರ ನಡೆಸುತ್ತಿದೆ. 140 ಶಾಸಕರ ಬೆಂಬಲವಿದೆ ಎಂಬ ದರ್ಪದಲ್ಲಿ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ ಎಂದು ಅವರು ಕಿಡಿಕಾರಿದರು.
ಸದನದ ದುರ್ಬಳಕೆಗೆ ಸರ್ಕಾರ ಮುಂದಾಗಿದ್ದು ದುರ್ದೈವ. ಮನ್ರೇಗಾದಲ್ಲಿ ಕೆಲವು ಮಾರ್ಪಾಡುಗಳನ್ನು ತಂದಿದ್ದಾರೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾದಿಯಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಉದ್ಯೋಗ ಖಾತ್ರಿ ಯೋಜನೆ ಬಡವರಿಗಾಗಿ, ಕಾಂಗ್ರೆಸ್ ಪುಡಾರಿಗಳಿಗಲ್ಲ. ರಾಜ್ಯಪಾಲರ ಮೂಲಕ ಕೇಂದ್ರದ ವಿರುದ್ಧ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. 140 ಶಾಸಕರ ಬೆಂಬಲ ಇದ್ದರೂ ದಬ್ಬಾಳಿಕೆ ಮಾಡುತ್ತಿದ್ದಾರೆ. ಸರ್ಕಾರ ನಡವಳಿಕೆ ಸರಿಪಡಿಸಿಕೊಳ್ಳದಿದ್ದರೆ, ಜನರು 40ಕ್ಕೆ ಇಳಿಸಲು ಕಾಯುತ್ತಿದ್ದಾರೆ ಎಂದು ಎಚ್ಚರಿಸಿದರು.
ಉದ್ಯೋಗ ಖಾತ್ರಿ ಯೋಜನೆ ಬಡವರಿಗೆ ಉಪಯೋಗ ಆಗಲಿ ಎಂದು ತಿದ್ದುಪಡಿ ಮಾಡಲಾಗಿದೆ. ಇದು ಬಡವರಿಗೆ ಇರುವ ಯೋಜನೆ ಹೊರೆತು, ಕಾಂಗ್ರೆಸ್ ಪುಡಾರಿಗಳಿಗಾಗಿ ಅಲ್ಲ. ರಾಜ್ಯಪಾಲರ ಮುಖೇನ ಕೇಂದ್ರದ ವಿರುದ್ಧ ಜನರನ್ನ ಎತ್ತಿಕಟ್ಟುವ ಕೆಲಸ ಮಾಡಲು ಸರ್ಕಾರ ಹೊರಟಿದೆ. ಮೊದಲು ಸಂವಿಧಾನದ ಗೌರವವನ್ನು ಸರ್ಕಾರ ಉಳಿಸಬೇಕೆಂದು ಆಗ್ರಹಿಸಿದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…