ಬೆಂಗಳೂರು: ಬಾಕಿ ಹಣ ಪಾವತಿ ಸೇರಿದಂತೆ ಗುತ್ತಿಗೆದಾರರ ಅನೇಕ ಸಮಸ್ಯೆಗಳನ್ನು ನಿವಾರಿಸುವಂತೆ ಒತ್ತಾಯಿಸಿ ಗುತ್ತಿಗೆದಾರರು ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಎಚ್.ಸಿ.ಮಹದೇವಪ್ಪ, ಜಮೀರ್ ಆಹಮ್ಮದ್ ಖಾನ್, ಎನ್.ಎಸ್.ಬೋಸರಾಜು, ದಿನೇಶ್ ಗುಂಡೂರಾವ್ ಮತ್ತು ರಹೀಂ ಖಾನ್ ಅವರಿಗೆ ಗುತ್ತಿಗೆದಾರರ ಸಂಘ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದೆ.
ಸರ್ಕಾರದಿಂದ ಗುತ್ತಿಗೆದಾರರಿಗೆ ಸಾಕಷ್ಟು ಹಣ ಬರಬೇಕಿದೆ. ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಸದ ಕಾರಣ ಹಲವಾರು ಗುತ್ತಿಗೆದಾರರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಸಂಬಂಧಪಟ್ಟ ಇಲಾಖೆಯ ಬಳಿ ಬಾಕಿ ಕೇಳಿದರೆ ಸಚಿವರನ್ನು ಭೇಟಿಯಾಗಿ ಎನ್ನುತ್ತಾರೆ. ಸಚಿವರ ಗಮನಕ್ಕೆ ತಂದರೆ ನಿರ್ಲಕ್ಷ್ಯ ಮಾಡುತ್ತಾರೆ ಎಂದು ಪತ್ರದಲ್ಲಿ ಅಸಮಾಧಾನ ಹೊರಹಾಕಿದೆ.
ಅಧಿಕಾರಿಗಳು ಹಾಗೂ ಸಚಿವರ ಈ ವರ್ತನೆಗೆ ಗುತ್ತಿಗೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಸಮಸ್ಯೆಗಳ ಬಗ್ಗೆ ಚರ್ಚಿಸಿ ಬಾಕಿ ಹಣ ಪಾವತಿ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…