ಬೆಂಗಳೂರು: ಬಾಕಿ ಹಣ ಪಾವತಿ ಸೇರಿದಂತೆ ಗುತ್ತಿಗೆದಾರರ ಅನೇಕ ಸಮಸ್ಯೆಗಳನ್ನು ನಿವಾರಿಸುವಂತೆ ಒತ್ತಾಯಿಸಿ ಗುತ್ತಿಗೆದಾರರು ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಎಚ್.ಸಿ.ಮಹದೇವಪ್ಪ, ಜಮೀರ್ ಆಹಮ್ಮದ್ ಖಾನ್, ಎನ್.ಎಸ್.ಬೋಸರಾಜು, ದಿನೇಶ್ ಗುಂಡೂರಾವ್ ಮತ್ತು ರಹೀಂ ಖಾನ್ ಅವರಿಗೆ ಗುತ್ತಿಗೆದಾರರ ಸಂಘ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದೆ.
ಸರ್ಕಾರದಿಂದ ಗುತ್ತಿಗೆದಾರರಿಗೆ ಸಾಕಷ್ಟು ಹಣ ಬರಬೇಕಿದೆ. ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಸದ ಕಾರಣ ಹಲವಾರು ಗುತ್ತಿಗೆದಾರರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಸಂಬಂಧಪಟ್ಟ ಇಲಾಖೆಯ ಬಳಿ ಬಾಕಿ ಕೇಳಿದರೆ ಸಚಿವರನ್ನು ಭೇಟಿಯಾಗಿ ಎನ್ನುತ್ತಾರೆ. ಸಚಿವರ ಗಮನಕ್ಕೆ ತಂದರೆ ನಿರ್ಲಕ್ಷ್ಯ ಮಾಡುತ್ತಾರೆ ಎಂದು ಪತ್ರದಲ್ಲಿ ಅಸಮಾಧಾನ ಹೊರಹಾಕಿದೆ.
ಅಧಿಕಾರಿಗಳು ಹಾಗೂ ಸಚಿವರ ಈ ವರ್ತನೆಗೆ ಗುತ್ತಿಗೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಸಮಸ್ಯೆಗಳ ಬಗ್ಗೆ ಚರ್ಚಿಸಿ ಬಾಕಿ ಹಣ ಪಾವತಿ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…