ರಾಜ್ಯ

ರಾಜ್ಯದ ಅಭಿವೃದ್ಧಿಗೆ ಕೇಂದ್ರದ 5 ಸಚಿವರ ಕೊಡುಗೆ ಶೂನ್ಯವಾಗಿದೆ: ಸಚಿವ ಚಲುವರಾಯಸ್ವಾಮಿ ಆರೋಪ

ದಾವಣಗೆರೆ: ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸುವ ಜೊತೆಗೆ ಅಭಿವೃದ್ಧಿಗೂ ಪ್ರತಿ ಕ್ಷೇತ್ರಕ್ಕೆ ನೂರು ಕೋಟಿ ರೂ.ಗಳಿಗೆ ಹೆಚ್ಚಿನ ಅನುದಾನವನ್ನು ಸಿದ್ದರಾಮಯ್ಯ ಅವರು ಒದಗಿಸಿದ್ದು, ರಾಜ್ಯದ ಅಭಿವೃದ್ಧಿಗೆ ಕೇಂದ್ರದ 5 ಸಚಿವರ ಕೊಡುಗೆ ಶೂನ್ಯವಾಗಿದೆ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯ ಕಣದಲ್ಲಿ ಕೇಂದ್ರ ಸಚಿವರು ಮೈಮೇಲೆ ದೇವರು ಬಂದಂತೆ ಮಾತನಾಡುತ್ತಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಅವರ ಪಾತ್ರ ಏನು? ಎಂದು ಮೊದಲು ತಿಳಿಸಿ ಎಂದು ಸವಾಲು ಹಾಕಿದರು.
ಬರ ಪರಿಹಾರ ನೆರವು ಪಡೆಯಲು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಬೇಕಾಗಿತ್ತು. ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರು ಏಕೆ ನೆರವು ನೀಡಲಿಲ್ಲ ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿ ಅವರು, ಕಾಂಗ್ರೆಸ್ ಪಕ್ಷವನ್ನು ಕಿತ್ತು ಎಸೆಯಿರಿ ಎಂದು ಹೇಳುತ್ತಿದ್ದಾರೆ. ಅವರ ಭಾಷೆ ಅವರ ಘನತೆಗೆ ತಕ್ಕುದಾಗಿಲ್ಲ. ತಮಿಳುನಾಡು, ಆಂಧ್ರಪ್ರದೇಶ ಅಲ್ಲೆಲ್ಲಾ ಸ್ಥಳೀಯ ಪ್ರಾದೇಶಿಕ ಪಕ್ಷಗಳು ಬಲಿಷ್ಠವಾಗಿವೆ. ತಮಿಳುನಾಡಿನಲ್ಲಿ ಸ್ಟ್ಯಾಲಿನ್, ಆಂದ್ರಪ್ರದೇಶದಲ್ಲಿ ಜಗನ್‍ಮೋಹನ್ ರೆಡ್ಡಿ ಅವರು ಯಶಸ್ವಿಯಾಗಿ ನಾಯಕತ್ವ ಬಳಸಿಕೊಂಡರು. ಕುಮಾರಸ್ವಾಮಿ ಅವರು ತಮ ವರ್ತನೆ ಹಾಗೂ ಭಾಷೆಯ ಬಳಕೆಯಿಂದಾಗಿ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದರು.

ಅಭಿವೃದ್ಧಿಗೆ ಹಣ ನೀಡುತ್ತಿಲ್ಲ ಎಂದು ವಿರೋಧ ಪಕ್ಷಗಳು ಅನಗತ್ಯ ಅಪಪ್ರಚಾರ ಮಾಡುತ್ತಿವೆ. ಸಿದ್ದರಾಮಯ್ಯ ಅವರು 1.30 ಲಕ್ಷ ಕೋಟಿ ರೂ. ಖರ್ಚು ಮಾಡಿದ್ದಾರೆ. ಪ್ರತಿಯೊಂದು ಶಾಸಕರ ಕ್ಷೆ?ತ್ರಕ್ಕೂ 10, 20, 50 ಲಕ್ಷ ರೂ.ಗಳಂತೆ ಮೂರು ಹಂತದಲ್ಲಿ ಒಟ್ಟು 80 ಲಕ್ಷ ರೂ. ಒದಗಿಸಲಾಗಿದೆ. ಪ್ರಸಕ್ತ ಬಜೆಟ್‍ನಲ್ಲಿ 25 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಒಟ್ಟು 105 ಕೋಟಿ ರೂ.ಗಳನ್ನು ಒದಗಿಸಲಾಗಿದೆ, ಜೊತೆಗೆ ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ ಇಲಾಖೆಗಳ ಕ್ರಿಯಾ ಯೋಜನೆಯ ಮೂಲಕವೂ ಅಭಿವೃದ್ಧಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಕೇಂದ್ರದಿಂದ ರಾಜ್ಯಕ್ಕೆ ನ್ಯಾಯಯುತವಾದ ಪಾಲು ದೊರೆಯುತ್ತಿಲ್ಲ. ಈ ಬಗ್ಗೆ ಕೇಂದ್ರ ಸಚಿವರಾದ ಕುಮಾರಸ್ವಾಮಿ, ಪ್ರಹ್ಲಾದ್‍ಜೋಶಿ, ಸೋಮಣ್ಣ, ಶೋಭಾ ಕರಂದ್ಲಾಜೆ ಅವರುಗಳು ಒಮ್ಮೆಯೂ ಬಾಯಿ ಬಿಟ್ಟಿಲ್ಲ ಎಂದು ಕಿಡಿಕಾರಿದರು.

 

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

5 mins ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

25 mins ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

28 mins ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

3 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

3 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

3 hours ago