ರಾಜ್ಯ

ರಾಜ್ಯದ ಅಭಿವೃದ್ಧಿಗೆ ಕೇಂದ್ರದ 5 ಸಚಿವರ ಕೊಡುಗೆ ಶೂನ್ಯವಾಗಿದೆ: ಸಚಿವ ಚಲುವರಾಯಸ್ವಾಮಿ ಆರೋಪ

ದಾವಣಗೆರೆ: ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸುವ ಜೊತೆಗೆ ಅಭಿವೃದ್ಧಿಗೂ ಪ್ರತಿ ಕ್ಷೇತ್ರಕ್ಕೆ ನೂರು ಕೋಟಿ ರೂ.ಗಳಿಗೆ ಹೆಚ್ಚಿನ ಅನುದಾನವನ್ನು ಸಿದ್ದರಾಮಯ್ಯ ಅವರು ಒದಗಿಸಿದ್ದು, ರಾಜ್ಯದ ಅಭಿವೃದ್ಧಿಗೆ ಕೇಂದ್ರದ 5 ಸಚಿವರ ಕೊಡುಗೆ ಶೂನ್ಯವಾಗಿದೆ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯ ಕಣದಲ್ಲಿ ಕೇಂದ್ರ ಸಚಿವರು ಮೈಮೇಲೆ ದೇವರು ಬಂದಂತೆ ಮಾತನಾಡುತ್ತಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಅವರ ಪಾತ್ರ ಏನು? ಎಂದು ಮೊದಲು ತಿಳಿಸಿ ಎಂದು ಸವಾಲು ಹಾಕಿದರು.
ಬರ ಪರಿಹಾರ ನೆರವು ಪಡೆಯಲು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಬೇಕಾಗಿತ್ತು. ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರು ಏಕೆ ನೆರವು ನೀಡಲಿಲ್ಲ ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿ ಅವರು, ಕಾಂಗ್ರೆಸ್ ಪಕ್ಷವನ್ನು ಕಿತ್ತು ಎಸೆಯಿರಿ ಎಂದು ಹೇಳುತ್ತಿದ್ದಾರೆ. ಅವರ ಭಾಷೆ ಅವರ ಘನತೆಗೆ ತಕ್ಕುದಾಗಿಲ್ಲ. ತಮಿಳುನಾಡು, ಆಂಧ್ರಪ್ರದೇಶ ಅಲ್ಲೆಲ್ಲಾ ಸ್ಥಳೀಯ ಪ್ರಾದೇಶಿಕ ಪಕ್ಷಗಳು ಬಲಿಷ್ಠವಾಗಿವೆ. ತಮಿಳುನಾಡಿನಲ್ಲಿ ಸ್ಟ್ಯಾಲಿನ್, ಆಂದ್ರಪ್ರದೇಶದಲ್ಲಿ ಜಗನ್‍ಮೋಹನ್ ರೆಡ್ಡಿ ಅವರು ಯಶಸ್ವಿಯಾಗಿ ನಾಯಕತ್ವ ಬಳಸಿಕೊಂಡರು. ಕುಮಾರಸ್ವಾಮಿ ಅವರು ತಮ ವರ್ತನೆ ಹಾಗೂ ಭಾಷೆಯ ಬಳಕೆಯಿಂದಾಗಿ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದರು.

ಅಭಿವೃದ್ಧಿಗೆ ಹಣ ನೀಡುತ್ತಿಲ್ಲ ಎಂದು ವಿರೋಧ ಪಕ್ಷಗಳು ಅನಗತ್ಯ ಅಪಪ್ರಚಾರ ಮಾಡುತ್ತಿವೆ. ಸಿದ್ದರಾಮಯ್ಯ ಅವರು 1.30 ಲಕ್ಷ ಕೋಟಿ ರೂ. ಖರ್ಚು ಮಾಡಿದ್ದಾರೆ. ಪ್ರತಿಯೊಂದು ಶಾಸಕರ ಕ್ಷೆ?ತ್ರಕ್ಕೂ 10, 20, 50 ಲಕ್ಷ ರೂ.ಗಳಂತೆ ಮೂರು ಹಂತದಲ್ಲಿ ಒಟ್ಟು 80 ಲಕ್ಷ ರೂ. ಒದಗಿಸಲಾಗಿದೆ. ಪ್ರಸಕ್ತ ಬಜೆಟ್‍ನಲ್ಲಿ 25 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಒಟ್ಟು 105 ಕೋಟಿ ರೂ.ಗಳನ್ನು ಒದಗಿಸಲಾಗಿದೆ, ಜೊತೆಗೆ ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ ಇಲಾಖೆಗಳ ಕ್ರಿಯಾ ಯೋಜನೆಯ ಮೂಲಕವೂ ಅಭಿವೃದ್ಧಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಕೇಂದ್ರದಿಂದ ರಾಜ್ಯಕ್ಕೆ ನ್ಯಾಯಯುತವಾದ ಪಾಲು ದೊರೆಯುತ್ತಿಲ್ಲ. ಈ ಬಗ್ಗೆ ಕೇಂದ್ರ ಸಚಿವರಾದ ಕುಮಾರಸ್ವಾಮಿ, ಪ್ರಹ್ಲಾದ್‍ಜೋಶಿ, ಸೋಮಣ್ಣ, ಶೋಭಾ ಕರಂದ್ಲಾಜೆ ಅವರುಗಳು ಒಮ್ಮೆಯೂ ಬಾಯಿ ಬಿಟ್ಟಿಲ್ಲ ಎಂದು ಕಿಡಿಕಾರಿದರು.

 

ಆಂದೋಲನ ಡೆಸ್ಕ್

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

14 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

14 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

15 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

16 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

17 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

18 hours ago