ರಾಜ್ಯ

ಗ್ರಾಮ ಭಾರತ ಅಭಿವೃದ್ಧಿಯಾಗದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಿಂದುಳಿದವರ-ದಲಿತರ-ಮಹಿಳೆಯರ ಮೀಸಲಾತಿಯನ್ನು ವಿರೋಧಿಸಿದ್ದು ಬಿಜೆಪಿ- ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಗಳನ್ನು ವಿತರಿಸಿ ಹಾಗೂ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿ ಮಾತನಾಡಿದರು.

ಇವತ್ತು ಶೇಕಡಾ.50ರಷ್ಟು ಮಹಿಳಾ ಮೀಸಲಾತಿ ರಾಜೀವ್ ಗಾಂಧಿ ಮತ್ತು ಕಾಂಗ್ರೆಸ್ಸಿನ ಕೊಡುಗೆ. ಇದನ್ನು ವಿರೋಧ ಮಾಡಿದ್ದು ಬಿಜೆಪಿಯ ಉಪಾಧ್ಯಕ್ಷರಾಗಿದ್ದ ರಾಜ್ಯ ಸಭಾ ಸದಸ್ಯ ರಾಮಾಜೋಯಿಸ್. ಇದನ್ನು ಅರ್ಥ ಮಾಡಿಕೊಳ್ಳಬೇಕು. ಸುಮ್ಮನೆ ಬಿಜೆಪಿಗೆ ಚಪ್ಪಾಳೆ ತಟ್ಟಬಾರದು ಎಂದರು.

ಗ್ರಾಮದಿಂದಲೇ ಅಧಿಕಾರ ಕೆಳಗಿನಿಂದ ಮೇಲಕ್ಕೆ ಹೋಗಬೇಕು ಎನ್ನುವ ವಿಕೇಂದ್ರೀಕರಣ ಗಾಂಧಿ, ನೆಹರೂ, ಲೋಹಿಯಾ ಅವರ ಕನಸಾಗಿತ್ತು. ನಮ್ಮದು ಹಳ್ಳಿಗಳ ದೇಶ. ಗ್ರಾಮ ಭಾರತ ಅಭಿವೃದ್ಧಿ ಆಗದೆ ದೇಶ ಅಭಿವೃದ್ಧಿ ಸಾಧ್ಯವಿಲ್ಲ ಎಂದರು.

ಹಳ್ಳಿಗಳ ಅಭಿವೃದ್ಧಿಯಲ್ಲಿ ಗ್ರಾಮಸ್ಥರ ಪಾಲ್ಗೊಳ್ಳುವಿಕೆ ಬಹಳ ಮುಖ್ಯ. ರಾಜೀವ್ ಗಾಂಧಿಯವರು ಪ್ರಧಾನಿ ಆದಾಗ ಸಂವಿಧಾನ ಪರಿಚ್ಛೇದ 73, 74ಕ್ಕೆ ತಿದ್ದುಪಡಿ ತಂದು ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ತಂದರು. ಈ ತಿದ್ದುಪಡಿ ಬರುವವರೆಗೂ ಮಹಿಳೆಯರಿಗೆ, ಹಿಂದುಳಿದವರಿಗೆ ಮೀಸಲಾತಿಯೇ ಇರಲಿಲ್ಲ ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು ಎಂದರು.

ಇದನ್ನು ಓದಿ: ಹಾಸನ| ಕೋಡಿಮಠಕ್ಕೆ ಗೃಹ ಸಚಿವ ಜಿ.ಪರಮೇಶ್ವರ್‌ ಭೇಟಿ

ಬಿಜೆಪಿಯ ರಾಮಾಜೋಯಿಸ್ ಮೀಸಲಾತಿ ವಿರೋಧಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಹಾಕಿದ್ದರು. ಆದರೆ, ಸುಪ್ರೀಂಕೋರ್ಟ್ ಮೀಸಲಾತಿ ಪರವಾಗಿ ನಿಂತು ಬಿಜೆಪಿಯ ರಾಮಾ ಜೋಯಿಸ್ ಅರ್ಜಿಯನ್ನು ತಿರಸ್ಕರಿಸಿತು ಎಂದರು.

ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಹೆಸರಿಗೆ ಮಾತ್ರ ಪ್ರಧಾನಿ ಅವರ ಹೆಸರಿನಲ್ಲಿದೆ. ಇದರಲ್ಲಿ ರಾಜ್ಯದ ಪಾಲೇ ಹೆಚ್ಚು. ಕೇಂದ್ರದಿಂದ ಇನ್ನೂ 13 ಸಾವಿರ ಕೋಟಿ ಹಣ ರಾಜ್ಯಕ್ಕೆ ವಾಪಾಸ್ ಬರಬೇಕಿದೆ. ಕೇಂದ್ರದ ಮಾಡುವ ಅನ್ಯಾಯವನ್ನು ರೈತರು ಮತ್ತು ರಾಜ್ಯದ ಜನತೆ ವಿರೋಧಿಸಬೇಕು. ಕಬ್ಬಿನ ದರ ನಿಗಧಿಯಲ್ಲೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರಿಂದ ರೈತರಿಗೆ ಅನ್ಯಾಯವಾಯಿತು. ಆದರೂ ರಾಜ್ಯ ಸರ್ಕಾರ ಸರಿದೂಗಿಸಿ ಕಬ್ಬು ಬೆಳೆಗಾರರ ಪ್ರತಿಭಟನೆಗೆ ಸ್ಪಂದಿಸಿ ಪರಿಹಾರ ನೀಡಿತು ಎಂದರು.

ಇ-ಸ್ವತ್ತು ತಂತ್ರಾಂಶದಿಂದ ಸದ್ಯ 1778 ಕೋಟಿ ತೆರಿಗೆ ಆದಾಯ ಹೆಚ್ಚಾಗುವ ಅಂದಾಜಿದೆ. ತಂತ್ರಾಂಶ ಪರಿಣಾಮಕಾರಿ ಜಾರಿ ಆದರೆ, ಆದಾಯದ ಪ್ರಮಾಣ 2000 ಕೋಟಿಗೂ ಹೆಚ್ಚುವ ನಿರೀಕ್ಷೆ ಇದೆ ಎಂದರು.

ಕಲ್ಯಾಣ ಕರ್ನಾಟಕ‌ ಭಾಗದಲ್ಲಿ 8860ಕಿಮೀ ಕಲ್ಯಾಣ ಪಥಕ್ಕೆ ಚಾಲನೆ ನೀಡಿದ್ದು ನಮ್ಮ ಸರ್ಕಾರ. ಈ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದನ್ನು ಬಿಟ್ಟು ಈ ಬಿಜೆಪಿಯವರು ಜನಪರ ಕೆಲಸ ಮಾಡುತ್ತಿರುವ ನಮ್ಮ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ತರುತ್ತಾರಂತೆ ಎಂದು ಮುಖ್ಯಮಂತ್ರಿಗಳು ವ್ಯಂಗ್ಯವಾಡಿದರು.

ನಮ್ಮ ಭಾಗ್ಯಗಳು-ನಮ್ಮ ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿನ ಭದ್ರತೆಗಾಗಿ ಜಾರಿ ಮಾಡಿದ್ದು. ಬಿಜೆಪಿ ಯ ಬುರುಡೆ ಗ್ಯಾಂಗ್ ಇಂತಹ ಯಾವುದೇ ಕಾರ್ಯಕ್ರಮ ನೀಡದೆ ಜನರ ಎದುರು ಬುರುಡೆ ಬಿಡುತ್ತಾ ತಿರುಗುತ್ತಿದ್ದಾರೆ‌ ಎಂದು ಟೀಕಿಸಿದರು.

ಆಂದೋಲನ ಡೆಸ್ಕ್

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

4 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

4 hours ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

6 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

8 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

8 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

9 hours ago