ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ಗೆ ಸತತ ಮೂರನೇ ಬಾರಿ ಮೈಸೂರಿಗೆ ತೆರಳಲು 57ನೇ ಸಿಸಿಎಚ್ ನ್ಯಾಯಾಲಯ ಅನುಮತಿ ನೀಡಿದೆ.
ನಟ ದರ್ಶನ್ ಮೈಸೂರಿಗೆ ತೆರಳಲು 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಇಂದು(ಜನವರಿ.31) ವಿಚಾರಣೆ ನಡೆಸಿದ ನ್ಯಾಯಪೀಠವೂ ಫೆಬ್ರವರಿ.10 ವರೆಗೂ ಮೈಸೂರಿನಲ್ಲಿ ವಾಸ್ತವ್ಯದಲ್ಲಿರಲು ದರ್ಶನ್ಗೆ ಅನುಮತಿ ನೀಡಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧಿಯಾಗಿದ್ದ ನಟ ದರ್ಶನ್ಗೆ ಹೈಕೋರ್ಟ್ ರೆಗ್ಯುಲರ್ ಜಾಮೀನು ಮಂಜೂರು ಮಾಡಿತ್ತು. ಬಳಿಕ ದರ್ಶನ್ ಅವರು ಮೈಸೂರಿನ ತಮ್ಮ ತೋಟದ ಮನೆಗೆ ತೆರಳಲು ಎರಡು 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ಅನ್ವಯ ದರ್ಶನ್ಗೆ ಎರಡು ಬಾರಿ ಮೈಸೂರಿನಲ್ಲಿ ವಾಸ್ತವ್ಯ ಹೂಡಲು ಅನುಮತಿ ನೀಡಿತ್ತು. ಆದರೆ ದರ್ಶನ್ ಮೂರನೇ ಬಾರಿಗೆ ಅರ್ಜಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಇದೀಗ ಫೆಬ್ರವರಿ 10ರವರೆಗೂ ಮೈಸೂರಿನಲ್ಲಿರಲು ಅವಕಾಶ ನೀಡಿದೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…