ರಾಜ್ಯ

ಮತ್ತೆ ಮುನ್ನೆಲೆಗೆ ಬಂದ ಲಿಂಗಾಯತ ಪ್ರತ್ಯೇಕ ಧರ್ಮದ ಚರ್ಚೆ

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮದ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಬೇಡಿಕೆ ಈಡೇರುವವರಿಗೂ ಹೋರಾಟ ಮುಂದುವರೆಯಬೇಕೆಂಬ ಸಲಹೆಗಳು ಕೇಳಿ ಬಂದಿವೆ.

ನಗರದ ಅರಮನೆ ಮೈದಾನದಲ್ಲಿ ನಡೆದ ಬಸವಸಂಸ್ಕೃತಿ ಅಧ್ಯಯನ 2025ರ ಸಮಾರೋಪದಲ್ಲಿ ಮಾತನಾಡಿದ ನ್ಯಾಯಮೂರ್ತಿ ನಾಗಮೋಹನ ದಾಸ್, ಈ ಹಿಂದೆ ತಮ್ಮ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಸಮಿತಿ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಶಿಫಾರಸು ಮಾಡಿತ್ತು. ಅದನ್ನು ಆಧರಿಸಿ, ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿತ್ತು ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಯಾವುದೇ ಸಕಾರಣ ನೀಡದೆ ಪ್ರಸ್ತಾವನೆಯನ್ನು ವಾಪಸ್ ಕಳುಹಿಸಿದೆ. ರಾಜ್ಯ ಸರ್ಕಾರ ಮತ್ತೊಮ್ಮೆ ವಿವರಣೆ ಹಾಗೂ ಸ್ಪಷ್ಟನೆಗಳೊಂದಿಗೆ ಕೇಂದ್ರಕ್ಕೆ ಶಿಫಾರಸು ಕಳುಹಿಸಬೇಕು ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ:-ಸುದೀಪ್‍ ಸೋದರಳಿಯ ಸಂಚಿತ್‍ ಅಭಿನಯದ ‘ಮ್ಯಾಂಗೋ ಪಚ್ಚ’ ಚಿತ್ರದ ಟೀಸರ್ ಬಂತು

ಲಿಂಗಾಯತ ಧರ್ಮಕ್ಕೆ ಧಾರ್ಮಿಕ ಅಲ್ಪ ಸಂಖ್ಯಾತ ಧರ್ಮದ ಮಾನ್ಯತೆ ಸಿಗುವವರೆಗೂ ಹೋರಾಟ ಮುಂದುವರೆಯಬೇಕು. ಈ ಹೋರಾಟದಲ್ಲಿ ಮಿತ್ರರು ಯಾರು, ಶತ್ರುಗಳು ಯಾರು ಎಂದು ಗುರುತಿಸಲು ಸಾಧ್ಯವಾಗಬೇಕು. ಶತ್ರುಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಹೋರಾಟ ನಡೆಸಿದರೆ, ಅದು ಯಶಸ್ವಿಯಾಗುವುದಿಲ್ಲ. ಶತ್ರುಗಳನ್ನು ಹೊರಗಿಟ್ಟು ಹೋರಾಟ ರೂಪಿಸಬೇಕು ಎಂದು ಕರೆ ನೀಡಿದರು.

ಸಮಾನ ಮನಸ್ಕರ ಜೊತೆಗೂಡಿ ಸೈದ್ಧಾಂತಿಕವಾಗಿ ಹೋರಾಟ ನಡೆಸಿದರೆ, ಖಂಡಿತ ಯಶಸ್ಸು ಸಿಗುತ್ತದೆ ಎಂದು ನಾಗಮೋಹನ್‍ದಾಸ್ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ತುಮಕೂರಿನ ಶ್ರೀಕ್ಷೇತ್ರ ಶ್ರೀ ಸಿದ್ಧಗಂಗಾಮಠದ ಸಿದ್ಧಲಿಂಗ ಮಹಾಸ್ವಾಮಿಜೀ, ಸಾಣೇಹಳ್ಳಿಯ ತರಳುಬಾಳು ಸಂಸ್ಥಾನ ಶಾಖಾಮಠ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಜೀ, ಗದಗ ಡಂಬಳ ಎಡೆಯೂರು ಶ್ರೀ ತೋಂಟದಾರ್ಯ ಸಂಸ್ಥಾನಮಠ ಶ್ರೀ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ಬೀದರ್ ಜಿಲ್ಲೆ ಭಾಲ್ಕಿಯ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಹಾಗೂ ಹಿರೇಮಠ ಸಂಸ್ಥಾನದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು, ಕೂಡಲಸಂಗಮ ಬಸವ ಧರ್ಮಪೀಠದ ಡಾ. ಗಂಗಾಮಾತಾಜಿಯವರು, ಚಿತ್ರದುರ್ಗ ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಮಾದಾರ ಚೆನ್ನಯ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಂ.ಬಿ.ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

4 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

7 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

11 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

13 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

14 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

15 hours ago