ರಾಜ್ಯ

ಧರ್ಮಸ್ಥಳ ಪ್ರಕರಣವನ್ನು ಎನ್‌ಐಎ ಅಥವಾ ಸಿಬಿಐಗೆ ವಹಿಸಬೇಕು: ವಿಜಯೇಂದ್ರ ಆಗ್ರಹ

ಬೆಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದ ಭಾವನೆಗಳಿಗೆ ಧಕ್ಕೆಯಾಗಿರುವ ಹಿನ್ನೆಲೆಯಲ್ಲಿ ಪಿತೂರಿ ನಡೆಸಿರುವವರನ್ನು ಪತ್ತೆ ಹಚ್ಚಲು ರಾಜ್ಯ ಸರ್ಕಾರ ತಕ್ಷಣವೇ ರಾಷ್ಟ್ರೀಯ ತನಿಖಾದಳ(ಎನ್‍ಐಎ)ಕ್ಕೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಈ ಪ್ರಕರಣದ ಹಿಂದೆ ಅಂತಾರಾಷ್ಟ್ರೀಯ ಕೈವಾಡ ಇರುವುದನ್ನು ಅಲ್ಲಗೆಳೆಯುವಂತಿಲ್ಲ. ವ್ಯವಸ್ಥಿತವಾದ ಪಿತೂರಿ ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಎನ್‍ಐಎಗೆ ಇಲ್ಲವೇ ಸಿಬಿಐಗೆ ವಹಿಸಬೇಕು. ಎಸ್‍ಐಟಿಯಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದು ಹೇಳಿದರು.

ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ಇಲ್ಲವೇ ಎನ್‍ಐಎಗೆ ವಹಿಸಬೇಕೆಂಬುದು ಕೇವಲ ಬಿಜೆಪಿ ಒತ್ತಾಯವಲ್ಲ. ಸಮಸ್ತ ಹಿಂದೂಗಳ ಬೇಡಿಕೆಯೂ ಆಗಿದೆ. ಕೂಡಲೇ ವಿಳಂಬ ಮಾಡದೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಧರ್ಮಸ್ಥಳದಲ್ಲಿ ಎನ್‍ಐಎ ತನಿಖೆ ಆಗಬೇಕು ಎಂಬುದು ಸಮಸ್ತ ಹಿಂದೂಗಳ ನಿಲುವಾಗಿದೆ. ಯಾಕೆಂದರೆ ಅಲ್ಲಿ ಹಿಂದೂ ಕೇಂದ್ರದ ವಿರುದ್ಧ ಷಡ್ಯಂತ್ರ ಆಗುತ್ತಿದೆ. ಹಿಂದೂ ಪರಂಪರೆಗೆ ಧಕ್ಕೆಯಾಗುವ ಯಾವುದೇ ನಿರ್ಧಾರ ಸರ್ಕಾರ ತೆಗೆದುಕೊಳ್ಳಬಾರದು ಎಂದು ಮನವಿ ಮಾಡಿದರು.

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡುವವರ ವಿರುದ್ಧ ಯಾಕೆ ಎಫ್‍ಐಆರ್ ಹಾಕಲಿಲ್ಲ? ಈ ವಿಚಾರದಲ್ಲಿ ಇನ್ನೂ ಎಷ್ಟು ದಿನ ಹುಚ್ಚಾಟ ಮುಂದುವರಿಸಿಕೊಂಡು ಹೋಗುತ್ತೀರಿ? ಎನ್‍ಐಎ ಅಥವಾ ಸಿಬಿಐ ತನಿಖೆಯಾದರೆ ತಪ್ಪೇನಿಲ್ಲ ಎಂದು ಅಭಿಪ್ರಾಯಪಟ್ಟರು.

ಮೈಸೂರಿನ ಚಾಮುಂಡಿ ಬೆಟ್ಟ ಎಲ್ಲರಿಗೂ ಸೇರಿದ್ದು ಎಂಬ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಯನ್ನು ಖಂಡಿಸಿದ ವಿಜಯೇಂದ್ರ ಕೂಡಲೇ ಅವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು. ಗಾಂಧಿ ಕುಟುಂಬಕ್ಕೆ ಖುಷಿಪಡಿಸಲು ಈ ರೀತಿಯ ಹೇಳಿಕೆ ಕೊಟ್ಟಿದ್ದಾರೆ. ಹಿಂದೂಗಳಿಗೆ ಅಪಮಾನ ಮಾಡಿರುವುದರಿಂದ ಈ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಆಕ್ಷೇಪಿಸಿದರು.

ಏನಾದರೂ ಹೇಳಿ ಹಿಂದೂಗಳಿಗೆ ಅಪಮಾನ ಮಾಡುತ್ತೀರಿ ಎಂದರೆ ಭಗವಂತ ಮೆಚ್ಚುವುದಿಲ್ಲ. ದೆಹಲಿಯಿಂದ ಒತ್ತಡ ಬಂದಿದ್ದಕ್ಕೆ ನಮಸ್ತೆ ಸದಾ ವತ್ಸಲೆ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಿದರು. ಇದು ಕಾಂಗ್ರೆಸ್‍ನ ಒಡೆದಾಳುವ ನೀತಿ ಎಂದು ಟೀಕಿಸಿದರು.

ಧರ್ಮಸ್ಥಳ ವಿಚಾರದಲ್ಲಿ ಅಷ್ಟೊಂದು ಅಪಪ್ರಚಾರ ನಡೆಯುತ್ತಿದ್ದರೂ ಸುಮ್ಮನಿದ್ದಾರೆ. ಪದೇ ಪದೇ ಹಿಂದೂಗಳ ಭಾವನೆಗಳಿಗೆ ಕಾಂಗ್ರೆಸ್‍ನವರು ಧಕ್ಕೆ ತರುತ್ತಿದ್ದಾರೆ. ತಕ್ಷಣ ಡಿಕೆಶಿ ಅವರು ತಮ್ಮ ಹೇಳಿಕೆ ವಾಪಸ್ ಪಡೆದು ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದರು.

ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಕ್ ಅವರನ್ನು ಆಹ್ವಾನಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಬಾನು ಮುಷ್ತಾಕ್ ಜೊತೆ ದೀಪಾ ಬಸ್ತಿಗೂ ಬೂಕರ್ ಪ್ರಶಸ್ತಿ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾನು ಮುಷ್ತಾಕ್ ಅವರಿಗೆ ಮಾತ್ರ ಕರೆದು ದೀಪಾ ಬಸ್ತಿಯವರನ್ನು ಕರೆದಿಲ್ಲ. ದೀಪಾ ಬಸ್ತಿ ಅವರನ್ನೂ ಸಿಎಂ ಕರೆಯಬೇಕಿತ್ತು. ಹಾಗಾದರೆ ಸಿಎಂ ಅವರ ಅಜೆಂಡಾ ಏನು? ಎಂದು ಪ್ರಶ್ನಿಸಿದರು.

ದೀಪಾ ಬಸ್ತಿ ಅವರನ್ನು ಯಾಕೆ ಆಹ್ವಾನ ಕೊಡಲು ಸಾಧ್ಯವಾಗಲಿಲ್ಲ ಎಂಬುದಕ್ಕೆ ಸಿಎಂ, ಡಿಸಿಎಂ ಕೂಡ ಸ್ಪಷ್ಟಪಡಿಸಬೇಕು. ಬಾನು ಮುಷ್ತಾಕ್ ಅವರನ್ನು ಮಾತ್ರ ಕರೆದ ಹಿಂದೆ ಉದ್ದೇಶ ಇದೆಯೋ? ದುರುದ್ದೇಶ ಇದೆಯೋ?, ಸಿಎಂ ಅವರು ಬಾನು ಮುಷ್ತಾಕ್ ಆಯ್ಕೆ ಯಾಕೆಂದು ಸಿಎಂ ಸ್ಪಷ್ಟ ಪಡಿಸಬೇಕು. ಒಬ್ಬರನ್ನೇ ಕರೆಯಬೇಕೆಂಬ ಆಲೋಚನೆ ಬಂದಿದ್ದು ಯಾಕೆ ಎಂದು ವಿಜಯೇಂದ್ರ ಪ್ರಶ್ನಿಸಿದರು.

ಆಂದೋಲನ ಡೆಸ್ಕ್

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

2 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

2 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

3 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

6 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

6 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

6 hours ago