ರಾಜ್ಯ

ಧರ್ಮಸ್ಥಳ ಪ್ರಕರಣವನ್ನು ಎನ್‌ಐಎ ಅಥವಾ ಸಿಬಿಐಗೆ ವಹಿಸಬೇಕು: ವಿಜಯೇಂದ್ರ ಆಗ್ರಹ

ಬೆಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದ ಭಾವನೆಗಳಿಗೆ ಧಕ್ಕೆಯಾಗಿರುವ ಹಿನ್ನೆಲೆಯಲ್ಲಿ ಪಿತೂರಿ ನಡೆಸಿರುವವರನ್ನು ಪತ್ತೆ ಹಚ್ಚಲು ರಾಜ್ಯ ಸರ್ಕಾರ ತಕ್ಷಣವೇ ರಾಷ್ಟ್ರೀಯ ತನಿಖಾದಳ(ಎನ್‍ಐಎ)ಕ್ಕೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಈ ಪ್ರಕರಣದ ಹಿಂದೆ ಅಂತಾರಾಷ್ಟ್ರೀಯ ಕೈವಾಡ ಇರುವುದನ್ನು ಅಲ್ಲಗೆಳೆಯುವಂತಿಲ್ಲ. ವ್ಯವಸ್ಥಿತವಾದ ಪಿತೂರಿ ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಎನ್‍ಐಎಗೆ ಇಲ್ಲವೇ ಸಿಬಿಐಗೆ ವಹಿಸಬೇಕು. ಎಸ್‍ಐಟಿಯಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದು ಹೇಳಿದರು.

ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ಇಲ್ಲವೇ ಎನ್‍ಐಎಗೆ ವಹಿಸಬೇಕೆಂಬುದು ಕೇವಲ ಬಿಜೆಪಿ ಒತ್ತಾಯವಲ್ಲ. ಸಮಸ್ತ ಹಿಂದೂಗಳ ಬೇಡಿಕೆಯೂ ಆಗಿದೆ. ಕೂಡಲೇ ವಿಳಂಬ ಮಾಡದೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಧರ್ಮಸ್ಥಳದಲ್ಲಿ ಎನ್‍ಐಎ ತನಿಖೆ ಆಗಬೇಕು ಎಂಬುದು ಸಮಸ್ತ ಹಿಂದೂಗಳ ನಿಲುವಾಗಿದೆ. ಯಾಕೆಂದರೆ ಅಲ್ಲಿ ಹಿಂದೂ ಕೇಂದ್ರದ ವಿರುದ್ಧ ಷಡ್ಯಂತ್ರ ಆಗುತ್ತಿದೆ. ಹಿಂದೂ ಪರಂಪರೆಗೆ ಧಕ್ಕೆಯಾಗುವ ಯಾವುದೇ ನಿರ್ಧಾರ ಸರ್ಕಾರ ತೆಗೆದುಕೊಳ್ಳಬಾರದು ಎಂದು ಮನವಿ ಮಾಡಿದರು.

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡುವವರ ವಿರುದ್ಧ ಯಾಕೆ ಎಫ್‍ಐಆರ್ ಹಾಕಲಿಲ್ಲ? ಈ ವಿಚಾರದಲ್ಲಿ ಇನ್ನೂ ಎಷ್ಟು ದಿನ ಹುಚ್ಚಾಟ ಮುಂದುವರಿಸಿಕೊಂಡು ಹೋಗುತ್ತೀರಿ? ಎನ್‍ಐಎ ಅಥವಾ ಸಿಬಿಐ ತನಿಖೆಯಾದರೆ ತಪ್ಪೇನಿಲ್ಲ ಎಂದು ಅಭಿಪ್ರಾಯಪಟ್ಟರು.

ಮೈಸೂರಿನ ಚಾಮುಂಡಿ ಬೆಟ್ಟ ಎಲ್ಲರಿಗೂ ಸೇರಿದ್ದು ಎಂಬ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಯನ್ನು ಖಂಡಿಸಿದ ವಿಜಯೇಂದ್ರ ಕೂಡಲೇ ಅವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು. ಗಾಂಧಿ ಕುಟುಂಬಕ್ಕೆ ಖುಷಿಪಡಿಸಲು ಈ ರೀತಿಯ ಹೇಳಿಕೆ ಕೊಟ್ಟಿದ್ದಾರೆ. ಹಿಂದೂಗಳಿಗೆ ಅಪಮಾನ ಮಾಡಿರುವುದರಿಂದ ಈ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಆಕ್ಷೇಪಿಸಿದರು.

ಏನಾದರೂ ಹೇಳಿ ಹಿಂದೂಗಳಿಗೆ ಅಪಮಾನ ಮಾಡುತ್ತೀರಿ ಎಂದರೆ ಭಗವಂತ ಮೆಚ್ಚುವುದಿಲ್ಲ. ದೆಹಲಿಯಿಂದ ಒತ್ತಡ ಬಂದಿದ್ದಕ್ಕೆ ನಮಸ್ತೆ ಸದಾ ವತ್ಸಲೆ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಿದರು. ಇದು ಕಾಂಗ್ರೆಸ್‍ನ ಒಡೆದಾಳುವ ನೀತಿ ಎಂದು ಟೀಕಿಸಿದರು.

ಧರ್ಮಸ್ಥಳ ವಿಚಾರದಲ್ಲಿ ಅಷ್ಟೊಂದು ಅಪಪ್ರಚಾರ ನಡೆಯುತ್ತಿದ್ದರೂ ಸುಮ್ಮನಿದ್ದಾರೆ. ಪದೇ ಪದೇ ಹಿಂದೂಗಳ ಭಾವನೆಗಳಿಗೆ ಕಾಂಗ್ರೆಸ್‍ನವರು ಧಕ್ಕೆ ತರುತ್ತಿದ್ದಾರೆ. ತಕ್ಷಣ ಡಿಕೆಶಿ ಅವರು ತಮ್ಮ ಹೇಳಿಕೆ ವಾಪಸ್ ಪಡೆದು ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದರು.

ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಕ್ ಅವರನ್ನು ಆಹ್ವಾನಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಬಾನು ಮುಷ್ತಾಕ್ ಜೊತೆ ದೀಪಾ ಬಸ್ತಿಗೂ ಬೂಕರ್ ಪ್ರಶಸ್ತಿ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾನು ಮುಷ್ತಾಕ್ ಅವರಿಗೆ ಮಾತ್ರ ಕರೆದು ದೀಪಾ ಬಸ್ತಿಯವರನ್ನು ಕರೆದಿಲ್ಲ. ದೀಪಾ ಬಸ್ತಿ ಅವರನ್ನೂ ಸಿಎಂ ಕರೆಯಬೇಕಿತ್ತು. ಹಾಗಾದರೆ ಸಿಎಂ ಅವರ ಅಜೆಂಡಾ ಏನು? ಎಂದು ಪ್ರಶ್ನಿಸಿದರು.

ದೀಪಾ ಬಸ್ತಿ ಅವರನ್ನು ಯಾಕೆ ಆಹ್ವಾನ ಕೊಡಲು ಸಾಧ್ಯವಾಗಲಿಲ್ಲ ಎಂಬುದಕ್ಕೆ ಸಿಎಂ, ಡಿಸಿಎಂ ಕೂಡ ಸ್ಪಷ್ಟಪಡಿಸಬೇಕು. ಬಾನು ಮುಷ್ತಾಕ್ ಅವರನ್ನು ಮಾತ್ರ ಕರೆದ ಹಿಂದೆ ಉದ್ದೇಶ ಇದೆಯೋ? ದುರುದ್ದೇಶ ಇದೆಯೋ?, ಸಿಎಂ ಅವರು ಬಾನು ಮುಷ್ತಾಕ್ ಆಯ್ಕೆ ಯಾಕೆಂದು ಸಿಎಂ ಸ್ಪಷ್ಟ ಪಡಿಸಬೇಕು. ಒಬ್ಬರನ್ನೇ ಕರೆಯಬೇಕೆಂಬ ಆಲೋಚನೆ ಬಂದಿದ್ದು ಯಾಕೆ ಎಂದು ವಿಜಯೇಂದ್ರ ಪ್ರಶ್ನಿಸಿದರು.

ಆಂದೋಲನ ಡೆಸ್ಕ್

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

5 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

5 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

5 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

5 hours ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

5 hours ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

6 hours ago