ರಾಜ್ಯ

ಉತ್ಸವಕ್ಕೆ ಬಂದ ಆನೆಗೆ ಹೆರಿಗೆ: ಶಿವಮೊಗ್ಗ ಜಂಬೂ ಸವಾರಿ ರದ್ದು!

ಶಿವಮೊಗ್ಗ : ಮೈಸೂರು ದಸರ ನಂತರ ಆನೆಗಳ ಮೂಲಕ ನಗರದಲ್ಲಿ ಜಂಬೂಸವಾರಿ ಮಾಡುವಂತಹ ದೃಶ್ಯ ಕಂಡು ಬರುವುದು ಶಿವಮೊಗ್ಗದಲ್ಲಿ ಮಾತ್ರ.

ದಶಕಗಳ ಹಿಂದಿನಿಂದಲೂ ಅದ್ದೂರಿ ದಸರಾ ಆಚರಣೆ ಮಾಡಿಕೊಂಡು ಬರುತ್ತಿರುವ ಶಿವಮೊಗ್ಗ ನಗರ ಪಾಲಿಕೆ ಹಾಗೂ ಜಿಲ್ಲಾಡಳಿತ ಕೆಲ ವರ್ಷಗಳಿಂದ ದಸರಾ ಉತ್ಸವಕ್ಕೆ ಸಮೀಪದ ಸಕ್ರೆಬೈಲು ಆನೆ ಬಿಡಾರದಿಂದ ಆನೆಗಳನ್ನ ಕರೆಯಿಸಿ ಮೆರವಣಿಗೆ ಮಾಡಿಸುತ್ತಿದೆ.

ಇಲ್ಲಿಯೂ ಉತ್ಸವ ಮೂರ್ತಿಯನ್ನ ಮರದ ಅಂಬಾರಿಯಲ್ಲಿ ಹೊತ್ತು ಆನೆಗಳು ಇಂದು ಸಾಗಬೇಕಿತ್ತು. ಆದರೆ ಅರಣ್ಯ ಇಲಾಖೆಯ ಹೊಣೆಗೇಡಿತನದಿಂದ ಉತ್ಸವದಲ್ಲಿ ಭಾಗಿಯಾಗಲು ಬಂದಂತಹ ನೇತ್ರಾವತಿ ಆನೆ ಕಳೆದ ರಾತ್ರಿಯೇ ಹೆಣ್ಣು ಮರಿಗೆ ಜನ್ಮ ನೀಡಿದೆ. ಜಂಬೂ ಸವಾರಿಯೂ ರದ್ದಾಗಿದೆ.

ಉತ್ಸವ ಮೂರ್ತಿಯನ್ನ ತೆರೆದ ವಾಹನದಲ್ಲಿ ಸಾಗಿಸಲು ಸಿದ್ಧತೆ ನಡೆದಿದೆ. ಶಿವಮೊಗ್ಗ ದಸರಾ ಉತ್ಸವಕ್ಕೆ ಪಾಲ್ಗೊಳ್ಳಲು ಅನುಭವಿ ಆನೆ ಸಾಗರ ಜೊತೆ ನೇತ್ರಾವತಿ ಹಾಗೂ ಹೇಮಾವತಿ ಎಂಬ ಎರಡು ಆನೆಗಳನ್ನ ಅಣಿಮಾಡಲಾಗಿತ್ತು. ಸಾಗರ್‌ ಅಂಬಾರಿ ಹೊತ್ತರೆ, ಎರಡು ಆನೆಗಳು ಜೊತೆ ಸಾಗಬೇಕಿತ್ತು.

ಶಿವಮೊಗ್ಗ ನಗರದಿಂದ ಹದಿನೈದು ಕಿಲೋಮೀಟರ್‌ ದೂರದ ಸಕ್ರೆಬೈಲು ಆನೆ ಬಿಡಾರದಲ್ಲೇ ಈ ಸೂಚಿತ ಆನೆಗಳಿಗೆ ಹದಿನೈದು ದಿನ ತಾಲೀಮು ನಡೆಸಿ, ಕೆಲ ದಿನಗಳ ಹಿಂದೆ ನಗರಕ್ಕೆ ಕರೆತರಲಾಗಿತ್ತು. ವಾಸವಿ ಶಾಲಾ ಆವರಣದಲ್ಲಿ ಆನೆಗಳ ಆರೈಕೆ ನಡೆಸಲಾಗಿತ್ತು. ವೈಭವದ ದಸರಾ ತೋರಿಸಲು ಪಾಲಿಕೆಯಿಂದ ಲಕ್ಷಾಂತರ ರೂಪಾಯಿ ವ್ಯಯಿಸಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಅದೃಷ್ಟವೆಂಬಂತೆ ಸುಮಾರು ಮೂವತ್ತು ವರ್ಷದ ಹೆಣ್ಣಾನೆ ನೇತ್ರಾವತಿ ಆರೋಗ್ಯವಂತ ಹೆಣ್ಣು ಮರಿಗೆ ಜನ್ಮ ನೀಡಿದೆ.

ದುರಾದೃಷ್ಟಕ್ಕೆ ಅರಣ್ಯ ಇಲಾಖೆಯ ನಿರ್ಲಕ್ಷ್ಯ, ಬೇಜವಾಬ್ದಾರಿ ಹಾಗೂ ಹೊಣೆಗೇಡಿತನ ತೀವ್ರ ಮುಜುಗರ ಉಂಟು ಮಾಡಿದೆ. ದುರಂತ ಅಂದ್ರೆ ಅರಣ್ಯಾಧಿಕಾರಿಗಳು ಹಾಗೂ ಸಕ್ರೆಬೈಲು ಆನೆ ಆರೋಗ್ಯ ಕಾಪಾಡುವ ವೈದ್ಯ ವಿನಯ್‌ ಗೂ ಕೂಡ ಈ ಆನೆ ಎಷ್ಟು ತಿಂಗಳಿಂದ ಗರ್ಭ ಧರಿಸಿತ್ತು ಎಂದು ಗೊತ್ತಿಲ್ಲ. ಸಾಲದು ಎಂಬಂತೆ ಈ ತನಕ ಉನ್ನತ ಮಟ್ಟದಲ್ಲಿ ಆನೆಯ ಗರ್ಭಾವಸ್ಥೆ ಟೆಸ್ಟ್ ಮಾಡುವ ಯಾವುದೇ ಕೆಲಸಕ್ಕೆ ಇಲಾಖೆ ಮುಂದಾಗಿಲ್ಲ. ಇಂತಹ ಯಾವುದೇ ವರದಿಯೂ ಅವರ ಬಳಿ ಇಲ್ಲ.

ಆನೆಯನ್ನ ಹದಿನೈದು ದಿನ ತರಬೇತಿ ಹೆಸರಲ್ಲಿ ಆಯಾಸ ಮಾಡಿಸಿ, ಪಾಲಿಕೆ ಹಣದ ವೈಭೋಗಕ್ಕೆ ಅನಾಗರೀಕ ವರ್ತನೆ ತೋರಿದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಘಟನೆ ನಡೆದು ಕೆಲ ಘಂಟೆಗಳಲ್ಲಿ, ನೇತ್ರಾವತಿ ಆನೆಯನ್ನ ಸಕ್ರೆಬೈಲು ಕ್ಯಾಂಪ್‌ಗೆ ಶಿಫ್ಟ್‌ ಮಾಡಿಸಲಾಗಿದೆ. ಉಳಿದೆರಡು ಆನೆಗಳು ಇಲ್ಲೇ ಉಳಿದುಕೊಂಡಿದ್ದು ದಸರಾ ಉತ್ಸವದಲ್ಲಿ ಅಂಬಾರಿ ಹೊತ್ತ ವಾಹನದ ಅಕ್ಕ ಪಕ್ಕ ಹೆಜ್ಜೆ ಹಾಕಲಿವೆ.

andolanait

Recent Posts

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

26 mins ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

39 mins ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

1 hour ago

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

2 hours ago

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

2 hours ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

3 hours ago