ರಾಜ್ಯ

ಜಿಟಿ ಮಾಲ್‌ನಲ್ಲಿ ನಿನ್ನೆ ಅವಮಾನ ಮಾಡಿದ್ದ ರೈತನಿಗೆ ಇಂದು ಸನ್ಮಾನ

ಬೆಂಗಳೂರು : ಪಂಚೆ ಹಾಕಿದ್ದ ಕಾರಣ ಮಾಲ್‌ ಒಳಗೆ ಬಿಡದೇ ಅವಮಾನ ಮಾಡಿದ್ದ ರೈತ ಫಕೀರಪ್ಪನಿಗೆ ಜಿಟಿ ಮಾಲ್‌ನ ಸಿಬ್ಬಂದಿ ಮಾಲ್‌ ಒಳಗೆ ಕರೆದು ಸನ್ಮಾನ ಮಾಡಿದ್ದಾರೆ.

ನಿನ್ನೆ ನಗರದ ಪ್ರತಿಷ್ಠಿತ ಮಾಲ್‌ಗಳಲ್ಲಿ ಒಂದಾದ ಜಿಟಿ ಮಾಲ್‌ ನೋಡಲು ಬಂದಿದ್ದ ಉತ್ತರಕರ್ನಾಟಕದ ರೈತ ಫಕೀರಪ್ಪ ಪಂಚೆ ಧರಿಸಿದ್ದ ಕಾರಣ ಆಥ ಮತ್ತು ಆಥನ ಕುಟುಂಬವನ್ನು ಒಳಗೆ ಬಿಡದೆ ಅವಮಾನ ಮಾಡಲಾಗಿತ್ತು.

ಈ ವಿಚಾರ ತಿಳಿದು ಅನೇಕ ಸಂಘಟನೆಗಳು ಜಿಟಿ ಮಾಲ್‌ ರೈತನಿಗೆ ಅವಮಾನ ಮಾಡಿದ್ದಾರೆ ಎಂಬ ಕಾರಣದಿಂದ ಪ್ರತಿಭಟನೆ ನಡೆಸಿದ್ದರು.

ಆದರೆ ಇಂದು ತಮ್ಮ ತಪ್ಪನ್ನು ಅರಿತ ಮಾಲ್‌ ಸಿಬ್ಬಂಧಿ, ರೈತ ಫಕೀರಪ್ಪನನ್ನು ಮಾಲ್‌ಗೆ ಆಹ್ವಾನಿಸಿ ಸನ್ಮಾನ ಮಾಡುವ ಮೂಲಕ ಆಥನಲ್ಲಿ ಕ್ಷಮೆಯಾಚಿಸಿದ್ದಾರೆ.

ನಿನ್ನೆ ನಡೆದ ಘಟನೆ ಬಗ್ಗೆ ಫಕೀರಪ್ಪನ ಪತ್ನಿ ಮಾತನಾಡಿ, ನಿನ್ನೆ ನಮ್ಮನ್ನು ಅರ್ಧಗಂಟೆಯಿಂದ ಕಾಯಿಸಿದರು. ಮಾಲ್‌ ಒಳಗಡೆ ಬಿಡಲಿಲ್ಲ. ನನ್ನ ಗಂಡ ಪಂಚೆ ಹಾಕಿದ ಕಾರಣ ಮಾಲ್‌ ಒಳಗಡೆ ಬಿಡಲಿಲ್ಲ. ರಾಜ್ಯದ ಮುಖ್ಯಮಂತ್ರಿ ಕೂಡ ಪಂಚೆ ಹಾಕುತ್ತಾರೆ. ಅವರನ್ನು ಒಳಗಡೆ ಬಿಡುತ್ತಾರೆ. ಈ ಬೇದಭಾವ ಏಕೆ. ಈಗ ಅದೇ ಮಾಲ್‌ನವರು ನನ್ನ ಗಂಡನಿಗೆ ಸನ್ಮಾನ ಮಾಡಿದ್ದಾರೆ. ಎಲ್ಲಾ ದೇವರ ಕೃಪೆ ಎಂದು ರೈತ ಫಕೀರಪ್ಪನ ಪತ್ನಿ ಗಂಗ್ಮಾಳವ್ವ ತಿಳಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

10 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

11 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago