ಬೆಂಗಳೂರು : ಪಂಚೆ ಹಾಕಿದ್ದ ಕಾರಣ ಮಾಲ್ ಒಳಗೆ ಬಿಡದೇ ಅವಮಾನ ಮಾಡಿದ್ದ ರೈತ ಫಕೀರಪ್ಪನಿಗೆ ಜಿಟಿ ಮಾಲ್ನ ಸಿಬ್ಬಂದಿ ಮಾಲ್ ಒಳಗೆ ಕರೆದು ಸನ್ಮಾನ ಮಾಡಿದ್ದಾರೆ.
ನಿನ್ನೆ ನಗರದ ಪ್ರತಿಷ್ಠಿತ ಮಾಲ್ಗಳಲ್ಲಿ ಒಂದಾದ ಜಿಟಿ ಮಾಲ್ ನೋಡಲು ಬಂದಿದ್ದ ಉತ್ತರಕರ್ನಾಟಕದ ರೈತ ಫಕೀರಪ್ಪ ಪಂಚೆ ಧರಿಸಿದ್ದ ಕಾರಣ ಆಥ ಮತ್ತು ಆಥನ ಕುಟುಂಬವನ್ನು ಒಳಗೆ ಬಿಡದೆ ಅವಮಾನ ಮಾಡಲಾಗಿತ್ತು.
ಈ ವಿಚಾರ ತಿಳಿದು ಅನೇಕ ಸಂಘಟನೆಗಳು ಜಿಟಿ ಮಾಲ್ ರೈತನಿಗೆ ಅವಮಾನ ಮಾಡಿದ್ದಾರೆ ಎಂಬ ಕಾರಣದಿಂದ ಪ್ರತಿಭಟನೆ ನಡೆಸಿದ್ದರು.
ಆದರೆ ಇಂದು ತಮ್ಮ ತಪ್ಪನ್ನು ಅರಿತ ಮಾಲ್ ಸಿಬ್ಬಂಧಿ, ರೈತ ಫಕೀರಪ್ಪನನ್ನು ಮಾಲ್ಗೆ ಆಹ್ವಾನಿಸಿ ಸನ್ಮಾನ ಮಾಡುವ ಮೂಲಕ ಆಥನಲ್ಲಿ ಕ್ಷಮೆಯಾಚಿಸಿದ್ದಾರೆ.
ನಿನ್ನೆ ನಡೆದ ಘಟನೆ ಬಗ್ಗೆ ಫಕೀರಪ್ಪನ ಪತ್ನಿ ಮಾತನಾಡಿ, ನಿನ್ನೆ ನಮ್ಮನ್ನು ಅರ್ಧಗಂಟೆಯಿಂದ ಕಾಯಿಸಿದರು. ಮಾಲ್ ಒಳಗಡೆ ಬಿಡಲಿಲ್ಲ. ನನ್ನ ಗಂಡ ಪಂಚೆ ಹಾಕಿದ ಕಾರಣ ಮಾಲ್ ಒಳಗಡೆ ಬಿಡಲಿಲ್ಲ. ರಾಜ್ಯದ ಮುಖ್ಯಮಂತ್ರಿ ಕೂಡ ಪಂಚೆ ಹಾಕುತ್ತಾರೆ. ಅವರನ್ನು ಒಳಗಡೆ ಬಿಡುತ್ತಾರೆ. ಈ ಬೇದಭಾವ ಏಕೆ. ಈಗ ಅದೇ ಮಾಲ್ನವರು ನನ್ನ ಗಂಡನಿಗೆ ಸನ್ಮಾನ ಮಾಡಿದ್ದಾರೆ. ಎಲ್ಲಾ ದೇವರ ಕೃಪೆ ಎಂದು ರೈತ ಫಕೀರಪ್ಪನ ಪತ್ನಿ ಗಂಗ್ಮಾಳವ್ವ ತಿಳಿಸಿದರು.
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…