ಬೆಂಗಳೂರು : ಪಂಚೆ ಹಾಕಿದ್ದ ಕಾರಣ ಮಾಲ್ ಒಳಗೆ ಬಿಡದೇ ಅವಮಾನ ಮಾಡಿದ್ದ ರೈತ ಫಕೀರಪ್ಪನಿಗೆ ಜಿಟಿ ಮಾಲ್ನ ಸಿಬ್ಬಂದಿ ಮಾಲ್ ಒಳಗೆ ಕರೆದು ಸನ್ಮಾನ ಮಾಡಿದ್ದಾರೆ.
ನಿನ್ನೆ ನಗರದ ಪ್ರತಿಷ್ಠಿತ ಮಾಲ್ಗಳಲ್ಲಿ ಒಂದಾದ ಜಿಟಿ ಮಾಲ್ ನೋಡಲು ಬಂದಿದ್ದ ಉತ್ತರಕರ್ನಾಟಕದ ರೈತ ಫಕೀರಪ್ಪ ಪಂಚೆ ಧರಿಸಿದ್ದ ಕಾರಣ ಆಥ ಮತ್ತು ಆಥನ ಕುಟುಂಬವನ್ನು ಒಳಗೆ ಬಿಡದೆ ಅವಮಾನ ಮಾಡಲಾಗಿತ್ತು.
ಈ ವಿಚಾರ ತಿಳಿದು ಅನೇಕ ಸಂಘಟನೆಗಳು ಜಿಟಿ ಮಾಲ್ ರೈತನಿಗೆ ಅವಮಾನ ಮಾಡಿದ್ದಾರೆ ಎಂಬ ಕಾರಣದಿಂದ ಪ್ರತಿಭಟನೆ ನಡೆಸಿದ್ದರು.
ಆದರೆ ಇಂದು ತಮ್ಮ ತಪ್ಪನ್ನು ಅರಿತ ಮಾಲ್ ಸಿಬ್ಬಂಧಿ, ರೈತ ಫಕೀರಪ್ಪನನ್ನು ಮಾಲ್ಗೆ ಆಹ್ವಾನಿಸಿ ಸನ್ಮಾನ ಮಾಡುವ ಮೂಲಕ ಆಥನಲ್ಲಿ ಕ್ಷಮೆಯಾಚಿಸಿದ್ದಾರೆ.
ನಿನ್ನೆ ನಡೆದ ಘಟನೆ ಬಗ್ಗೆ ಫಕೀರಪ್ಪನ ಪತ್ನಿ ಮಾತನಾಡಿ, ನಿನ್ನೆ ನಮ್ಮನ್ನು ಅರ್ಧಗಂಟೆಯಿಂದ ಕಾಯಿಸಿದರು. ಮಾಲ್ ಒಳಗಡೆ ಬಿಡಲಿಲ್ಲ. ನನ್ನ ಗಂಡ ಪಂಚೆ ಹಾಕಿದ ಕಾರಣ ಮಾಲ್ ಒಳಗಡೆ ಬಿಡಲಿಲ್ಲ. ರಾಜ್ಯದ ಮುಖ್ಯಮಂತ್ರಿ ಕೂಡ ಪಂಚೆ ಹಾಕುತ್ತಾರೆ. ಅವರನ್ನು ಒಳಗಡೆ ಬಿಡುತ್ತಾರೆ. ಈ ಬೇದಭಾವ ಏಕೆ. ಈಗ ಅದೇ ಮಾಲ್ನವರು ನನ್ನ ಗಂಡನಿಗೆ ಸನ್ಮಾನ ಮಾಡಿದ್ದಾರೆ. ಎಲ್ಲಾ ದೇವರ ಕೃಪೆ ಎಂದು ರೈತ ಫಕೀರಪ್ಪನ ಪತ್ನಿ ಗಂಗ್ಮಾಳವ್ವ ತಿಳಿಸಿದರು.
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…
ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…
ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…