ರಾಜ್ಯ

ನಾಳೆ ವರ್ಷದ ಮೊದಲ ಕಂಕಣ ಸೂರ್ಯಗ್ರಹಣ: ಎಲ್ಲೆಲ್ಲಿ ಗೋಚರ?

ಬೆಂಗಳೂರು: ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ನಾಳೆ ಸಂಭವಿಸಲಿದೆ.. ಇದನ್ನ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ ಸೂರ್ಯಗ್ರಹಣ ಎಂಬ ಹೆಸರಿನಿಂದ ಕರೆಯಲಾಗುತ್ತದೆ.

ನಾಳೆ ಮಧ್ಯಾಹ್ನ 3:26ರ ವೇಳೆಗೆ ಗ್ರಹಣ ಪ್ರಾರಂಭವಾಗಿ ಸಂಜೆ 7:57ಕ್ಕೆ ಕೊನೆಗೊಳ್ಳಲಿದೆ. ಕಂಕಣ ಸೂರ್ಯಗ್ರಹಣ 2 ನಿಮಿಷ 20 ಸೆಕೆಂಡುಗಳ ವರೆಗೆ ಇರಲಿದೆ. ಸಂಪೂರ್ಣ ಸೂರ್ಯಗ್ರಹಣದ ವೇಳೆ ಸೂರ್ಯನ ಕೇಂದ್ರದ 96% ರಷ್ಟನ್ನು ಚಂದ್ರ ಆವರಿಸಲಿದೆ. ಆದ್ರೆ ಈ ಗ್ರಹಣ ಭಾರತದಲ್ಲಿ ಗೋಚರ ಆಗುವುದಿಲ್ಲ.

ನಾಳೆ ಮಧ್ಯಾಹ್ನ 3:26 ರ ವೇಳೆಗೆ ಗ್ರಹಣ ಪ್ರಾರಂಭವಾಗಿ ಸಂಜೆ 7:57 ಕ್ಕೆ ಕೊನೆಗೊಳ್ಳಲಿದೆ. ಸೂರ್ಯ ಕಂಕಣದ ರೀತಿ 2 ನಿಮಿಷ 20 ಸೆಕೆಂಡುಗಳವರೆಗೆ ಗ್ರಹಣದ ವೇಳೆ ಕಾಣಲಿದೆ. ಸಂಪೂರ್ಣ ಸೂರ್ಯಗ್ರಹಣದ ವೇಳೆ ಸೂರ್ಯನ ಕೇಂದ್ರದ 96% ರಷ್ಟನ್ನು ಚಂದ್ರ ಆವರಿಸಲಿದೆ. ಈ ಗ್ರಹಣ ಭಾರತದಲ್ಲಿ ಗೋಚರ ಆಗುವುದಿಲ್ಲ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಕಂಕಣ ಸೂರ್ಯಗ್ರಹಣದಿಂದ ಹಲವೆಡೆ ಧಾರ್ಮಿಕ ಆಚರಣೆ ನಡೆಸಲಾಗುತ್ತದೆ. ಚಂದ್ರ ತನ್ನ ಕಕ್ಷೆಯಲ್ಲಿ ಭೂಮಿಯಿಂದ ಅತ್ಯಂತ ದೂರದ ಬಿಂದುವಿನಲ್ಲಿ ಅಥವಾ ಹತ್ತಿರದಲ್ಲಿದ್ದಾಗ ಇಂತಹ ಗ್ರಹಣ ಸಂಭವಿಸುತ್ತದೆ ಎಂದು ನಾಸಾ ವಿಜ್ಞಾನಿಗಳು ವರ್ಣಿಸಿದ್ದಾರೆ. ಚಂದ್ರನು ಆಕಾಶದಲ್ಲಿ ಸ್ವಲ್ಪ ಚಿಕ್ಕದಾಗಿ ಕಾಣಿಸಿಕೊಳ್ಳಲಿದೆ. ಅದು ಸೂರ್ಯನನ್ನ ಸಂಪೂರ್ಣವಾಗಿ ಆವರಿಸಲು ಸಾಧ್ಯವಿಲ್ಲ. ಹಾಗಾಗಿ ಸಂಪೂರ್ಣ ಕತ್ತಲಾಗುವ ಬದಲಿಗೆ ವೀಕ್ಷಕರು ಸೂರ್ಯನ ಮುಂದೆ ಬಂದ ಚಂದ್ರನ ಗಾಢ ವೃತ್ತಾಕಾರದ ಸಿಲೂಯೆಟ್ (ಚಂದ್ರನ ಸುತ್ತ ಬೆಳಕು ಇರುವ ಮಾದರಿ) ಅನ್ನು ವೀಕ್ಷಿಸಬಹುದು. ಆಗ ಸೂರ್ಯನ ಬೆಳಕು ಉಂಗುರದ ಮಾದರಿಯಲ್ಲಿ ಗೋಚರಿಸುತ್ತದೆ. ಅದಕ್ಕಾಗಿ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ವಾರ್ಷಿಕ ಗ್ರಹಣದಲ್ಲಿ ಹಗಲು ಬೆಳಕಿನ ಆಟ ನಡೆಯುತ್ತದೆ ಎಂದಿದ್ದಾರೆ.

ಎಲ್ಲೆಲ್ಲಿ ಗೋಚರ?: 
ಅಂಟಾರ್ಟಿಕಾ, ದಕ್ಷಿಣ ಆಫ್ರಿಕಾದ ಪ್ರದೇಶದಲ್ಲಿ, ದಕ್ಷಿಣ ಆಫ್ರಿಕಾ, ಟಾಂಜಾನಿಯಾ, ಜಾಂಬಿಯಾ ಮತ್ತು ಜಿಂಬಾಬ್ವೆಯಂತಹ ದೇಶಗಳಲ್ಲಿ ಗೋಚರವಾಗಲಿದೆ. ಆಕಾಶ ವೀಕ್ಷಕರು ವಿಶೇಷ ವೀಕ್ಷಣಾ ಸಾಧನಗಳನ್ನ ಬಳಸಿಕೊಂಡು ಗ್ರಹಣ ವೀಕ್ಷಿಸಲಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ: ಕೆ.ಎನ್‌.ರಾಜಣ್ಣ

ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ…

5 mins ago

ರಾಜ್ಯ ರಾಜಕಾರಣಕ್ಕೆ ವಾಪಸ್‌ ಆಗುವ ಚಿಂತನೆ ಇಲ್ಲ: ವಿ.ಸೋಮಣ್ಣ

ಬೆಂಗಳೂರು: ನಾನು ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…

9 mins ago

ಮೈಸೂರು ಮುಡಾ ಹಗರಣ: ಹೊಸ ಬಾಂಬ್‌ ಸಿಡಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ರಾಜ್ಯ ಮುಖ್ಯ…

1 hour ago

ಗುಂಡಾಲ್‌ ಜಲಾಶಯದಲ್ಲಿ ಹುಲಿ ಶವ ಪತ್ತೆ ಪ್ರಕರಣ: ಸ್ಕೂಟರ್‌ ಕ್ಲಚ್‌ ವೈರ್‌ ಉರುಳಿಗೆ ವ್ಯಾಘ್ರ ಬಲಿ?

ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…

1 hour ago

ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್‌ಗೆ ಭೇಟಿ: ನೆತನ್ಯಾಹು ಘೋಷಣೆ

ಟೆಲ್‌ ಅವಿವ್:‌ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್‌ಗೆ ಪ್ರಯಾಣಿಸಲಿದ್ದಾರೆ ಎಂದು…

1 hour ago

ಹಲವು ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ ದಿಢೀರ್‌ ರದ್ದು?

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…

2 hours ago