ಬೆಂಗಳೂರು: ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ನಾಳೆ ಸಂಭವಿಸಲಿದೆ.. ಇದನ್ನ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ ಸೂರ್ಯಗ್ರಹಣ ಎಂಬ ಹೆಸರಿನಿಂದ ಕರೆಯಲಾಗುತ್ತದೆ.
ನಾಳೆ ಮಧ್ಯಾಹ್ನ 3:26ರ ವೇಳೆಗೆ ಗ್ರಹಣ ಪ್ರಾರಂಭವಾಗಿ ಸಂಜೆ 7:57ಕ್ಕೆ ಕೊನೆಗೊಳ್ಳಲಿದೆ. ಕಂಕಣ ಸೂರ್ಯಗ್ರಹಣ 2 ನಿಮಿಷ 20 ಸೆಕೆಂಡುಗಳ ವರೆಗೆ ಇರಲಿದೆ. ಸಂಪೂರ್ಣ ಸೂರ್ಯಗ್ರಹಣದ ವೇಳೆ ಸೂರ್ಯನ ಕೇಂದ್ರದ 96% ರಷ್ಟನ್ನು ಚಂದ್ರ ಆವರಿಸಲಿದೆ. ಆದ್ರೆ ಈ ಗ್ರಹಣ ಭಾರತದಲ್ಲಿ ಗೋಚರ ಆಗುವುದಿಲ್ಲ.
ನಾಳೆ ಮಧ್ಯಾಹ್ನ 3:26 ರ ವೇಳೆಗೆ ಗ್ರಹಣ ಪ್ರಾರಂಭವಾಗಿ ಸಂಜೆ 7:57 ಕ್ಕೆ ಕೊನೆಗೊಳ್ಳಲಿದೆ. ಸೂರ್ಯ ಕಂಕಣದ ರೀತಿ 2 ನಿಮಿಷ 20 ಸೆಕೆಂಡುಗಳವರೆಗೆ ಗ್ರಹಣದ ವೇಳೆ ಕಾಣಲಿದೆ. ಸಂಪೂರ್ಣ ಸೂರ್ಯಗ್ರಹಣದ ವೇಳೆ ಸೂರ್ಯನ ಕೇಂದ್ರದ 96% ರಷ್ಟನ್ನು ಚಂದ್ರ ಆವರಿಸಲಿದೆ. ಈ ಗ್ರಹಣ ಭಾರತದಲ್ಲಿ ಗೋಚರ ಆಗುವುದಿಲ್ಲ ಎಂದು ವಿಜ್ಞಾನಿಗಳು ಹೇಳಿದ್ದಾರೆ.
ಕಂಕಣ ಸೂರ್ಯಗ್ರಹಣದಿಂದ ಹಲವೆಡೆ ಧಾರ್ಮಿಕ ಆಚರಣೆ ನಡೆಸಲಾಗುತ್ತದೆ. ಚಂದ್ರ ತನ್ನ ಕಕ್ಷೆಯಲ್ಲಿ ಭೂಮಿಯಿಂದ ಅತ್ಯಂತ ದೂರದ ಬಿಂದುವಿನಲ್ಲಿ ಅಥವಾ ಹತ್ತಿರದಲ್ಲಿದ್ದಾಗ ಇಂತಹ ಗ್ರಹಣ ಸಂಭವಿಸುತ್ತದೆ ಎಂದು ನಾಸಾ ವಿಜ್ಞಾನಿಗಳು ವರ್ಣಿಸಿದ್ದಾರೆ. ಚಂದ್ರನು ಆಕಾಶದಲ್ಲಿ ಸ್ವಲ್ಪ ಚಿಕ್ಕದಾಗಿ ಕಾಣಿಸಿಕೊಳ್ಳಲಿದೆ. ಅದು ಸೂರ್ಯನನ್ನ ಸಂಪೂರ್ಣವಾಗಿ ಆವರಿಸಲು ಸಾಧ್ಯವಿಲ್ಲ. ಹಾಗಾಗಿ ಸಂಪೂರ್ಣ ಕತ್ತಲಾಗುವ ಬದಲಿಗೆ ವೀಕ್ಷಕರು ಸೂರ್ಯನ ಮುಂದೆ ಬಂದ ಚಂದ್ರನ ಗಾಢ ವೃತ್ತಾಕಾರದ ಸಿಲೂಯೆಟ್ (ಚಂದ್ರನ ಸುತ್ತ ಬೆಳಕು ಇರುವ ಮಾದರಿ) ಅನ್ನು ವೀಕ್ಷಿಸಬಹುದು. ಆಗ ಸೂರ್ಯನ ಬೆಳಕು ಉಂಗುರದ ಮಾದರಿಯಲ್ಲಿ ಗೋಚರಿಸುತ್ತದೆ. ಅದಕ್ಕಾಗಿ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ವಾರ್ಷಿಕ ಗ್ರಹಣದಲ್ಲಿ ಹಗಲು ಬೆಳಕಿನ ಆಟ ನಡೆಯುತ್ತದೆ ಎಂದಿದ್ದಾರೆ.
ಎಲ್ಲೆಲ್ಲಿ ಗೋಚರ?:
ಅಂಟಾರ್ಟಿಕಾ, ದಕ್ಷಿಣ ಆಫ್ರಿಕಾದ ಪ್ರದೇಶದಲ್ಲಿ, ದಕ್ಷಿಣ ಆಫ್ರಿಕಾ, ಟಾಂಜಾನಿಯಾ, ಜಾಂಬಿಯಾ ಮತ್ತು ಜಿಂಬಾಬ್ವೆಯಂತಹ ದೇಶಗಳಲ್ಲಿ ಗೋಚರವಾಗಲಿದೆ. ಆಕಾಶ ವೀಕ್ಷಕರು ವಿಶೇಷ ವೀಕ್ಷಣಾ ಸಾಧನಗಳನ್ನ ಬಳಸಿಕೊಂಡು ಗ್ರಹಣ ವೀಕ್ಷಿಸಲಿದ್ದಾರೆ.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…