ರಾಜ್ಯ

ನಾಳೆ ವರ್ಷದ ಮೊದಲ ಕಂಕಣ ಸೂರ್ಯಗ್ರಹಣ: ಎಲ್ಲೆಲ್ಲಿ ಗೋಚರ?

ಬೆಂಗಳೂರು: ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ನಾಳೆ ಸಂಭವಿಸಲಿದೆ.. ಇದನ್ನ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ ಸೂರ್ಯಗ್ರಹಣ ಎಂಬ ಹೆಸರಿನಿಂದ ಕರೆಯಲಾಗುತ್ತದೆ.

ನಾಳೆ ಮಧ್ಯಾಹ್ನ 3:26ರ ವೇಳೆಗೆ ಗ್ರಹಣ ಪ್ರಾರಂಭವಾಗಿ ಸಂಜೆ 7:57ಕ್ಕೆ ಕೊನೆಗೊಳ್ಳಲಿದೆ. ಕಂಕಣ ಸೂರ್ಯಗ್ರಹಣ 2 ನಿಮಿಷ 20 ಸೆಕೆಂಡುಗಳ ವರೆಗೆ ಇರಲಿದೆ. ಸಂಪೂರ್ಣ ಸೂರ್ಯಗ್ರಹಣದ ವೇಳೆ ಸೂರ್ಯನ ಕೇಂದ್ರದ 96% ರಷ್ಟನ್ನು ಚಂದ್ರ ಆವರಿಸಲಿದೆ. ಆದ್ರೆ ಈ ಗ್ರಹಣ ಭಾರತದಲ್ಲಿ ಗೋಚರ ಆಗುವುದಿಲ್ಲ.

ನಾಳೆ ಮಧ್ಯಾಹ್ನ 3:26 ರ ವೇಳೆಗೆ ಗ್ರಹಣ ಪ್ರಾರಂಭವಾಗಿ ಸಂಜೆ 7:57 ಕ್ಕೆ ಕೊನೆಗೊಳ್ಳಲಿದೆ. ಸೂರ್ಯ ಕಂಕಣದ ರೀತಿ 2 ನಿಮಿಷ 20 ಸೆಕೆಂಡುಗಳವರೆಗೆ ಗ್ರಹಣದ ವೇಳೆ ಕಾಣಲಿದೆ. ಸಂಪೂರ್ಣ ಸೂರ್ಯಗ್ರಹಣದ ವೇಳೆ ಸೂರ್ಯನ ಕೇಂದ್ರದ 96% ರಷ್ಟನ್ನು ಚಂದ್ರ ಆವರಿಸಲಿದೆ. ಈ ಗ್ರಹಣ ಭಾರತದಲ್ಲಿ ಗೋಚರ ಆಗುವುದಿಲ್ಲ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಕಂಕಣ ಸೂರ್ಯಗ್ರಹಣದಿಂದ ಹಲವೆಡೆ ಧಾರ್ಮಿಕ ಆಚರಣೆ ನಡೆಸಲಾಗುತ್ತದೆ. ಚಂದ್ರ ತನ್ನ ಕಕ್ಷೆಯಲ್ಲಿ ಭೂಮಿಯಿಂದ ಅತ್ಯಂತ ದೂರದ ಬಿಂದುವಿನಲ್ಲಿ ಅಥವಾ ಹತ್ತಿರದಲ್ಲಿದ್ದಾಗ ಇಂತಹ ಗ್ರಹಣ ಸಂಭವಿಸುತ್ತದೆ ಎಂದು ನಾಸಾ ವಿಜ್ಞಾನಿಗಳು ವರ್ಣಿಸಿದ್ದಾರೆ. ಚಂದ್ರನು ಆಕಾಶದಲ್ಲಿ ಸ್ವಲ್ಪ ಚಿಕ್ಕದಾಗಿ ಕಾಣಿಸಿಕೊಳ್ಳಲಿದೆ. ಅದು ಸೂರ್ಯನನ್ನ ಸಂಪೂರ್ಣವಾಗಿ ಆವರಿಸಲು ಸಾಧ್ಯವಿಲ್ಲ. ಹಾಗಾಗಿ ಸಂಪೂರ್ಣ ಕತ್ತಲಾಗುವ ಬದಲಿಗೆ ವೀಕ್ಷಕರು ಸೂರ್ಯನ ಮುಂದೆ ಬಂದ ಚಂದ್ರನ ಗಾಢ ವೃತ್ತಾಕಾರದ ಸಿಲೂಯೆಟ್ (ಚಂದ್ರನ ಸುತ್ತ ಬೆಳಕು ಇರುವ ಮಾದರಿ) ಅನ್ನು ವೀಕ್ಷಿಸಬಹುದು. ಆಗ ಸೂರ್ಯನ ಬೆಳಕು ಉಂಗುರದ ಮಾದರಿಯಲ್ಲಿ ಗೋಚರಿಸುತ್ತದೆ. ಅದಕ್ಕಾಗಿ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ವಾರ್ಷಿಕ ಗ್ರಹಣದಲ್ಲಿ ಹಗಲು ಬೆಳಕಿನ ಆಟ ನಡೆಯುತ್ತದೆ ಎಂದಿದ್ದಾರೆ.

ಎಲ್ಲೆಲ್ಲಿ ಗೋಚರ?: 
ಅಂಟಾರ್ಟಿಕಾ, ದಕ್ಷಿಣ ಆಫ್ರಿಕಾದ ಪ್ರದೇಶದಲ್ಲಿ, ದಕ್ಷಿಣ ಆಫ್ರಿಕಾ, ಟಾಂಜಾನಿಯಾ, ಜಾಂಬಿಯಾ ಮತ್ತು ಜಿಂಬಾಬ್ವೆಯಂತಹ ದೇಶಗಳಲ್ಲಿ ಗೋಚರವಾಗಲಿದೆ. ಆಕಾಶ ವೀಕ್ಷಕರು ವಿಶೇಷ ವೀಕ್ಷಣಾ ಸಾಧನಗಳನ್ನ ಬಳಸಿಕೊಂಡು ಗ್ರಹಣ ವೀಕ್ಷಿಸಲಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

6 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

6 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

6 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

7 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

8 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

16 hours ago