ರಾಜ್ಯ

ನಾಳೆ ವರ್ಷದ ಮೊದಲ ಕಂಕಣ ಸೂರ್ಯಗ್ರಹಣ: ಎಲ್ಲೆಲ್ಲಿ ಗೋಚರ?

ಬೆಂಗಳೂರು: ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ನಾಳೆ ಸಂಭವಿಸಲಿದೆ.. ಇದನ್ನ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ ಸೂರ್ಯಗ್ರಹಣ ಎಂಬ ಹೆಸರಿನಿಂದ ಕರೆಯಲಾಗುತ್ತದೆ.

ನಾಳೆ ಮಧ್ಯಾಹ್ನ 3:26ರ ವೇಳೆಗೆ ಗ್ರಹಣ ಪ್ರಾರಂಭವಾಗಿ ಸಂಜೆ 7:57ಕ್ಕೆ ಕೊನೆಗೊಳ್ಳಲಿದೆ. ಕಂಕಣ ಸೂರ್ಯಗ್ರಹಣ 2 ನಿಮಿಷ 20 ಸೆಕೆಂಡುಗಳ ವರೆಗೆ ಇರಲಿದೆ. ಸಂಪೂರ್ಣ ಸೂರ್ಯಗ್ರಹಣದ ವೇಳೆ ಸೂರ್ಯನ ಕೇಂದ್ರದ 96% ರಷ್ಟನ್ನು ಚಂದ್ರ ಆವರಿಸಲಿದೆ. ಆದ್ರೆ ಈ ಗ್ರಹಣ ಭಾರತದಲ್ಲಿ ಗೋಚರ ಆಗುವುದಿಲ್ಲ.

ನಾಳೆ ಮಧ್ಯಾಹ್ನ 3:26 ರ ವೇಳೆಗೆ ಗ್ರಹಣ ಪ್ರಾರಂಭವಾಗಿ ಸಂಜೆ 7:57 ಕ್ಕೆ ಕೊನೆಗೊಳ್ಳಲಿದೆ. ಸೂರ್ಯ ಕಂಕಣದ ರೀತಿ 2 ನಿಮಿಷ 20 ಸೆಕೆಂಡುಗಳವರೆಗೆ ಗ್ರಹಣದ ವೇಳೆ ಕಾಣಲಿದೆ. ಸಂಪೂರ್ಣ ಸೂರ್ಯಗ್ರಹಣದ ವೇಳೆ ಸೂರ್ಯನ ಕೇಂದ್ರದ 96% ರಷ್ಟನ್ನು ಚಂದ್ರ ಆವರಿಸಲಿದೆ. ಈ ಗ್ರಹಣ ಭಾರತದಲ್ಲಿ ಗೋಚರ ಆಗುವುದಿಲ್ಲ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಕಂಕಣ ಸೂರ್ಯಗ್ರಹಣದಿಂದ ಹಲವೆಡೆ ಧಾರ್ಮಿಕ ಆಚರಣೆ ನಡೆಸಲಾಗುತ್ತದೆ. ಚಂದ್ರ ತನ್ನ ಕಕ್ಷೆಯಲ್ಲಿ ಭೂಮಿಯಿಂದ ಅತ್ಯಂತ ದೂರದ ಬಿಂದುವಿನಲ್ಲಿ ಅಥವಾ ಹತ್ತಿರದಲ್ಲಿದ್ದಾಗ ಇಂತಹ ಗ್ರಹಣ ಸಂಭವಿಸುತ್ತದೆ ಎಂದು ನಾಸಾ ವಿಜ್ಞಾನಿಗಳು ವರ್ಣಿಸಿದ್ದಾರೆ. ಚಂದ್ರನು ಆಕಾಶದಲ್ಲಿ ಸ್ವಲ್ಪ ಚಿಕ್ಕದಾಗಿ ಕಾಣಿಸಿಕೊಳ್ಳಲಿದೆ. ಅದು ಸೂರ್ಯನನ್ನ ಸಂಪೂರ್ಣವಾಗಿ ಆವರಿಸಲು ಸಾಧ್ಯವಿಲ್ಲ. ಹಾಗಾಗಿ ಸಂಪೂರ್ಣ ಕತ್ತಲಾಗುವ ಬದಲಿಗೆ ವೀಕ್ಷಕರು ಸೂರ್ಯನ ಮುಂದೆ ಬಂದ ಚಂದ್ರನ ಗಾಢ ವೃತ್ತಾಕಾರದ ಸಿಲೂಯೆಟ್ (ಚಂದ್ರನ ಸುತ್ತ ಬೆಳಕು ಇರುವ ಮಾದರಿ) ಅನ್ನು ವೀಕ್ಷಿಸಬಹುದು. ಆಗ ಸೂರ್ಯನ ಬೆಳಕು ಉಂಗುರದ ಮಾದರಿಯಲ್ಲಿ ಗೋಚರಿಸುತ್ತದೆ. ಅದಕ್ಕಾಗಿ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ವಾರ್ಷಿಕ ಗ್ರಹಣದಲ್ಲಿ ಹಗಲು ಬೆಳಕಿನ ಆಟ ನಡೆಯುತ್ತದೆ ಎಂದಿದ್ದಾರೆ.

ಎಲ್ಲೆಲ್ಲಿ ಗೋಚರ?: 
ಅಂಟಾರ್ಟಿಕಾ, ದಕ್ಷಿಣ ಆಫ್ರಿಕಾದ ಪ್ರದೇಶದಲ್ಲಿ, ದಕ್ಷಿಣ ಆಫ್ರಿಕಾ, ಟಾಂಜಾನಿಯಾ, ಜಾಂಬಿಯಾ ಮತ್ತು ಜಿಂಬಾಬ್ವೆಯಂತಹ ದೇಶಗಳಲ್ಲಿ ಗೋಚರವಾಗಲಿದೆ. ಆಕಾಶ ವೀಕ್ಷಕರು ವಿಶೇಷ ವೀಕ್ಷಣಾ ಸಾಧನಗಳನ್ನ ಬಳಸಿಕೊಂಡು ಗ್ರಹಣ ವೀಕ್ಷಿಸಲಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

2 mins ago

ಕೊಡಗು ಜಿಲ್ಲೆಗೆ ಈ ಬಾರಿಯೂ ದೊರಕದ ಸಚಿವ ಸ್ಥಾನ

ನವೀನ್ ಡಿಸೋಜ ಶಾಸಕ ಎ.ಎಸ್.ಪೊನ್ನಣ್ಣಗೆ ಒಲಿದ ಡೆಪ್ಯೂಟಿ ಸ್ಪೀಕರ್ ಸ್ಥಾನ; ಕೊಡಗಿನ ಜನರ ಈ ಬಾರಿಯ ನಿರೀಕ್ಷೆಯೂ ಹುಸಿ ಮಡಿಕೇರಿ:…

5 mins ago

ಸಕ್ಕರೆ ನಾಡಿಗೆ ‘ಅಧಿಕಾರ’ದ ಸಿಹಿ, ಸಂಭ್ರಮ

ಬಿ.ಟಿ.ಮೋಹನ್ ಕುಮಾರ್ ಎನ್.ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿಗೆ ಸಚಿವ ಸ್ಥಾನ  ಮಂಡ್ಯ: ಡಿ.ಕೆ.ಶಿವಕುಮಾರ್ ನೇತೃತ್ವದ  ಸರ್ಕಾರದಲ್ಲಿ ಈ ಹಿಂದಿನ ಸಂಪುಟದಲ್ಲಿ ಸಚಿವರಾಗಿದ್ದ ಎನ್‌.ಚಲುವರಾಯಸ್ವಾಮಿ…

11 mins ago

ಡಿಕೆಶಿ ಸಂಪುಟ: ಕುಗ್ಗಿದ ಮೈಸೂರು ಜಿಲ್ಲೆ ಪ್ರಾಬಲ್ಯ

ಕೆ.ಬಿ. ರಮೇಶನಾಯಕ ಸಿದ್ದರಾಮಯ್ಯ ಸಂಪುಟದಲ್ಲಿ ೮ ವರ್ಷವೂ ಸಚಿವರಾಗಿದ್ದ ಡಾ.ಎಚ್‌ಸಿಎಂ ಹೊರಕ್ಕೆ ಪಿರಿಯಾಪಟ್ಟಣ ಕ್ಷೇತ್ರದ ಕೆ. ವೆಂಕಟೇಶ್‌ಗೂ ಕೊಕ್ ಮೈಸೂರು:…

17 mins ago

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

1 day ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

1 day ago