ರಾಜ್ಯ

ಉದ್ಯಾನ ನಗರಿಯಲ್ಲಿ ಚೊಚ್ಚಲ ಕಂಬಳ

ಬೆಂಗಳೂರು: ರಾಜಧಾನಿಯಲ್ಲಿ ನಡೆಯಲಿರುವ ಮೊಟ್ಟಮೊದಲ ಕಂಬಳಕ್ಕೆ ವೇದಿಕೆ ಸಿದ್ಧಗೊಂಡಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್‌ ೨೫ಮತ್ತು ೨೬ ಎರಡು ದಿನಗಳ ಕಾಳ ಕಾಯಕ್ರಮವನ್ನಿಉ ಹಮ್ಮಿಕೊಳ್ಳಲಾಗಿದೆ.
ಕಂಬಳದ ಹಿನ್ನೆಲೆಯಲ್ಲಿ ಗುರುವಾರ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಯಿತು. ಇಂದು ಬೆಳಗ್ಗೆ 10 ಗಂಟೆಗೆ ವೇದಿಕೆ ಕಾರ್ಯಕ್ರಮ ಉದ್ಘಾಟನೆ ಆಗಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ನಾಳೆ(ನವೆಂಬರ್ 25) ಸಂಜೆ 3:30 ಕ್ಕೆ ಸಿಎಂ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಕಂಬಳ ಉದ್ಘಾಟನೆ ಮಾಡಲಿದ್ದಾರೆ. ನಿನ್ನೆ ಎರಡು ಜೋಡಿ ಕೋಣಗಳು ಮಾತ್ರ ಬಂದಿದ್ದು, ಕಂಬಳದ ಕೆರೆಗೆ ಪೂಜೆ ಸಲ್ಲಿಸಿ, ಕೋಣಗಳನ್ನ ಓಡಿಸಿ ರಿಹರ್ಸಲ್ ಮಾಡಲಾಯ್ತು. 200ಕ್ಕೂ ಹೆಚ್ಚು ಕೋಣಗಳು ಕಂಬಳದಲ್ಲಿ ಭಾಗವಹಿಸಲಿದ್ದು, 157 ಮೀಟರ್ ಉದ್ದ, 8 ಮೀಟರ್ ಅಗಲದ ರಾಜಮಾಹಾರಾಜ ಹೆಸರಿನ ಟ್ರ್ಯಾಕ್​ನಲ್ಲಿ ಓಡಲಿವೆ.

ಕಂಬಳಕ್ಕೆ ಸಕಲ ಸಿದ್ಧತೆ:
ಅರಮನೆ ಮೈದಾನದ ಆವರಣದಲ್ಲಿ ಸಿಸಿ ಕ್ಯಾಮರಾಗಳ ಕಣ್ಗಾವಲು ಹಾಕಲಾಗಿದೆ. ಇರುವ ಶೌಚಾಲಯಗಳ ಜತೆಗೆ 12 ತಾತ್ಕಾಲಿಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಎಲ್ಲೆಡೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಕೋಣಗಳಿಗೆ ಟೆಂಟ್‌ಗಳನ್ನು ಹಾಕಲಾಗಿದೆ. ವಾಹನಗಳ ಪಾರ್ಕಿಂಗ್‌ಗೆ ಸೂಕ್ತ ಸ್ಥಳಾವಕಾಶ ನಿಗದಿಪಡಿಸಲಾಗಿದೆ. ಇದಕ್ಕಾಗಿ 8 ಕೋಟಿ ರೂಪಾಯಿಗೂ ಹೆಚ್ಚು ಹಣ ಖರ್ಚು ಮಾಡಲಾಗುತ್ತಿದೆ. ರಾತ್ರಿಯೂ ಕಂಬಳ ನಡೆಸಲು ಅನುಮತಿ ಕೊಡಿ ಎಂದು ಸರಕಾರವನ್ನು ಕೇಳಿದ್ದೇವೆ. ಒಂದು ವೇಳೆ ಅನುಮತಿ ಸಿಕ್ಕರೆ ರಾತ್ರಿಯೂ ಕಂಬಳ ಮಾಡುತ್ತೇವೆ. ಇಲ್ಲದಿದ್ದರೆ ರಾತ್ರಿ 12 ಗಂಟೆವರೆಗೆ ನಡೆಸಲಾಗುವುದು ಎಂದು ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಪುತ್ತೂರಿನ ಶಾಸಕರಾದ ಅಶೋಕ್‌ ಕುಮಾರ್‌ ರೈ ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಉಚಿತ ಪ್ರವೇಶ:
ಕಂಬಳ ವೀಕ್ಷಿಸಲು ಬರುವವರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಸುಮಾರು 2 ಸಾವಿರ ಮಂದಿ ಕೂತು ವೀಕ್ಷಣೆ ಮಾಡುವಂತಹ ಗ್ಯಾಲರಿ ಮತ್ತು 25 ರಿಂದ 30 ಸಾವಿರ ಜನರು ನಿಂತು ನೋಡುವ ವ್ಯವಸ್ಥೆ ಮಾಡಲಾಗಿದೆ. ಆಹಾರ ಮತ್ತಿತರ ಮಳಿಗೆಗಳ 150 ಕೌಂಟರ್‌ಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ಇಲ್ಲಿ ಹಣ ಕೊಟ್ಟು ಊಟ, ತಿಂಡಿಗಳನ್ನು ಸವಿಯಬಹುದು. ಎರಡು ದಿನಗಳಲ್ಲಿ ಸುಮಾರು 8 ಲಕ್ಷಕ್ಕೂ ಅಧಿಕ ಜನರು ಭಾಗಹಿಸುವ ನಿರೀಕ್ಷೆಯಿದೆ.

 

andolanait

Recent Posts

ಜೂಜಾಟ, ಮದ್ಯ ಅಕ್ರಮ ಮಾರಾಟಕ್ಕೆ ಲಕ್ಷ  ರೂ. ದಂಡ!

ಗುಂಡ್ಲುಪೇಟೆ: ಇತ್ತೀಚಿನ ದಿನಗಳಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಯುವಕರು, ವಯಸ್ಕರು ಮದ್ಯ ವ್ಯಸನ ಹಾಗೂ ಜೂಜಾಟಗಳಿಗೆ ಬಲಿಯಾಗುತ್ತಿರುವುದು ಹೆಚ್ಚಾಗುತ್ತಿದ್ದು ಹಾಗೂ ಅಶಾಂತಿಗೆ…

7 mins ago

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

7 hours ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

10 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

11 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

11 hours ago