ರಾಜ್ಯ

ಉದ್ಯಾನ ನಗರಿಯಲ್ಲಿ ಚೊಚ್ಚಲ ಕಂಬಳ

ಬೆಂಗಳೂರು: ರಾಜಧಾನಿಯಲ್ಲಿ ನಡೆಯಲಿರುವ ಮೊಟ್ಟಮೊದಲ ಕಂಬಳಕ್ಕೆ ವೇದಿಕೆ ಸಿದ್ಧಗೊಂಡಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್‌ ೨೫ಮತ್ತು ೨೬ ಎರಡು ದಿನಗಳ ಕಾಳ ಕಾಯಕ್ರಮವನ್ನಿಉ ಹಮ್ಮಿಕೊಳ್ಳಲಾಗಿದೆ.
ಕಂಬಳದ ಹಿನ್ನೆಲೆಯಲ್ಲಿ ಗುರುವಾರ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಯಿತು. ಇಂದು ಬೆಳಗ್ಗೆ 10 ಗಂಟೆಗೆ ವೇದಿಕೆ ಕಾರ್ಯಕ್ರಮ ಉದ್ಘಾಟನೆ ಆಗಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ನಾಳೆ(ನವೆಂಬರ್ 25) ಸಂಜೆ 3:30 ಕ್ಕೆ ಸಿಎಂ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಕಂಬಳ ಉದ್ಘಾಟನೆ ಮಾಡಲಿದ್ದಾರೆ. ನಿನ್ನೆ ಎರಡು ಜೋಡಿ ಕೋಣಗಳು ಮಾತ್ರ ಬಂದಿದ್ದು, ಕಂಬಳದ ಕೆರೆಗೆ ಪೂಜೆ ಸಲ್ಲಿಸಿ, ಕೋಣಗಳನ್ನ ಓಡಿಸಿ ರಿಹರ್ಸಲ್ ಮಾಡಲಾಯ್ತು. 200ಕ್ಕೂ ಹೆಚ್ಚು ಕೋಣಗಳು ಕಂಬಳದಲ್ಲಿ ಭಾಗವಹಿಸಲಿದ್ದು, 157 ಮೀಟರ್ ಉದ್ದ, 8 ಮೀಟರ್ ಅಗಲದ ರಾಜಮಾಹಾರಾಜ ಹೆಸರಿನ ಟ್ರ್ಯಾಕ್​ನಲ್ಲಿ ಓಡಲಿವೆ.

ಕಂಬಳಕ್ಕೆ ಸಕಲ ಸಿದ್ಧತೆ:
ಅರಮನೆ ಮೈದಾನದ ಆವರಣದಲ್ಲಿ ಸಿಸಿ ಕ್ಯಾಮರಾಗಳ ಕಣ್ಗಾವಲು ಹಾಕಲಾಗಿದೆ. ಇರುವ ಶೌಚಾಲಯಗಳ ಜತೆಗೆ 12 ತಾತ್ಕಾಲಿಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಎಲ್ಲೆಡೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಕೋಣಗಳಿಗೆ ಟೆಂಟ್‌ಗಳನ್ನು ಹಾಕಲಾಗಿದೆ. ವಾಹನಗಳ ಪಾರ್ಕಿಂಗ್‌ಗೆ ಸೂಕ್ತ ಸ್ಥಳಾವಕಾಶ ನಿಗದಿಪಡಿಸಲಾಗಿದೆ. ಇದಕ್ಕಾಗಿ 8 ಕೋಟಿ ರೂಪಾಯಿಗೂ ಹೆಚ್ಚು ಹಣ ಖರ್ಚು ಮಾಡಲಾಗುತ್ತಿದೆ. ರಾತ್ರಿಯೂ ಕಂಬಳ ನಡೆಸಲು ಅನುಮತಿ ಕೊಡಿ ಎಂದು ಸರಕಾರವನ್ನು ಕೇಳಿದ್ದೇವೆ. ಒಂದು ವೇಳೆ ಅನುಮತಿ ಸಿಕ್ಕರೆ ರಾತ್ರಿಯೂ ಕಂಬಳ ಮಾಡುತ್ತೇವೆ. ಇಲ್ಲದಿದ್ದರೆ ರಾತ್ರಿ 12 ಗಂಟೆವರೆಗೆ ನಡೆಸಲಾಗುವುದು ಎಂದು ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಪುತ್ತೂರಿನ ಶಾಸಕರಾದ ಅಶೋಕ್‌ ಕುಮಾರ್‌ ರೈ ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಉಚಿತ ಪ್ರವೇಶ:
ಕಂಬಳ ವೀಕ್ಷಿಸಲು ಬರುವವರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಸುಮಾರು 2 ಸಾವಿರ ಮಂದಿ ಕೂತು ವೀಕ್ಷಣೆ ಮಾಡುವಂತಹ ಗ್ಯಾಲರಿ ಮತ್ತು 25 ರಿಂದ 30 ಸಾವಿರ ಜನರು ನಿಂತು ನೋಡುವ ವ್ಯವಸ್ಥೆ ಮಾಡಲಾಗಿದೆ. ಆಹಾರ ಮತ್ತಿತರ ಮಳಿಗೆಗಳ 150 ಕೌಂಟರ್‌ಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ಇಲ್ಲಿ ಹಣ ಕೊಟ್ಟು ಊಟ, ತಿಂಡಿಗಳನ್ನು ಸವಿಯಬಹುದು. ಎರಡು ದಿನಗಳಲ್ಲಿ ಸುಮಾರು 8 ಲಕ್ಷಕ್ಕೂ ಅಧಿಕ ಜನರು ಭಾಗಹಿಸುವ ನಿರೀಕ್ಷೆಯಿದೆ.

 

andolanait

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

7 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago