ರಾಜ್ಯ

ಉದ್ಯಾನ ನಗರಿಯಲ್ಲಿ ಚೊಚ್ಚಲ ಕಂಬಳ

ಬೆಂಗಳೂರು: ರಾಜಧಾನಿಯಲ್ಲಿ ನಡೆಯಲಿರುವ ಮೊಟ್ಟಮೊದಲ ಕಂಬಳಕ್ಕೆ ವೇದಿಕೆ ಸಿದ್ಧಗೊಂಡಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್‌ ೨೫ಮತ್ತು ೨೬ ಎರಡು ದಿನಗಳ ಕಾಳ ಕಾಯಕ್ರಮವನ್ನಿಉ ಹಮ್ಮಿಕೊಳ್ಳಲಾಗಿದೆ.
ಕಂಬಳದ ಹಿನ್ನೆಲೆಯಲ್ಲಿ ಗುರುವಾರ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಯಿತು. ಇಂದು ಬೆಳಗ್ಗೆ 10 ಗಂಟೆಗೆ ವೇದಿಕೆ ಕಾರ್ಯಕ್ರಮ ಉದ್ಘಾಟನೆ ಆಗಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ನಾಳೆ(ನವೆಂಬರ್ 25) ಸಂಜೆ 3:30 ಕ್ಕೆ ಸಿಎಂ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಕಂಬಳ ಉದ್ಘಾಟನೆ ಮಾಡಲಿದ್ದಾರೆ. ನಿನ್ನೆ ಎರಡು ಜೋಡಿ ಕೋಣಗಳು ಮಾತ್ರ ಬಂದಿದ್ದು, ಕಂಬಳದ ಕೆರೆಗೆ ಪೂಜೆ ಸಲ್ಲಿಸಿ, ಕೋಣಗಳನ್ನ ಓಡಿಸಿ ರಿಹರ್ಸಲ್ ಮಾಡಲಾಯ್ತು. 200ಕ್ಕೂ ಹೆಚ್ಚು ಕೋಣಗಳು ಕಂಬಳದಲ್ಲಿ ಭಾಗವಹಿಸಲಿದ್ದು, 157 ಮೀಟರ್ ಉದ್ದ, 8 ಮೀಟರ್ ಅಗಲದ ರಾಜಮಾಹಾರಾಜ ಹೆಸರಿನ ಟ್ರ್ಯಾಕ್​ನಲ್ಲಿ ಓಡಲಿವೆ.

ಕಂಬಳಕ್ಕೆ ಸಕಲ ಸಿದ್ಧತೆ:
ಅರಮನೆ ಮೈದಾನದ ಆವರಣದಲ್ಲಿ ಸಿಸಿ ಕ್ಯಾಮರಾಗಳ ಕಣ್ಗಾವಲು ಹಾಕಲಾಗಿದೆ. ಇರುವ ಶೌಚಾಲಯಗಳ ಜತೆಗೆ 12 ತಾತ್ಕಾಲಿಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಎಲ್ಲೆಡೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಕೋಣಗಳಿಗೆ ಟೆಂಟ್‌ಗಳನ್ನು ಹಾಕಲಾಗಿದೆ. ವಾಹನಗಳ ಪಾರ್ಕಿಂಗ್‌ಗೆ ಸೂಕ್ತ ಸ್ಥಳಾವಕಾಶ ನಿಗದಿಪಡಿಸಲಾಗಿದೆ. ಇದಕ್ಕಾಗಿ 8 ಕೋಟಿ ರೂಪಾಯಿಗೂ ಹೆಚ್ಚು ಹಣ ಖರ್ಚು ಮಾಡಲಾಗುತ್ತಿದೆ. ರಾತ್ರಿಯೂ ಕಂಬಳ ನಡೆಸಲು ಅನುಮತಿ ಕೊಡಿ ಎಂದು ಸರಕಾರವನ್ನು ಕೇಳಿದ್ದೇವೆ. ಒಂದು ವೇಳೆ ಅನುಮತಿ ಸಿಕ್ಕರೆ ರಾತ್ರಿಯೂ ಕಂಬಳ ಮಾಡುತ್ತೇವೆ. ಇಲ್ಲದಿದ್ದರೆ ರಾತ್ರಿ 12 ಗಂಟೆವರೆಗೆ ನಡೆಸಲಾಗುವುದು ಎಂದು ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಪುತ್ತೂರಿನ ಶಾಸಕರಾದ ಅಶೋಕ್‌ ಕುಮಾರ್‌ ರೈ ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಉಚಿತ ಪ್ರವೇಶ:
ಕಂಬಳ ವೀಕ್ಷಿಸಲು ಬರುವವರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಸುಮಾರು 2 ಸಾವಿರ ಮಂದಿ ಕೂತು ವೀಕ್ಷಣೆ ಮಾಡುವಂತಹ ಗ್ಯಾಲರಿ ಮತ್ತು 25 ರಿಂದ 30 ಸಾವಿರ ಜನರು ನಿಂತು ನೋಡುವ ವ್ಯವಸ್ಥೆ ಮಾಡಲಾಗಿದೆ. ಆಹಾರ ಮತ್ತಿತರ ಮಳಿಗೆಗಳ 150 ಕೌಂಟರ್‌ಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ಇಲ್ಲಿ ಹಣ ಕೊಟ್ಟು ಊಟ, ತಿಂಡಿಗಳನ್ನು ಸವಿಯಬಹುದು. ಎರಡು ದಿನಗಳಲ್ಲಿ ಸುಮಾರು 8 ಲಕ್ಷಕ್ಕೂ ಅಧಿಕ ಜನರು ಭಾಗಹಿಸುವ ನಿರೀಕ್ಷೆಯಿದೆ.

 

andolanait

Recent Posts

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

2 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

4 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

5 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

5 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

5 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

9 hours ago