ರಾಜ್ಯ

ಇಬ್ಬರನ್ನು ಬಲಿ ಪಡೆದಿದ್ದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ

ಚಿಕ್ಕಮಗಳೂರು: ಶೃಂಗೇರಿಯ ಕೆರೆಮನೆ ಗ್ರಾಮದಲ್ಲಿ ಕಾಡಿಗೆ ಸೊಪ್ಪು ತರಲು ಹೋಗಿದ್ದವರನ್ನು ಬಲಿ ಪಡೆದಿದ್ದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ದುಬಾರೆ, ಹಾರಂಗಿ ಆನೆ ಶಿಬಿರಗಳಿಂದ ಸಾಕಾನೆಗಳನ್ನು ಬಳಸಿಕೊಂಡು ಪುಂಡಾನೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಏಕಲವ್ಯ ಆನೆಯ ನೇತೃತ್ವದಲ್ಲಿ ಪುಂಡಾನೆ ಸೆರೆಗೆ ಕಾರ್ಯಾಚರಣೆ ನಡೆಯಲಿದೆ.

ಅಕ್ಟೋಬರ್.‌31ರಂದು ಕಾಡಾನೆ ದಾಳಿಯಿಂದ ಸ್ಥಳದಲ್ಲೇ ಉಮೇಶ್‌ ಹಾಗೂ ಹರೀಶ್‌ ಎಂಬುವವರು ಮೃತಪಟ್ಟಿದ್ದರು. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ತೀವ್ರ ಅಸಮಾಧಾನ ಹೊರಹಾಕಿದ್ದರು.

ಈ ಹಿನ್ನೆಲೆಯಲ್ಲಿ ಪುಂಡಾನೆಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಖಡಕ್‌ ಆದೇಶ ಹೊರಡಿಸಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಕೈಗೊಳ್ಳಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಗೆಹಲೋತ್‌ ನಿರಾಕರಣೆ

ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…

8 mins ago

ಯುವಕರೇ, ನಿಯಮ ಪಾಲಿಸಿ ಜೀವ ಉಳಿಸಿ : ಎಸ್‌ಪಿ ಶೋಭಾರಾಣಿ ಮನವಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…

32 mins ago

ಕೊಕ್ಕರೆ ಬೆಳ್ಳೂರನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿಸಲು ಚಿಂತನೆ : ಶಾಸಕ ಉದಯ್‌

ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…

40 mins ago

ನೈಜ ಕೃಷಿಗೆ ಪ್ರೋತ್ಸಾಹ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

2 hours ago

ಮಹದೇಶ್ವರ ಬೆಟ್ಟ | ಪಾದಯಾತ್ರೆ, ದ್ವಿಚಕ್ರ ವಾಹನಕ್ಕೆ ತಾತ್ಕಾಲಿಕ ನಿರ್ಬಂಧ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ…

2 hours ago

ಮುಡುಕುತೊರೆ ಜಾತ್ರೆ : ಪೋಸ್ಟರ್ ಬಿಡುಗಡೆಗೊಳಿಸಿದ ಸಚಿವ ಎಚ್‌ಸಿಎಂ

ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…

2 hours ago