ಕನಕಗಿರಿ : ಶ್ರೇಷ್ಠತೆಯ ವ್ಯಸನದಿಂದ 58 ಲಕ್ಷ ಯಹೂದಿಗಳನ್ನು ಹತ್ಯೆ ಮಾಡಿದ ಹಿಟ್ಲರ್ ಕೊನೆಗೆ ಒಬ್ಬ ಹೇಡಿಯಂತೆ ಗುಂಡು ಹಾರಿಸಿಕೊಂಡು ಸತ್ತ. ಇಂಥಾ ಪರಿಸ್ಥಿತಿ ನಮ್ಮ ದೇಶದಲ್ಲಿ ಬರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.
ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕನಕಗಿರಿ ಉತ್ಸವವನ್ನು ಭವ್ಯವಾದ “ರಾಜಾ ಉಡಚಪ್ಪ ನಾಯಕ” ವೇದಿಕೆಯಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಇಲ್ಲಿ ಶ್ರೇಷ್ಠರು, ಕನಿಷ್ಠರು ಇಲ್ಲವೇ ಇಲ್ಲ. ತಮ್ಮನ್ನು ತಾವು ಶ್ರೇಷ್ಠರು ಎನ್ನುವವರು, ಮತ್ತೊಬ್ಬರನ್ನು ಕನಿಷ್ಠರು ಎನ್ನುವವರು ಮನುಷ್ಯರೇ ಅಲ್ಲ. ಈ ರೀತಿಯ ಶ್ರೇಷ್ಠತೆಯ ವ್ಯಸನವನ್ನು ಹೋಗಲಾಡಿಸಲು ಬಸವಣ್ಣ, ಅಂಬೇಡ್ಕರ್ ಹೋರಾಟ ಮಾಡಿದರು ಎಂದು ವಿವರಿಸಿದರು.
ಸಮಾಜದಲ್ಲಿ ಅಸಮಾನತೆ ಇದೆ. ಇದನ್ನು ಹೋಗಲಾಡಿಸಲು ಏನಾದ್ರೂ ಪ್ರಯತ್ನ ಮಾಡಿದ್ವಾ ಎನ್ನುವ ಕುರಿತು ಪ್ರತಿಯೊಬ್ಬರೂ ತಮ್ಮನ್ನು ಪ್ರಶ್ನಿಸಿಕೊಳ್ಳಬೇಕು ಎಂದರು.
ಚತುವರ್ಣವ್ಯವಸ್ಥೆ ರೂಪಿಸಿ ಒಬ್ಬರನ್ನು ಶ್ರೇಷ್ಠರು ಉಳಿದವರನ್ನು ಕನಿಷ್ಠರು ಎನ್ನುವ ವ್ಯವಸ್ಥೆ ರೂಪಿಸಿದರು. ಇದನ್ನೇ ಹಿಟ್ಲರ್ ಮತ್ತು ಮುಸಲೋನಿ ಜರ್ಮನಿಯಲ್ಲಿ ಮಾಡಿದ್ದು. ಕೊನೆಗೆ ಅವರಿಗೆ ಯಾವ ಗತಿ ಆಯ್ತು ಎಂದು ಇಡಿ ಮನುಕುಲ ನೋಡಿದೆ ಎಂದರು.
ನಾವು ಅಂಬೇಡ್ಕರ್, ಬುದ್ದ, ಬಸವ, ಕುವೆಂಪು ಮುಂತಾದವರ ವಿಚಾರಗಳನ್ನು ಹೆಚ್ಚೆಚ್ಚು ಪಾಲಿಸುತ್ತಾ ತಾರತಮ್ಯದ ಸಮಾಜವನ್ನು ಹೋಗಲಾಡಿಸಬೇಕು. ಶಿಕ್ಷಣದಿಂದ ವಂಚಿತರಾಗಿದ್ದ ಮಹಿಳೆಯರು, ಶೂದ್ರರಿಗೆ ಶಿಕ್ಷಣ ಸಿಕ್ಕಿದ್ದು ಇವರೆಲ್ಲಾ ಮಹನೀಯರ ಹೋರಾಟದಿಂದ.
ಈ ಚರಿತ್ರೆಯನ್ನು ನೆನಪಿಸುವುದಕ್ಕೇ ನಾವು ವಿಶ್ವ ವಿದ್ಯಾಲಯಕ್ಕೆ ಅಕ್ಕಮಹದೇವಿ ಹೆಸರು ಇಟ್ಟೆ. ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದೆ ಎನ್ನುತ್ತಾ ಸಮಾನತೆಯ ಹಾದಿಯಲ್ಲಿ ಸರ್ಕಾರ ಜಾರಿಗೆ ತಂದ ಹಲವು ಭಾಗ್ಯಗಳನ್ನು ವಿವರಿಸಿದರು.
ನಾವು ಯಾವತ್ತೂ ಸೀತಾರಾಮನ ಸಂಸ್ಕೃತಿಯವರು. ಸೀತೆ, ಲಕ್ಷ್ಮಣನನ್ನು ಬಿಟ್ಟು ರಾಮ ಯಾವತ್ತೂ ಒಂಟಿ ಅಲ್ಲ. ರಾಮನನ್ನು ಒಂಟಿ ಮಾಡುವುದಲ್ಲ. ಸಕುಂಟುಂಬ ಸಮೇತನಾದ ಸೀತಾರಾಮ ನಮ್ಮವ ಎಂದರು.
ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ರಾಯರೆಡ್ಡಿ, ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ರಾಘವೇಂದ್ರ ಹಿಟ್ನಾಳ್, ಜನಾರ್ಧನರೆಡ್ಡಿ, ದೊಡ್ಡನಗೌಡ ಪಾಟೀಲ್, ಇಕ್ಬಾಲ್ ಅನ್ಸಾರಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…