ಕನಕಗಿರಿ : ಶ್ರೇಷ್ಠತೆಯ ವ್ಯಸನದಿಂದ 58 ಲಕ್ಷ ಯಹೂದಿಗಳನ್ನು ಹತ್ಯೆ ಮಾಡಿದ ಹಿಟ್ಲರ್ ಕೊನೆಗೆ ಒಬ್ಬ ಹೇಡಿಯಂತೆ ಗುಂಡು ಹಾರಿಸಿಕೊಂಡು ಸತ್ತ. ಇಂಥಾ ಪರಿಸ್ಥಿತಿ ನಮ್ಮ ದೇಶದಲ್ಲಿ ಬರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.
ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕನಕಗಿರಿ ಉತ್ಸವವನ್ನು ಭವ್ಯವಾದ “ರಾಜಾ ಉಡಚಪ್ಪ ನಾಯಕ” ವೇದಿಕೆಯಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಇಲ್ಲಿ ಶ್ರೇಷ್ಠರು, ಕನಿಷ್ಠರು ಇಲ್ಲವೇ ಇಲ್ಲ. ತಮ್ಮನ್ನು ತಾವು ಶ್ರೇಷ್ಠರು ಎನ್ನುವವರು, ಮತ್ತೊಬ್ಬರನ್ನು ಕನಿಷ್ಠರು ಎನ್ನುವವರು ಮನುಷ್ಯರೇ ಅಲ್ಲ. ಈ ರೀತಿಯ ಶ್ರೇಷ್ಠತೆಯ ವ್ಯಸನವನ್ನು ಹೋಗಲಾಡಿಸಲು ಬಸವಣ್ಣ, ಅಂಬೇಡ್ಕರ್ ಹೋರಾಟ ಮಾಡಿದರು ಎಂದು ವಿವರಿಸಿದರು.
ಸಮಾಜದಲ್ಲಿ ಅಸಮಾನತೆ ಇದೆ. ಇದನ್ನು ಹೋಗಲಾಡಿಸಲು ಏನಾದ್ರೂ ಪ್ರಯತ್ನ ಮಾಡಿದ್ವಾ ಎನ್ನುವ ಕುರಿತು ಪ್ರತಿಯೊಬ್ಬರೂ ತಮ್ಮನ್ನು ಪ್ರಶ್ನಿಸಿಕೊಳ್ಳಬೇಕು ಎಂದರು.
ಚತುವರ್ಣವ್ಯವಸ್ಥೆ ರೂಪಿಸಿ ಒಬ್ಬರನ್ನು ಶ್ರೇಷ್ಠರು ಉಳಿದವರನ್ನು ಕನಿಷ್ಠರು ಎನ್ನುವ ವ್ಯವಸ್ಥೆ ರೂಪಿಸಿದರು. ಇದನ್ನೇ ಹಿಟ್ಲರ್ ಮತ್ತು ಮುಸಲೋನಿ ಜರ್ಮನಿಯಲ್ಲಿ ಮಾಡಿದ್ದು. ಕೊನೆಗೆ ಅವರಿಗೆ ಯಾವ ಗತಿ ಆಯ್ತು ಎಂದು ಇಡಿ ಮನುಕುಲ ನೋಡಿದೆ ಎಂದರು.
ನಾವು ಅಂಬೇಡ್ಕರ್, ಬುದ್ದ, ಬಸವ, ಕುವೆಂಪು ಮುಂತಾದವರ ವಿಚಾರಗಳನ್ನು ಹೆಚ್ಚೆಚ್ಚು ಪಾಲಿಸುತ್ತಾ ತಾರತಮ್ಯದ ಸಮಾಜವನ್ನು ಹೋಗಲಾಡಿಸಬೇಕು. ಶಿಕ್ಷಣದಿಂದ ವಂಚಿತರಾಗಿದ್ದ ಮಹಿಳೆಯರು, ಶೂದ್ರರಿಗೆ ಶಿಕ್ಷಣ ಸಿಕ್ಕಿದ್ದು ಇವರೆಲ್ಲಾ ಮಹನೀಯರ ಹೋರಾಟದಿಂದ.
ಈ ಚರಿತ್ರೆಯನ್ನು ನೆನಪಿಸುವುದಕ್ಕೇ ನಾವು ವಿಶ್ವ ವಿದ್ಯಾಲಯಕ್ಕೆ ಅಕ್ಕಮಹದೇವಿ ಹೆಸರು ಇಟ್ಟೆ. ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದೆ ಎನ್ನುತ್ತಾ ಸಮಾನತೆಯ ಹಾದಿಯಲ್ಲಿ ಸರ್ಕಾರ ಜಾರಿಗೆ ತಂದ ಹಲವು ಭಾಗ್ಯಗಳನ್ನು ವಿವರಿಸಿದರು.
ನಾವು ಯಾವತ್ತೂ ಸೀತಾರಾಮನ ಸಂಸ್ಕೃತಿಯವರು. ಸೀತೆ, ಲಕ್ಷ್ಮಣನನ್ನು ಬಿಟ್ಟು ರಾಮ ಯಾವತ್ತೂ ಒಂಟಿ ಅಲ್ಲ. ರಾಮನನ್ನು ಒಂಟಿ ಮಾಡುವುದಲ್ಲ. ಸಕುಂಟುಂಬ ಸಮೇತನಾದ ಸೀತಾರಾಮ ನಮ್ಮವ ಎಂದರು.
ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ರಾಯರೆಡ್ಡಿ, ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ರಾಘವೇಂದ್ರ ಹಿಟ್ನಾಳ್, ಜನಾರ್ಧನರೆಡ್ಡಿ, ದೊಡ್ಡನಗೌಡ ಪಾಟೀಲ್, ಇಕ್ಬಾಲ್ ಅನ್ಸಾರಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಕೊಡಗು : ವಾಹನ ತಪಾಸಣೆ (ಚೆಕಿಂಗ್) ನಡೆಸುತ್ತಿದ್ದ ಪೊಲೀಸರನ್ನು ಕಂಡು ಗಾಬರಿಯಾಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ,…
ಮೈಸೂರು : ನಾಗರಹೊಳೆ ಮತ್ತು ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನರಾರಂಭಿಸಿರುವುದನ್ನು ಖಂಡಿಸಿ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ನಗರದ ಅಶೋಕಪುರಂನಲ್ಲಿರುವ…
ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು 2ನೇ ಹಂತದ…
ಬೆಂಗಳೂರು: ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ…
ಉನ್ನಾವೋ: ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ಹಿಂಡು ದಾಳಿ ಮಾಡಿದ ಪರಿಣಾಮ 65 ವರ್ಷದ ಅಂಪೈರ್ ಸಾವನ್ನಪ್ಪಿದ್ದು, ಹಲವಾರು ಆಟಗಾರರು…