ಕನಕಗಿರಿ : ಶ್ರೇಷ್ಠತೆಯ ವ್ಯಸನದಿಂದ 58 ಲಕ್ಷ ಯಹೂದಿಗಳನ್ನು ಹತ್ಯೆ ಮಾಡಿದ ಹಿಟ್ಲರ್ ಕೊನೆಗೆ ಒಬ್ಬ ಹೇಡಿಯಂತೆ ಗುಂಡು ಹಾರಿಸಿಕೊಂಡು ಸತ್ತ. ಇಂಥಾ ಪರಿಸ್ಥಿತಿ ನಮ್ಮ ದೇಶದಲ್ಲಿ ಬರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.
ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕನಕಗಿರಿ ಉತ್ಸವವನ್ನು ಭವ್ಯವಾದ “ರಾಜಾ ಉಡಚಪ್ಪ ನಾಯಕ” ವೇದಿಕೆಯಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಇಲ್ಲಿ ಶ್ರೇಷ್ಠರು, ಕನಿಷ್ಠರು ಇಲ್ಲವೇ ಇಲ್ಲ. ತಮ್ಮನ್ನು ತಾವು ಶ್ರೇಷ್ಠರು ಎನ್ನುವವರು, ಮತ್ತೊಬ್ಬರನ್ನು ಕನಿಷ್ಠರು ಎನ್ನುವವರು ಮನುಷ್ಯರೇ ಅಲ್ಲ. ಈ ರೀತಿಯ ಶ್ರೇಷ್ಠತೆಯ ವ್ಯಸನವನ್ನು ಹೋಗಲಾಡಿಸಲು ಬಸವಣ್ಣ, ಅಂಬೇಡ್ಕರ್ ಹೋರಾಟ ಮಾಡಿದರು ಎಂದು ವಿವರಿಸಿದರು.
ಸಮಾಜದಲ್ಲಿ ಅಸಮಾನತೆ ಇದೆ. ಇದನ್ನು ಹೋಗಲಾಡಿಸಲು ಏನಾದ್ರೂ ಪ್ರಯತ್ನ ಮಾಡಿದ್ವಾ ಎನ್ನುವ ಕುರಿತು ಪ್ರತಿಯೊಬ್ಬರೂ ತಮ್ಮನ್ನು ಪ್ರಶ್ನಿಸಿಕೊಳ್ಳಬೇಕು ಎಂದರು.
ಚತುವರ್ಣವ್ಯವಸ್ಥೆ ರೂಪಿಸಿ ಒಬ್ಬರನ್ನು ಶ್ರೇಷ್ಠರು ಉಳಿದವರನ್ನು ಕನಿಷ್ಠರು ಎನ್ನುವ ವ್ಯವಸ್ಥೆ ರೂಪಿಸಿದರು. ಇದನ್ನೇ ಹಿಟ್ಲರ್ ಮತ್ತು ಮುಸಲೋನಿ ಜರ್ಮನಿಯಲ್ಲಿ ಮಾಡಿದ್ದು. ಕೊನೆಗೆ ಅವರಿಗೆ ಯಾವ ಗತಿ ಆಯ್ತು ಎಂದು ಇಡಿ ಮನುಕುಲ ನೋಡಿದೆ ಎಂದರು.
ನಾವು ಅಂಬೇಡ್ಕರ್, ಬುದ್ದ, ಬಸವ, ಕುವೆಂಪು ಮುಂತಾದವರ ವಿಚಾರಗಳನ್ನು ಹೆಚ್ಚೆಚ್ಚು ಪಾಲಿಸುತ್ತಾ ತಾರತಮ್ಯದ ಸಮಾಜವನ್ನು ಹೋಗಲಾಡಿಸಬೇಕು. ಶಿಕ್ಷಣದಿಂದ ವಂಚಿತರಾಗಿದ್ದ ಮಹಿಳೆಯರು, ಶೂದ್ರರಿಗೆ ಶಿಕ್ಷಣ ಸಿಕ್ಕಿದ್ದು ಇವರೆಲ್ಲಾ ಮಹನೀಯರ ಹೋರಾಟದಿಂದ.
ಈ ಚರಿತ್ರೆಯನ್ನು ನೆನಪಿಸುವುದಕ್ಕೇ ನಾವು ವಿಶ್ವ ವಿದ್ಯಾಲಯಕ್ಕೆ ಅಕ್ಕಮಹದೇವಿ ಹೆಸರು ಇಟ್ಟೆ. ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದೆ ಎನ್ನುತ್ತಾ ಸಮಾನತೆಯ ಹಾದಿಯಲ್ಲಿ ಸರ್ಕಾರ ಜಾರಿಗೆ ತಂದ ಹಲವು ಭಾಗ್ಯಗಳನ್ನು ವಿವರಿಸಿದರು.
ನಾವು ಯಾವತ್ತೂ ಸೀತಾರಾಮನ ಸಂಸ್ಕೃತಿಯವರು. ಸೀತೆ, ಲಕ್ಷ್ಮಣನನ್ನು ಬಿಟ್ಟು ರಾಮ ಯಾವತ್ತೂ ಒಂಟಿ ಅಲ್ಲ. ರಾಮನನ್ನು ಒಂಟಿ ಮಾಡುವುದಲ್ಲ. ಸಕುಂಟುಂಬ ಸಮೇತನಾದ ಸೀತಾರಾಮ ನಮ್ಮವ ಎಂದರು.
ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ರಾಯರೆಡ್ಡಿ, ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ರಾಘವೇಂದ್ರ ಹಿಟ್ನಾಳ್, ಜನಾರ್ಧನರೆಡ್ಡಿ, ದೊಡ್ಡನಗೌಡ ಪಾಟೀಲ್, ಇಕ್ಬಾಲ್ ಅನ್ಸಾರಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…