ರಾಜ್ಯ

ಜನ ಸಂಸ್ಕೃತಿಗಳನ್ನು ಚೆನ್ನಾಗಿ ಅರಿತರೆ ಮಾತ್ರ ದೇಶದ ಭವಿಷ್ಯ, ಸಂಸ್ಕೃತಿ ರೂಪಿಸಲು ಸಾಧ್ಯ: ಸಿ.ಎಂ.ಸಿದ್ದರಾಮಯ್ಯ

  • ನಾವು ಸೀತಾರಾಮನ ಸಂಸ್ಕೃತಿಯವರು. ಸೀತೆ, ಲಕ್ಷ್ಮಣನನ್ನು ಬಿಟ್ಟು ರಾಮ ಯಾವತ್ತೂ ಒಂಟಿ ಅಲ್ಲ: ಸಿಎಂ ವಿಶ್ಲೇಷಣೆ
  • ಶ್ರೇಷ್ಠತೆಯ ವ್ಯಸನದಿಂದ 58 ಲಕ್ಷ ಯಹೂದಿಗಳನ್ನು ಹತ್ಯೆ ಮಾಡಿದ ಹಿಟ್ಲರ್ ಕೊನೆಗೆ ಹಿಟ್ಲರ್ ಒಬ್ಬ ಹೇಡಿಯಂತೆ ಗುಂಡು ಹಾರಿಸಿಕೊಂಡು ಸತ್ತ ಇಂಥಾ ಪರಿಸ್ಥಿತಿ ನಮ್ಮ ದೇಶದಲ್ಲಿ ಬರಬಾರದು.
  • ಇಲ್ಲಿ ಶ್ರೇಷ್ಠರು, ಕನಿಷ್ಠರು ಇಲ್ಲವೇ ಇಲ್ಲ. ತಮ್ಮನ್ನು ತಾವು ಶ್ರೇಷ್ಠರು ಎನ್ನುವವರು, ಮತ್ತೊಬ್ಬರನ್ನು ಕನಿಷ್ಠರು ಎನ್ನುವವರು ಮನುಷ್ಯರೇ ಅಲ್ಲ.

ಕನಕಗಿರಿ :  ಶ್ರೇಷ್ಠತೆಯ ವ್ಯಸನದಿಂದ 58 ಲಕ್ಷ ಯಹೂದಿಗಳನ್ನು ಹತ್ಯೆ ಮಾಡಿದ ಹಿಟ್ಲರ್ ಕೊನೆಗೆ ಒಬ್ಬ ಹೇಡಿಯಂತೆ ಗುಂಡು ಹಾರಿಸಿಕೊಂಡು ಸತ್ತ. ಇಂಥಾ ಪರಿಸ್ಥಿತಿ ನಮ್ಮ ದೇಶದಲ್ಲಿ ಬರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.

ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕನಕಗಿರಿ ಉತ್ಸವವನ್ನು ಭವ್ಯವಾದ “ರಾಜಾ ಉಡಚಪ್ಪ ನಾಯಕ” ವೇದಿಕೆಯಲ್ಲಿ‌ ಉದ್ಘಾಟಿಸಿ ಮಾತನಾಡಿದ ಅವರು,  ಇಲ್ಲಿ ಶ್ರೇಷ್ಠರು, ಕನಿಷ್ಠರು ಇಲ್ಲವೇ ಇಲ್ಲ. ತಮ್ಮನ್ನು ತಾವು ಶ್ರೇಷ್ಠರು ಎನ್ನುವವರು, ಮತ್ತೊಬ್ಬರನ್ನು ಕನಿಷ್ಠರು ಎನ್ನುವವರು ಮನುಷ್ಯರೇ ಅಲ್ಲ. ಈ ರೀತಿಯ ಶ್ರೇಷ್ಠತೆಯ ವ್ಯಸನವನ್ನು ಹೋಗಲಾಡಿಸಲು ಬಸವಣ್ಣ, ಅಂಬೇಡ್ಕರ್ ಹೋರಾಟ ಮಾಡಿದರು ಎಂದು ವಿವರಿಸಿದರು.‌

ಸಮಾಜದಲ್ಲಿ ಅಸಮಾನತೆ ಇದೆ. ಇದನ್ನು ಹೋಗಲಾಡಿಸಲು ಏನಾದ್ರೂ ಪ್ರಯತ್ನ ಮಾಡಿದ್ವಾ ಎನ್ನುವ ಕುರಿತು ಪ್ರತಿಯೊಬ್ಬರೂ ತಮ್ಮನ್ನು ಪ್ರಶ್ನಿಸಿಕೊಳ್ಳಬೇಕು ಎಂದರು.

ಚತುವರ್ಣವ್ಯವಸ್ಥೆ ರೂಪಿಸಿ ಒಬ್ಬರನ್ನು ಶ್ರೇಷ್ಠರು ಉಳಿದವರನ್ನು ಕನಿಷ್ಠರು ಎನ್ನುವ ವ್ಯವಸ್ಥೆ ರೂಪಿಸಿದರು. ಇದನ್ನೇ ಹಿಟ್ಲರ್ ಮತ್ತು ಮುಸಲೋನಿ ಜರ್ಮನಿಯಲ್ಲಿ ಮಾಡಿದ್ದು. ಕೊನೆಗೆ ಅವರಿಗೆ ಯಾವ ಗತಿ ಆಯ್ತು ಎಂದು ಇಡಿ ಮನುಕುಲ ನೋಡಿದೆ ಎಂದರು.

ನಾವು ಅಂಬೇಡ್ಕರ್, ಬುದ್ದ, ಬಸವ, ಕುವೆಂಪು ಮುಂತಾದವರ ವಿಚಾರಗಳನ್ನು ಹೆಚ್ಚೆಚ್ಚು ಪಾಲಿಸುತ್ತಾ ತಾರತಮ್ಯದ ಸಮಾಜವನ್ನು ಹೋಗಲಾಡಿಸಬೇಕು. ಶಿಕ್ಷಣದಿಂದ ವಂಚಿತರಾಗಿದ್ದ ಮಹಿಳೆಯರು, ಶೂದ್ರರಿಗೆ ಶಿಕ್ಷಣ ಸಿಕ್ಕಿದ್ದು ಇವರೆಲ್ಲಾ ಮಹನೀಯರ ಹೋರಾಟದಿಂದ.

ಈ ಚರಿತ್ರೆಯನ್ನು ನೆನಪಿಸುವುದಕ್ಕೇ ನಾವು ವಿಶ್ವ ವಿದ್ಯಾಲಯಕ್ಕೆ ಅಕ್ಕಮಹದೇವಿ ಹೆಸರು ಇಟ್ಟೆ. ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದೆ ಎನ್ನುತ್ತಾ ಸಮಾನತೆಯ ಹಾದಿಯಲ್ಲಿ ಸರ್ಕಾರ ಜಾರಿಗೆ ತಂದ ಹಲವು ಭಾಗ್ಯಗಳನ್ನು ವಿವರಿಸಿದರು.

ನಾವು ಯಾವತ್ತೂ ಸೀತಾರಾಮನ ಸಂಸ್ಕೃತಿಯವರು. ಸೀತೆ, ಲಕ್ಷ್ಮಣನನ್ನು ಬಿಟ್ಟು ರಾಮ ಯಾವತ್ತೂ ಒಂಟಿ ಅಲ್ಲ. ರಾಮನನ್ನು ಒಂಟಿ ಮಾಡುವುದಲ್ಲ. ಸಕುಂಟುಂಬ ಸಮೇತನಾದ ಸೀತಾರಾಮ ನಮ್ಮವ ಎಂದರು.

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ರಾಯರೆಡ್ಡಿ, ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ರಾಘವೇಂದ್ರ ಹಿಟ್ನಾಳ್, ಜನಾರ್ಧನರೆಡ್ಡಿ, ದೊಡ್ಡನಗೌಡ ಪಾಟೀಲ್, ಇಕ್ಬಾಲ್ ಅನ್ಸಾರಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

 

andolana

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

7 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

10 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

10 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

10 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

11 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

12 hours ago