ಮೈಸೂರು: ಹಿರಿಯ ರಾಜಕೀಯ ಮುತ್ಸದ್ಧಿಗಳು ಆಡಳಿತ ನಡೆಸಿದ ವಿಧಾನಸೌಧದಲ್ಲಿ ನನ್ನನ್ನೂ ಸೇರಿಕೊಂಡಂತೆ ಎಲ್ಲ ರಾಜಕೀಯ ಪಕ್ಷಗಳ ನಾಯಕರ ಧೋರಣೆಯಿಂದ ಕೊಡು-ಕೊಳ್ಳುವ ವ್ಯವಸ್ಥೆ ಬಂದು ಬಿಟ್ಟಿದೆ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ವಿಷಾದ ವ್ಯಕ್ತಪಡಿಸಿದರು.
ಮೈಸೂರಿನ ಕನ್ನಡ ಚಳವಳಿ ಕೇಂದ್ರ ಸಮಿತಿ ಹಾಗೂ ಕರ್ನಾಟಕ ಸೇನಾ ಪಡೆಯ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ 7 ಕೋಟಿ ಜನರ ಪ್ರಾಧಿಕಾರವಾಗಿರುವ ವಿಧಾನಸೌಧದಲ್ಲಿ ಈ ಹಿಂದೆ ಎಂತಹ ನಾಯಕರು, ಮುತ್ಸದ್ಧಿಗಳು ಆಡಳಿತ ನಡೆಸಿದ್ದರು. ಹಿರಿಯರು ಓಡಾಡಿದ ಜಾಗದಲ್ಲಿ ರಾಜಕೀಯ ಪಕ್ಷಗಳ ನಾಯಕರ ಧೋರಣೆಯಿಂದ ಕನ್ನಡವನ್ನು ಮಾರಬಹುದು, ಸಂಸ್ಕೃತಿಯನ್ನೂ ಮಾರಬಹುದು ಎಂದು ವಿಷಾಧಿಸಿದರು.
ಅಂತಹ ಹಿರಿಯರು ಆಡಳಿತ ನಡೆಸಿದ ವಿಧಾನಸೌಧವೂ ಮಾಲ್ ಆಗಿ ಪರಿವರ್ತನೆಯಾಗಿ ಬಿಟ್ಟಿದೆ ಎಂದು ಪ್ರಸ್ತುತ ಸ್ಥಿತಿ ಬಗ್ಗೆ ವಿಷಾದದಿಂದ ಹೇಳಿದರು.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…