ರಾಜ್ಯ

ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಿಸಲು ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದ ವಾರಸುದಾರರಿಗೆ ಸರ್ಕಾರಿ ನೌಕರಿ ನೀಡಲು ಸರ್ಕಾರಿ ಆದೇಶದನ್ವಯ ಅವಕಾಶ ಇರುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಪ್ರಶ್ನೋತ್ತರ ಕಲಾಪದಲ್ಲಿ ಶೃಂಗೇರಿ ಶಾಸಕ ರಾಜೇಗೌಡರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಾನವ-ವನ್ಯಜೀವಿ ಸಂಘರ್ಷದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಮತ್ತು ಮಾಸಾಶನ ನೀಡಲಾಗುತ್ತಿದೆ. ಈ ಹಿಂದೆ ಇದ್ದ 15 ಲಕ್ಷ ರೂ. ಪರಿಹಾರದ ಮೊತ್ತವನ್ನು 2025ರ ಏಪ್ರಿಲ್ ನಿಂದ 20 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಪರಿಹಾರದ ಜೊತೆಗೆ 5 ವರ್ಷಗಳ ಕಾಲ ಮಾಸಿಕ 4 ಸಾವಿರ ರೂ. ಮಾಸಾಶನವನ್ನು ಮೃತರ ಕುಟುಂಬದ ಸದಸ್ಯರಿಗೆ ನೀಡಲಾಗುತ್ತಿದೆ ಎಂದೂ ವಿವರಿಸಿದರು.

ಅರಣ್ಯ ಇಲಾಖೆಯಲ್ಲಿ ಕಾಯಂ ನೌಕರರಾಗಿ ಸೇವೆ ಸಲ್ಲಿಸುತ್ತಿರುವವರು ಮತ್ತು ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿ ಹಗಲಿರುಳೆನ್ನದೆ ಕ್ಲಿಷ್ಟಕರ ಸನ್ನಿವೇಶದಲ್ಲಿ ಸೇವೆ ಸಲ್ಲಿಸುತ್ತಿದ್ದು, ಕರ್ತವ್ಯನಿರತ ಸಿಬ್ಬಂದಿ ಮೃತಪಟ್ಟಾಗ ಈ ಹಿಂದೆ 30 ಲಕ್ಷ ಅನುಗ್ರಹ ಧನ ನೀಡಲಾಗುತ್ತಿತ್ತು., ಈಗ ಆ ಮೊತ್ತವನ್ನು 50 ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದರು.

ಆನೆ ಸೇರಿದಂತೆ ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಿಸಲು ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ ಎಂದು ತಿಳಿಸಿದರು.

 

 

ಆಂದೋಲನ ಡೆಸ್ಕ್

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

4 hours ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

6 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

7 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

7 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

8 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

10 hours ago