ಬೆಂಗಳೂರು: ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದ ವಾರಸುದಾರರಿಗೆ ಸರ್ಕಾರಿ ನೌಕರಿ ನೀಡಲು ಸರ್ಕಾರಿ ಆದೇಶದನ್ವಯ ಅವಕಾಶ ಇರುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಶೃಂಗೇರಿ ಶಾಸಕ ರಾಜೇಗೌಡರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಾನವ-ವನ್ಯಜೀವಿ ಸಂಘರ್ಷದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಮತ್ತು ಮಾಸಾಶನ ನೀಡಲಾಗುತ್ತಿದೆ. ಈ ಹಿಂದೆ ಇದ್ದ 15 ಲಕ್ಷ ರೂ. ಪರಿಹಾರದ ಮೊತ್ತವನ್ನು 2025ರ ಏಪ್ರಿಲ್ ನಿಂದ 20 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಪರಿಹಾರದ ಜೊತೆಗೆ 5 ವರ್ಷಗಳ ಕಾಲ ಮಾಸಿಕ 4 ಸಾವಿರ ರೂ. ಮಾಸಾಶನವನ್ನು ಮೃತರ ಕುಟುಂಬದ ಸದಸ್ಯರಿಗೆ ನೀಡಲಾಗುತ್ತಿದೆ ಎಂದೂ ವಿವರಿಸಿದರು.
ಅರಣ್ಯ ಇಲಾಖೆಯಲ್ಲಿ ಕಾಯಂ ನೌಕರರಾಗಿ ಸೇವೆ ಸಲ್ಲಿಸುತ್ತಿರುವವರು ಮತ್ತು ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿ ಹಗಲಿರುಳೆನ್ನದೆ ಕ್ಲಿಷ್ಟಕರ ಸನ್ನಿವೇಶದಲ್ಲಿ ಸೇವೆ ಸಲ್ಲಿಸುತ್ತಿದ್ದು, ಕರ್ತವ್ಯನಿರತ ಸಿಬ್ಬಂದಿ ಮೃತಪಟ್ಟಾಗ ಈ ಹಿಂದೆ 30 ಲಕ್ಷ ಅನುಗ್ರಹ ಧನ ನೀಡಲಾಗುತ್ತಿತ್ತು., ಈಗ ಆ ಮೊತ್ತವನ್ನು 50 ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದರು.
ಆನೆ ಸೇರಿದಂತೆ ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಿಸಲು ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ ಎಂದು ತಿಳಿಸಿದರು.
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…