ರಾಜ್ಯ

ಸರ್ಕಾರ ರಾಜ್ಯವನ್ನು ಲೂಟಿ ಮಾಡಲು ಮತ್ತೊಂದು ಅಡ್ಡದಾರಿ ಹಿಡಿದಿದೆ: ಆರ್.ಅಶೋಕ್‌

ಬೆಂಗಳೂರು: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೈಲು ಪಾಲಾಗಿ, ಅಧಿಕಾರ ಕಳೆದುಕೊಳ್ಳಲು ಕಾರಣವಾದ ಬಹುಕೋಟಿ ಲಿಕ್ವರ್‌ ಹಗರಣದ ಮಾದರಿಯಲ್ಲೇ ಕರ್ನಾಟಕದಲ್ಲೂ ಅಬಕಾರಿ ಹಗರಣವೊಂದು ಸಂಭವಿಸುವ ಮುನ್ಸೂಚನೆ ಕಾಣುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.‌ಅಶೋಕ್‌ ಹೊಸ ಬಾಂಬ್‌ ಸಿಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಆರ್.‌ಅಶೋಕ್‌ ಅವರು, ಅಸ್ತಿತ್ವದಲ್ಲೇ ಇಲ್ಲದ ಮದ್ಯದ ಅಂಗಡಿಗಳನ್ನು ಕಾನೂನು ಬಾಹಿರವಾಗಿ ಹರಾಜು ಹಾಕಲು ಮುಂದಾಗಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ರಾಜ್ಯವನ್ನ ಲೂಟಿ ಮಾಡಲು ಮತ್ತೊಂದು ಅಡ್ಡದಾರಿ ಹಿಡಿಯಲು ಹೊರಟಿದೆ.

ಮುಡಾ ಹಗರಣದಿಂದ ಬಚಾವಾಗಲು, ಅಧಿಕಾರ ಹಂಚಿಕೆಯ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ರಣತಂತ್ರ ಹಣೆಯುವಲ್ಲಿ ಸಂಪೂರ್ಣವಾಗಿ ಬ್ಯುಸಿ ಆಗಿರುವ ಸಿಎಂ ಸಿದ್ದರಾಮಯ್ಯನವರಿಗೆ ಪಾಪ ಮೂರು ತಿಂಗಳಿನಿಂದ ಅನ್ನಭಾಗ್ಯದ ಹಣ, ಗೃಹಲಕ್ಷ್ಮಿ ಹಣ ಪಾವತಿ ಬಾಕಿ ಇರುವುದೇ ಗೊತ್ತಿಲ್ಲವಂತೆ.

ತಮಗೆ ಗೊತ್ತಿಲ್ಲದೆ ತಮ್ಮ ಸರ್ಕಾರದಲ್ಲಿ ಇನ್ನೂ ಏನೇನು ಕರ್ಮಕಾಂಡ ನಡೆಯುತ್ತಿದೆಯೋ ಆ ಪರಮಾತ್ಮನಿಗೆ ಗೊತ್ತು. ತಮಗೆ ಗೊತ್ತಿಲ್ಲದೆ ಯಾವ್ಯಾವ ಮಂತ್ರಿಗಳು, ಯಾವ್ಯಾವ ಶಾಸಕರು ಅದೆಷ್ಟು ಲೂಟಿ ಹೊಡೆಯುತ್ತಿದ್ದಾರೋ ಆ ದೇವರೇ ಬಲ್ಲ.

ಕರ್ನಾಟಕ ಕಂಡ ಅತ್ಯಂತ ಅಸಮರ್ಥ ಮುಖ್ಯಮಂತ್ರಿ ಎಂಬ ಹಣೆಪಟ್ಟಿ ಕಟ್ಟಿಕೊಳ್ಳುವುದಕ್ಕಿಂತ ಈಗಲಾದರೂ ರಾಜೀನಾಮೆ ಕೊಟ್ಟು ಗೌರವದಿಂದ ನಿರ್ಗಮಿಸಿ. ತಾವು ಕುರ್ಚಿಗೆ ಅಂಟಿಕೊಂಡು ಕೂತಷ್ಟೂ ತಮ್ಮ ಗೌರವ ಹಾಗೂ ವರ್ಚಸ್ಸು ಮತ್ತಷ್ಟು ಕಡಿಮೆ ಆಗುವುದಂತೂ ಗ್ಯಾರಂಟಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೇವಡಿ ಮಾಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

22 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

22 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

22 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

22 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

22 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

22 hours ago