ಬೆಂಗಳೂರು: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೈಲು ಪಾಲಾಗಿ, ಅಧಿಕಾರ ಕಳೆದುಕೊಳ್ಳಲು ಕಾರಣವಾದ ಬಹುಕೋಟಿ ಲಿಕ್ವರ್ ಹಗರಣದ ಮಾದರಿಯಲ್ಲೇ ಕರ್ನಾಟಕದಲ್ಲೂ ಅಬಕಾರಿ ಹಗರಣವೊಂದು ಸಂಭವಿಸುವ ಮುನ್ಸೂಚನೆ ಕಾಣುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಆರ್.ಅಶೋಕ್ ಅವರು, ಅಸ್ತಿತ್ವದಲ್ಲೇ ಇಲ್ಲದ ಮದ್ಯದ ಅಂಗಡಿಗಳನ್ನು ಕಾನೂನು ಬಾಹಿರವಾಗಿ ಹರಾಜು ಹಾಕಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯವನ್ನ ಲೂಟಿ ಮಾಡಲು ಮತ್ತೊಂದು ಅಡ್ಡದಾರಿ ಹಿಡಿಯಲು ಹೊರಟಿದೆ.
ಮುಡಾ ಹಗರಣದಿಂದ ಬಚಾವಾಗಲು, ಅಧಿಕಾರ ಹಂಚಿಕೆಯ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ರಣತಂತ್ರ ಹಣೆಯುವಲ್ಲಿ ಸಂಪೂರ್ಣವಾಗಿ ಬ್ಯುಸಿ ಆಗಿರುವ ಸಿಎಂ ಸಿದ್ದರಾಮಯ್ಯನವರಿಗೆ ಪಾಪ ಮೂರು ತಿಂಗಳಿನಿಂದ ಅನ್ನಭಾಗ್ಯದ ಹಣ, ಗೃಹಲಕ್ಷ್ಮಿ ಹಣ ಪಾವತಿ ಬಾಕಿ ಇರುವುದೇ ಗೊತ್ತಿಲ್ಲವಂತೆ.
ತಮಗೆ ಗೊತ್ತಿಲ್ಲದೆ ತಮ್ಮ ಸರ್ಕಾರದಲ್ಲಿ ಇನ್ನೂ ಏನೇನು ಕರ್ಮಕಾಂಡ ನಡೆಯುತ್ತಿದೆಯೋ ಆ ಪರಮಾತ್ಮನಿಗೆ ಗೊತ್ತು. ತಮಗೆ ಗೊತ್ತಿಲ್ಲದೆ ಯಾವ್ಯಾವ ಮಂತ್ರಿಗಳು, ಯಾವ್ಯಾವ ಶಾಸಕರು ಅದೆಷ್ಟು ಲೂಟಿ ಹೊಡೆಯುತ್ತಿದ್ದಾರೋ ಆ ದೇವರೇ ಬಲ್ಲ.
ಕರ್ನಾಟಕ ಕಂಡ ಅತ್ಯಂತ ಅಸಮರ್ಥ ಮುಖ್ಯಮಂತ್ರಿ ಎಂಬ ಹಣೆಪಟ್ಟಿ ಕಟ್ಟಿಕೊಳ್ಳುವುದಕ್ಕಿಂತ ಈಗಲಾದರೂ ರಾಜೀನಾಮೆ ಕೊಟ್ಟು ಗೌರವದಿಂದ ನಿರ್ಗಮಿಸಿ. ತಾವು ಕುರ್ಚಿಗೆ ಅಂಟಿಕೊಂಡು ಕೂತಷ್ಟೂ ತಮ್ಮ ಗೌರವ ಹಾಗೂ ವರ್ಚಸ್ಸು ಮತ್ತಷ್ಟು ಕಡಿಮೆ ಆಗುವುದಂತೂ ಗ್ಯಾರಂಟಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೇವಡಿ ಮಾಡಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…