ಬೆಂಗಳೂರು: ದಲಿತ ಸಮಾವೇಶ ಮಾಡಬೇಡಿ ಎಂದು ಕಾಂಗ್ರೆಸ್ ಹೈಕಮಾಂಡ್ ಹೇಳಿಲ್ಲ. ಹೈಕಮಾಂಡ್ ಒಪ್ಪಿದರೆ ದಲಿತ ಸಮಾವೇಶ ಮಾಡಲಾಗುವುದು ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ ಇತ್ತೀಚೆಗೆ ಭಾರೀ ಚರ್ಚೆಯಾಗುತ್ತಿರುವ ದಲಿತ ಸಮಾವೇಶದ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಆಹಾರ ಸಚಿವ ಮುನಿಯಪ್ಪ ಅವರು, ಸಮಾವೇಶ ಮಾಡಬೇಡಿ ಎಂದು ಹೈಕಮಾಂಡ್ ಏನೂ ಹೇಳಿಲ್ಲ. ಸಮಾವೇಶ ಮಾಡಬೇಕು ಎಂದು ರಾಜಣ್ಣ, ಪರಮೇಶ್ವರ್ ಸೇರಿದಂತೆ ಹಲವರು ಮನವಿ ಮಾಡಿದ್ದಾರೆ. ಈ ಹಿಂದೆ ಚಿತ್ರದುರ್ಗದಲ್ಲಿ ಮಾಡಿದ್ದ ಎಸ್ಸಿ, ಎಸ್ಟಿ ಸಮಾವೇಶ ಯಶಸ್ವಿಯಾಗಿತ್ತು. ಆದ್ದರಿಂದ ನಮಗೆ ಹೆಚ್ಚು ಲಾಭ ಆಗಿತ್ತು. ಚಿತ್ರದುರ್ಗದಲ್ಲಿ ಸಮಾವೇಶ ಮಾಡಬೇಕು ಎಂದು ಹೈಕಮಾಂಡ್ ನಾಯಕರೇ ಹೇಳಿದ್ದರು. ಸಮಾವೇಶ ಮಾಡಿ ಅದು ನಮಗೆ ಯಶಸ್ವಿಯಾಗಿತ್ತು. ಹೀಗಾಗಿ ಅಭಿನಂದನೆ ಹೆಸರಿನಲ್ಲಿ ಸಮಾವೇಶ ಮಾಡಬೇಕು ಎಂದು ತಿಳಿಸಿದರು.
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ…
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…
ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…
ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…
ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್…