ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ನಮ್ಮ ಪಕ್ಷಕ್ಕೆ ಬಂದರೂ ಸೇರ್ಪಡೆ ಮಾಡಿಕೊಳ್ಳಲಾಗುತ್ತದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಶ್ರೀರಾಮುಲುರನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ತರಲು ಪ್ರಯತ್ನ ಮಾಡಿದ್ದಾರೆ ಎಂಬ ಜನಾರ್ಧನ ರೆಡ್ಡಿ ಹೇಳಿಕೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ, ಯಾರನ್ನು ತುಳಿಯಲು ಸಾಧ್ಯವಿಲ್ಲ. ಸತೀಶ್ ಜಾರಕಿಹೊಳಿ ಹಿರಿಯರು. ಒಬ್ಬರನ್ನು ತುಳಿದು ರಾಜಕೀಯ ಮಾಡೋದು ಕಾಂಗ್ರೆಸ್ನಲ್ಲಿ ಇಲ್ಲ.ಇದು ನಡೆಯೋದು ಬರೀ ಬಿಜೆಪಿಯಲ್ಲಿ ಮಾತ್ರ ಎಂದರು.
ಇನ್ನು ಜನಾರ್ಧನ ರೆಡ್ಡಿ ವಿರುದ್ಧ ಕಿಡಿಕಾರಿದ ಚಲುವರಾಯಸ್ವಾಮಿ ಅವರು, ರೆಡ್ಡಿಗೆ ಮೊದಲು ಅವರ ಪಕ್ಷ ಸರಿ ಮಾಡಿಕೊಳ್ಳೋಕೆ ಹೇಳಿ. ಮೊದಲು ಯತ್ನಾಳ್, ಜಾರಕಿಹೊಳಿಯನ್ನು ಸರಿ ಮಾಡಿ, ಆಮೇಲೆ ಮಾತನಾಡಲಿ. ಕಾಂಗ್ರೆಸ್ ಹೈಕಮಾಂಡ್ ತುಂಬಾ ಸ್ಟ್ರಾಂಗ್ ಆಗಿದೆ. ಅಲ್ಲದೇ ಎಐಸಿಸಿ ಭದ್ರವಾಗಿದೆ. ಮೊದಲು ಬಿಜೆಪಿ ತಟ್ಟೆ ಸರಿ ಮಾಡಿಕೊಂಡು ಆಮೇಲೆ ನಮ್ಮ ತಟ್ಟೆಗೆ ಬರಲಿ ಎಂದು ಕಿಡಿಕಾರಿದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…