ರಾಜ್ಯ

ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಸೂಚನೆಗಳನ್ನು ನೀಡಿದರು.

ಸರ್ಕಾರದ ಸಾಧನೆಗಳು, ನಾವು ಪ್ರತೀ ಇಲಾಖೆಯಲ್ಲೂ ಜಾರಿ ಮಾಡಿರುವ ಜನಪರ ಕಾರ್ಯಕ್ರಮಗಳು ಜನರಿಗೆ ಸಮರ್ಪಕವಾಗಿ ಮನವರಿಕೆ ಆಗುವ ರೀತಿಯಲ್ಲಿ ಯೋಜನೆ ರೂಪಿಸಬೇಕು.

ಈ ಬಾರಿ ರಾಜ್ಯದಾದ್ಯಂತ ಮಳೆ ಬೆಳೆ ಉತ್ತಮವಾಗಿದ್ದು, ನದಿ, ಕೆರೆಗಳು ತುಂಬಿದ್ದು, ವೈಭವದಿಂದ ದಸರಾ ಆಚರಿಸಲಾಗುವುದು.

• ಸೆಪ್ಟಂಬರ್‌ 22ರಂದು ದಸರಾ ಹಬ್ಬಕ್ಕೆ ಚಾಲನೆ ದೊರೆಯಲಿದ್ದು, ಅಕ್ಟೋಬರ್‌ 2ರಂದು ವಿಜಯದಶಮಿ, ಜಂಬೂ ಸವಾರಿ ನಡೆಯಲಿದೆ. ದಸರಾ ಈ ಬಾರಿ 9 ದಿನಗಳ ಬದಲು 11 ದಿನಗಳ ಕಾಲ ನಡೆಯಲಿದೆ.
• ದಸರಾಕ್ಕೆ ತನ್ನದೇ ಆದ ಚಾರಿತ್ರಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯಿದ್ದು, ಇದಕ್ಕೆ ಪೂರಕವಾಗಿ ದಸರಾ ಆಚರಿಸಲಾಗುವುದು.
• ವಿಶ್ವವಿಖ್ಯಾತ ದಸರಾದ ಪರಂಪರೆಯನ್ನು ಮುಂದುವರೆಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು.
• ಕಳೆದ ವರ್ಷ ದಸರಾ ಆಚರಣೆಗೆ ಒಟ್ಟು ರೂ. 40 ಕೋಟಿ ಅನುದಾನ ಒದಗಿಸಲಾಗಿತ್ತು. ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆಗೆ ಬೇಕಾದಷ್ಟು ಅನುದಾನವನ್ನು ಒದಗಿಸಲಾಗುವುದು.
• ಸರ್ಕಾರದ ಸಾಧನೆಗಳನ್ನು ಮತ್ತು ಇಲಾಖಾ ಕಾರ್ಯಕ್ರಮಗಳನ್ನು ಸರಿಯಾಗಿ ಪ್ರತಿಬಿಂಬಿಸುವಂತಹ ವಸ್ತು ಪ್ರದರ್ಶನ, ಸ್ತಬ್ಧಚಿತ್ರ ಪ್ರದರ್ಶನ ಆಯೋಜಿಸಬೇಕು. ಅಕ್ಟೋಬರ್‌.2ರಂದು ವಿಜಯದಶಮಿ ಬಂದಿರುವ ಕಾರಣ ಸ್ತಬ್ಧಚಿತ್ರಗಳಲ್ಲಿ ಗಾಂಧೀಜಿ ವಿಚಾರಧಾರೆಗಳಿಗೆ ಸಹ ಅವಕಾಶ ಕಲ್ಪಿಸಬೇಕು.
• ಕಲ್ಯಾಣ ಕಾರ್ಯಕ್ರಮಗಳು, ಗ್ಯಾರಂಟಿ ಯೋಜನೆಗಳ ಮಾಹಿತಿ ಒದಗಿಸಲು ವ್ಯವಸ್ಥೆ ಮಾಡಬೇಕು.
• ದಸರಾ ಸಂದರ್ಭದಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. 10 ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ಸಂದರ್ಭ ಇದಾಗಿದೆ. ವಿದೇಶಿಗರೂ ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುತ್ತಾರೆ. ಯಾವುದೇ ಕಾರಣಕ್ಕೂ ಅನಾಹುತ ಸಂಭವಿಸದಂತೆ ಎಲ್ಲಾ ಕಡೆ ಮುನ್ನೆಚ್ಚರಿಕೆ ವಹಿಸಬೇಕು.
• ಅರಮನೆ ಮುಂಭಾಗದಲ್ಲಿ ಆಸನದ ವ್ಯವಸ್ಥೆಯನ್ನು ಕಳೆದ ಬಾರಿಗಿಂತ ಈ ಬಾರಿ ಕಡಿಮೆ ಮಾಡಿ ಜನದಟ್ಟಣೆಯನ್ನು ನಿಯಂತ್ರಿಸಲು ಕ್ರಮಕೈಗೊಳ್ಳಿ.
• ಪೊಲೀಸರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು.
• ಚಾಮುಂಡಿ ಬೆಟ್ಟಕ್ಕೆ ಹೋಗುವ ರಸ್ತೆ, ಕೆಆರ್‌ಎಸ್‌ಗೆ ಹೋಗುವ ರಸ್ತೆ ಸೇರಿದಂತೆ ಎಲ್ಲಾ ಪ್ರಮುಖ ರಸ್ತೆಗಳನ್ನು ದುರಸ್ತಿ ಮಾಡುವ ಕಾರ್ಯವನ್ನು ಈಗಲೇ ಆರಂಭಿಸಬೇಕು.
• ಜಾನಪದ ಕಲೆಗಳನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಬೇಕು. ಜಾನಪದ ಪ್ರದರ್ಶನದಲ್ಲಿ ಏಕತಾನತೆ ಇಲ್ಲದಂತೆ ನೋಡಿಕೊಳ್ಳಬೇಕು.
• ಕಳೆದ ಬಾರಿ ವಿದ್ಯುತ್‌ ದೀಪ ಅಲಂಕಾರವನ್ನು ವೈಭವದಿಂದ ಮಾಡಲಾಗಿತ್ತು. ಇದಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಬಾರಿಯೂ ವಿದ್ಯುತ್‌ ದೀಪಾಲಂಕಾರವನ್ನು ಇನ್ನಷ್ಟು ಉತ್ತಮವಾಗಿ ಮಾಡಬೇಕು.
• ಎಲ್ಲಾ ಜಿಲ್ಲೆಗಳಿಂದ ಆಗಮಿಸುವ ಸ್ತಬ್ಧಚಿತ್ರಗಳು ವೈವಿಧ್ಯಮಯವಾಗಿರುವಂತೆ ನೋಡಿಕೊಳ್ಳಬೇಕು.
• ವಸ್ತು ಪ್ರದರ್ಶನದ ಮಳಿಗೆಗಳು ಉದ್ಘಾಟನೆ ಸಂದರ್ಭದಲ್ಲೇ ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಂಡಿರಬೇಕು. ಯಾವುದೇ ಮಳಿಗೆಗಳು ಖಾಲಿಯಿರಬಾರದು.
• ಗೋಲ್ಡ್ ಕಾರ್ಡ್‌ ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ವಿತರಿಸಬೇಕು.
• ಮೈಸೂರು ನಗರದ ಸೌಂದರ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು.
• ದಸರಾ ವೀಕ್ಷಿಸಲು ಆಗಮಿಸುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಶೌಚಾಲಯ, ವಾಹನ ಪಾರ್ಕಿಂಗ್‌ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು.
• ಈ ಬಾರಿಯೂ ದೊಡ್ಡ ಪ್ರಮಾಣದಲ್ಲಿ ಡ್ರೋಣ್‌ ಶೋ ಆಯೋಜಿಸಲಾಗುವುದು.
• ದಸರಾ ಸಂದರ್ಭದಲ್ಲಿ ಅಧಿಕಾರಿಗಳು ಜನಸಾಮಾನ್ಯರಿಗೆ ದೊರೆಯುವುದಿಲ್ಲ ಎಂಬ ದೂರುಗಳಿದ್ದು, ಇದಕ್ಕೆ ಈ ಬಾರಿ ಅವಕಾಶ ನೀಡಬಾರದು. ಜನಸಾಮಾನ್ಯರ ಕೆಲಸ ಕಾರ್ಯಗಳು, ಅಭಿವೃದ್ದಿ ಕಾರ್ಯಗಳು ಯಾವುದೇ ಕಾರಣಕ್ಕೂ ಕುಂಠಿತವಾಗಬಾರದು.
• ಈ ಬಾರಿ ದಸರಾ ಉದ್ಘಾಟನೆಗೆ ಯಾರನ್ನು ಆಹ್ವಾನಿಸಬೇಕು ಎಂಬುವುದನ್ನು ಮುಖ್ಯಮಂತ್ರಿ ಅವರ ವಿವೇಚನೆಗೆ ಬಿಡಲು ಸಭೆಯಲ್ಲಿ ನಿರ್ಧರಿಸಲಾಯಿತು.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

8 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

8 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

8 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

8 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

8 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago