ರಾಜ್ಯ

ಹನಿಟ್ರ್ಯಾಪ್‌ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಯಾವುದೇ ಮಾಹಿತಿ ನೀಡಲ್ಲ: ಸಚಿವ ಪರಮೇಶ್ವರ್‌

ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಈ ಹಂತದಲ್ಲಿ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್.ರಾಜಣ್ಣ ಅವರು ನೀಡಿದ್ದ ಮನವಿಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ರವಾನಿಸಲಾಗಿದ್ದು, ಇಲಾಖೆಯವರು ಆಂತರಿಕವಾಗಿ ಆದೇಶ ಮಾಡಿಕೊಳ್ಳುತ್ತಾರೆ. ಇದಕ್ಕೆ ಸರ್ಕಾರದ ಆದೇಶ ಅಗತ್ಯವಿಲ್ಲ ಎಂದರು.

ಸಿಐಡಿ ತನಿಖೆಗೆ ಅಧಿಕೃತ ಆದೇಶ ಆಗಿಲ್ಲ ಎಂಬ ಕುರಿತು ಪ್ರತಿಕ್ರಿಯಿಸಿದ ಅವರು, ತನಿಖೆ ನಡೆಯುತ್ತಿದೆ. ಅದು ಪೂರ್ಣಗೊಳ್ಳುವವರೆಗೂ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳುವುದಿಲ್ಲ. ನನಗೂ ಮಾಹಿತಿ ಇಲ್ಲ ಎಂದರು.

ಸಂಪುಟ ಪುನರ್ ರಚನೆ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.2 ರಂದು ದೆಹಲಿಗೆ ಭೇಟಿ ನೀಡಲಿದ್ದಾರೆ. ಈ ಹಿಂದೆ ತಾವು ಉಪಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ಭವನದ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಗಿತ್ತು. ಈಗ ಅದರ ಉದ್ಘಾಟನೆಯಾಗುತ್ತಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿ ಯಾರೂ ತಮ್ಮನ್ನು ಆಹ್ವಾನಿಸಿಲ್ಲ. ಹೀಗಾಗಿ ನಾನು ದೆಹಲಿಗೆ ಹೋಗುತ್ತಿಲ್ಲ ಎಂದು ಹೇಳಿದರು.

ಇನ್ನು ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಲು ಮೂರು ತಿಂಗಳ ಹಿಂದೆಯೇ ನಾನು ಪಟ್ಟಿ ಸಿದ್ಧಪಡಿಸಿ ಸಿಎಂಗೆ ನೀಡಿದ್ದೇನೆ. ಅದರ ಕುರಿತು ಯಾವ ನಿರ್ಧಾರ ತೆಗೆದುಕೊಂಡಿದ್ದಾರೋ ಗೊತ್ತಿಲ್ಲ. ನನಗೆ ವಹಿಸಿದ್ದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ. ಎಲ್ಲಾ ಶಾಸಕರ ಹೆಸರನ್ನು ಪರಿಶೀಲಿಸಿ ಯಾವುದಕ್ಕೆ ಯಾರನ್ನು ನೇಮಿಸಬೇಕು ಎಂಬ ಪಟ್ಟಿಯನ್ನು ಸಿದ್ಧಪಡಿಸಿ ಸಲ್ಲಿಸಲಾಗಿದೆ. ನಾನು ಕೊಟ್ಟ ವರದಿಯನ್ನು ಬದಲಾವಣೆ ಮಾಡುವುದಾದರೆ ಅದು ಸಿಎಂ ಸಿದ್ದರಾಮಯ್ಯರಿಗೆ ಸೇರಿದ ವಿಚಾರ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

11 mins ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

21 mins ago

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಗೆಹಲೋತ್‌ ನಿರಾಕರಣೆ

ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…

43 mins ago

ಯುವಕರೇ, ನಿಯಮ ಪಾಲಿಸಿ ಜೀವ ಉಳಿಸಿ : ಎಸ್‌ಪಿ ಶೋಭಾರಾಣಿ ಮನವಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…

1 hour ago

ಕೊಕ್ಕರೆ ಬೆಳ್ಳೂರನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿಸಲು ಚಿಂತನೆ : ಶಾಸಕ ಉದಯ್‌

ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…

1 hour ago

ನೈಜ ಕೃಷಿಗೆ ಪ್ರೋತ್ಸಾಹ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

2 hours ago