ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಈ ಹಂತದಲ್ಲಿ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್.ರಾಜಣ್ಣ ಅವರು ನೀಡಿದ್ದ ಮನವಿಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ರವಾನಿಸಲಾಗಿದ್ದು, ಇಲಾಖೆಯವರು ಆಂತರಿಕವಾಗಿ ಆದೇಶ ಮಾಡಿಕೊಳ್ಳುತ್ತಾರೆ. ಇದಕ್ಕೆ ಸರ್ಕಾರದ ಆದೇಶ ಅಗತ್ಯವಿಲ್ಲ ಎಂದರು.
ಸಿಐಡಿ ತನಿಖೆಗೆ ಅಧಿಕೃತ ಆದೇಶ ಆಗಿಲ್ಲ ಎಂಬ ಕುರಿತು ಪ್ರತಿಕ್ರಿಯಿಸಿದ ಅವರು, ತನಿಖೆ ನಡೆಯುತ್ತಿದೆ. ಅದು ಪೂರ್ಣಗೊಳ್ಳುವವರೆಗೂ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳುವುದಿಲ್ಲ. ನನಗೂ ಮಾಹಿತಿ ಇಲ್ಲ ಎಂದರು.
ಸಂಪುಟ ಪುನರ್ ರಚನೆ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.2 ರಂದು ದೆಹಲಿಗೆ ಭೇಟಿ ನೀಡಲಿದ್ದಾರೆ. ಈ ಹಿಂದೆ ತಾವು ಉಪಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ಭವನದ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಗಿತ್ತು. ಈಗ ಅದರ ಉದ್ಘಾಟನೆಯಾಗುತ್ತಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿ ಯಾರೂ ತಮ್ಮನ್ನು ಆಹ್ವಾನಿಸಿಲ್ಲ. ಹೀಗಾಗಿ ನಾನು ದೆಹಲಿಗೆ ಹೋಗುತ್ತಿಲ್ಲ ಎಂದು ಹೇಳಿದರು.
ಇನ್ನು ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಲು ಮೂರು ತಿಂಗಳ ಹಿಂದೆಯೇ ನಾನು ಪಟ್ಟಿ ಸಿದ್ಧಪಡಿಸಿ ಸಿಎಂಗೆ ನೀಡಿದ್ದೇನೆ. ಅದರ ಕುರಿತು ಯಾವ ನಿರ್ಧಾರ ತೆಗೆದುಕೊಂಡಿದ್ದಾರೋ ಗೊತ್ತಿಲ್ಲ. ನನಗೆ ವಹಿಸಿದ್ದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ. ಎಲ್ಲಾ ಶಾಸಕರ ಹೆಸರನ್ನು ಪರಿಶೀಲಿಸಿ ಯಾವುದಕ್ಕೆ ಯಾರನ್ನು ನೇಮಿಸಬೇಕು ಎಂಬ ಪಟ್ಟಿಯನ್ನು ಸಿದ್ಧಪಡಿಸಿ ಸಲ್ಲಿಸಲಾಗಿದೆ. ನಾನು ಕೊಟ್ಟ ವರದಿಯನ್ನು ಬದಲಾವಣೆ ಮಾಡುವುದಾದರೆ ಅದು ಸಿಎಂ ಸಿದ್ದರಾಮಯ್ಯರಿಗೆ ಸೇರಿದ ವಿಚಾರ ಎಂದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…