Mysore
18
broken clouds

Social Media

ಸೋಮವಾರ, 26 ಜನವರಿ 2026
Light
Dark

ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಲಿ: ಶಾಸಕ ಅಶ್ವಥ್‌ ನಾರಾಯಣ್‌ ಆಗ್ರಹ

For which purpose is Siddaramaiah holding the Sadhana Samavesha?

ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಎಂದು ಶಾಸಕ ಅಶ್ವಥ್‌ ನಾರಾಯಣ್‌ ಒತ್ತಾಯಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ಶವ ಹೂತಿಟ್ಟಿರುವ ಪ್ರಕರಣದ ಬಗ್ಗೆ ಎನ್‌ಐಎ ತನಿಖೆ ನಡೆಸಬೇಕು. ವಿದೇಶದಿಂದ ಹಣ ಬಂದಿದೆ ಎಂಬ ಆರೋಪಗಳಿವೆ. ಈ ಬಗ್ಗೆಯೂ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಇನ್ನು ಈಗಾಗಲೇ ಪ್ರಕರಣದ ಹಿಂದಿರುವ ಕೈವಾಡ ಬಯಲಾಗಿದೆ. ದೂರುದಾರನಿಗೆ ಬೆಂಬಲ ನೀಡಿದವರ ಬಗ್ಗೆಯೂ ತನಿಖೆಯಾಗಲಿ. ಇದರ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ಎನ್‌ಐಎ ತನಿಖೆ ನಡೆಸಿದರೆ ಎಲ್ಲವೂ ಹೊರಬರುತ್ತದೆ ಎಂದು ತಿಳಿಸಿದರು.

Tags:
error: Content is protected !!