ರಾಜ್ಯ

ಧರ್ಮಸ್ಥಳ ಪ್ರಕರಣ | ತಾರ್ಕಿಕ ಅಂತ್ಯ ಕಾಣುವವರೆಗೂ ವಿಚಾರಣೆ ಮುಂದುವರೆಯಲಿದೆ : ಗೃಹ ಸಚಿವ ಪರಮೇಶ್ವರ್

ಬೆಂಗಳೂರು : ಧರ್ಮಸ್ಥಳದಲ್ಲಿನ ಎಸ್‍ಐಟಿ ತನಿಖೆ ಎಲ್ಲಿಗೆ ಹೋಗುತ್ತದೆ ಎಂದು ಹೇಳಲಾಗುವುದಿಲ್ಲ. ತಾರ್ಕಿಕ ಅಂತ್ಯ ಕಾಣುವವರೆಗೂ ವಿಚಾರಣೆ ಮುಂದುವರೆಯಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಎಸ್‍ಐಟಿ ಸಂಸ್ಥೆಯ ಮುಖ್ಯಸ್ಥ ಪ್ರಣಬ್ ಮೊಹಾಂತಿ ಇಂದು ತಮನ್ನು ಭೇಟಿ ಮಾಡಿ, ಚರ್ಚೆ ನಡೆಸಿದ್ದಾರೆ. ಸಮಾಲೋಚನೆಯ ವಿಚಾರಗಳನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದರು.‌

ಎಸ್‍ಐಟಿಯವರಿಗೆ ಈಗಾಗಲೇ ತನಿಖೆಯ ಮಾರ್ಗ ಸೂಚಿಗಳನ್ನು ನೀಡಲಾಗಿದೆ. ಅದರಂತೆ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ತನಿಖೆ ಬೇಗ ಮುಗಿಸಿ ಎಂದು ಹೇಳಬಹುದಷ್ಟೇ. ಅದರೆ ಬೇಗ ವರದಿ ಕೊಡಿ, ಈ ವಾರದಲ್ಲೇ ತನಿಖೆ ಮುಗಿಸಿ, ಮುಂದಿನವಾರ ವರದಿ ಕೊಡಿ ಎಂದು ಸೂಚನೆ ನೀಡಲು ಅವಕಾಶವಿಲ್ಲ ಎಂದು ಹೇಳಿದರು.

ಧರ್ಮಸ್ಥಳದಲ್ಲಿ ಉತ್ಖನನ ಮಾಡಿದಾಗ ದೊರೆತ್ತಿರುವ ಹಲವಾರು ಅಂಶಗಳನ್ನು ಎಫ್‍ಎಸ್‍ಎಲ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಸಾಕಷ್ಟು ರೀತಿಯ ವಿಶ್ಲೇಷಣೆಗಳು ನಡೆಯಬೇಕಿದೆ. ವರದಿ ಯಾವ ರೀತಿ ಇರುತ್ತದೆ ಎಂದು ನನಗೆ ಗೊತ್ತಿಲ್ಲ. ಅನಗತ್ಯವಾಗಿ ಊಹ-ಪೋಹಗಳಿಗೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಹೇಳಿದರು.

ತನಿಖೆಗೆ ಕಾಲಮಿತಿ ವಿಧಿಸಿಲ್ಲ. ತ್ವರಿತವಾಗಿ ಪ್ರಕ್ರಿಯೆಗಳನ್ನು ನಡೆಸಿ ಎಂದು ಸಲಹೆ ನೀಡಬಹುದು. ಆದರೆ ಎಲ್ಲವನ್ನು ವೈಜ್ಞಾನಿಕವಾಗಿ ಪರಿಶೀಲಿಸಿ ಅಗತ್ಯ ಕ್ರಮಕೈಗೊಳ್ಳ ಬೇಕಿರುವುದರಿಂದ ಒತ್ತಡ ಹೇರುವುದು ಸರಿಯಲ್ಲ. ವಿಚಾರಣಾ ಹಂತದಲ್ಲಿ ಬೇರೆ ಬೇರೆ ರೀತಿಯ ಮಾಹಿತಿಗಳು ಸಿಕ್ಕರೆ ಅವುಗಳನ್ನು ಎಸ್‍ಐಟಿ ಅಧಿಕಾರಿಗಳು ತನಿಖೆಗೊಳಪಡಿಸುತ್ತಾರೆ ಎಂದರು.

ರಾಜ್ಯಸರ್ಕಾರ ಯಾವುದೇ ರೀತಿಯ ನಿರ್ದೇಶನ ನೀಡುವುದಿಲ್ಲ. ಸೌಜನ್ಯ ಅವರ ತಾಯಿ ದೂರು ನೀಡಿರುವ ಬಗ್ಗೆಯೂ ಎಸ್‍ಐಟಿ ಅವರೇ ಪರಿಶೀಲನೆ ಮಾಡುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಬಂಧಿತ ಆರೋಪಿ ಚಿನ್ನಯ್ಯನನ್ನು ಬೆಂಗಳೂರಿಗೆ ಕರೆತರುವುದು ಸೇರಿದಂತೆ ಎಲ್ಲಾ ರೀತಿಯ ಪ್ರಕ್ರಿಯೆಗಳನ್ನು ಎಸ್‍ಐಟಿಯವರು ನಿರ್ಧರಿಸುತ್ತಾರೆ. ಆತನಿಗೆ ಆಶ್ರಯ ಕೊಟ್ಟವರನ್ನು ಬಂಧಿಸಬೇಕೆ? ಬೇಡವೇ? ಎಂಬುದು ಕೂಡ ಎಸ್‍ಐಟಿ ಆಧಿಕಾರಿಗಳ ವಿವೇಚನೆಗೆ ಸೇರಿದೆ.ವಿರೋಧ ಪಕ್ಷಗಳು ಹೇಳಿದಂತೆ ತನಿಖೆ ನಡೆಸುವುದಾಗಲೀ, ಕಾಲಮಿತಿ ವಿಧಿಸುವುದಾಗಲೀ ಸಾಧ್ಯವಿಲ್ಲ. ರಾಜಕೀಯಕ್ಕಾಗಿ ಅವರು ಮಾತನಾಡುತ್ತಾರೆ. ಅದಕ್ಕೆ ನಾನು ಪ್ರತಿಕ್ರಿಯಿಸುವ ಅಗತ್ಯ ಇಲ್ಲ ಸ್ಷಷ್ಟಪಡಿಸಿದರು.

ತನಿಖೆ ಉತ್ತಮವಾಗಿ ನಡೆಯುತ್ತಿದೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸೇರಿದಂತೆ ಎಲ್ಲರೂ ಎಸ್‍ಐಟಿಯನ್ನು ಸ್ವಾಗತ ಮಾಡಿದ್ದಾರೆ. ಈ ಸಂದರ್ಭದಲ್ಲಿ ಎನ್‍ಐಎ ಸಂಸ್ಥೆಗೆ ವಹಿಸಬೇಕು ಎಂದರೆ ಅದು ಅಸಾಧ್ಯ. ನಾವು, ನೀವು ಅಥವಾ ಬೇರೆಯವರು ಹೇಳಿದಂತೆ ಆಗುವುದಿಲ್ಲ. ಎಸ್‍ಐಟಿಗೆ ನಿಯಮ ಬದ್ಧವಾದ ಕ್ರಮಗಳಿವೆ. ಅದರ ಪ್ರಕಾರವೇ ನಡೆಯುತ್ತದೆ ಎಂದರು.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

3 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

3 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

5 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

5 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

6 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

6 hours ago