ರಾಜ್ಯ

ಧರ್ಮಸ್ಥಳ ಪ್ರಕರಣ | ತಾರ್ಕಿಕ ಅಂತ್ಯ ಕಾಣುವವರೆಗೂ ವಿಚಾರಣೆ ಮುಂದುವರೆಯಲಿದೆ : ಗೃಹ ಸಚಿವ ಪರಮೇಶ್ವರ್

ಬೆಂಗಳೂರು : ಧರ್ಮಸ್ಥಳದಲ್ಲಿನ ಎಸ್‍ಐಟಿ ತನಿಖೆ ಎಲ್ಲಿಗೆ ಹೋಗುತ್ತದೆ ಎಂದು ಹೇಳಲಾಗುವುದಿಲ್ಲ. ತಾರ್ಕಿಕ ಅಂತ್ಯ ಕಾಣುವವರೆಗೂ ವಿಚಾರಣೆ ಮುಂದುವರೆಯಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಎಸ್‍ಐಟಿ ಸಂಸ್ಥೆಯ ಮುಖ್ಯಸ್ಥ ಪ್ರಣಬ್ ಮೊಹಾಂತಿ ಇಂದು ತಮನ್ನು ಭೇಟಿ ಮಾಡಿ, ಚರ್ಚೆ ನಡೆಸಿದ್ದಾರೆ. ಸಮಾಲೋಚನೆಯ ವಿಚಾರಗಳನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದರು.‌

ಎಸ್‍ಐಟಿಯವರಿಗೆ ಈಗಾಗಲೇ ತನಿಖೆಯ ಮಾರ್ಗ ಸೂಚಿಗಳನ್ನು ನೀಡಲಾಗಿದೆ. ಅದರಂತೆ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ತನಿಖೆ ಬೇಗ ಮುಗಿಸಿ ಎಂದು ಹೇಳಬಹುದಷ್ಟೇ. ಅದರೆ ಬೇಗ ವರದಿ ಕೊಡಿ, ಈ ವಾರದಲ್ಲೇ ತನಿಖೆ ಮುಗಿಸಿ, ಮುಂದಿನವಾರ ವರದಿ ಕೊಡಿ ಎಂದು ಸೂಚನೆ ನೀಡಲು ಅವಕಾಶವಿಲ್ಲ ಎಂದು ಹೇಳಿದರು.

ಧರ್ಮಸ್ಥಳದಲ್ಲಿ ಉತ್ಖನನ ಮಾಡಿದಾಗ ದೊರೆತ್ತಿರುವ ಹಲವಾರು ಅಂಶಗಳನ್ನು ಎಫ್‍ಎಸ್‍ಎಲ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಸಾಕಷ್ಟು ರೀತಿಯ ವಿಶ್ಲೇಷಣೆಗಳು ನಡೆಯಬೇಕಿದೆ. ವರದಿ ಯಾವ ರೀತಿ ಇರುತ್ತದೆ ಎಂದು ನನಗೆ ಗೊತ್ತಿಲ್ಲ. ಅನಗತ್ಯವಾಗಿ ಊಹ-ಪೋಹಗಳಿಗೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಹೇಳಿದರು.

ತನಿಖೆಗೆ ಕಾಲಮಿತಿ ವಿಧಿಸಿಲ್ಲ. ತ್ವರಿತವಾಗಿ ಪ್ರಕ್ರಿಯೆಗಳನ್ನು ನಡೆಸಿ ಎಂದು ಸಲಹೆ ನೀಡಬಹುದು. ಆದರೆ ಎಲ್ಲವನ್ನು ವೈಜ್ಞಾನಿಕವಾಗಿ ಪರಿಶೀಲಿಸಿ ಅಗತ್ಯ ಕ್ರಮಕೈಗೊಳ್ಳ ಬೇಕಿರುವುದರಿಂದ ಒತ್ತಡ ಹೇರುವುದು ಸರಿಯಲ್ಲ. ವಿಚಾರಣಾ ಹಂತದಲ್ಲಿ ಬೇರೆ ಬೇರೆ ರೀತಿಯ ಮಾಹಿತಿಗಳು ಸಿಕ್ಕರೆ ಅವುಗಳನ್ನು ಎಸ್‍ಐಟಿ ಅಧಿಕಾರಿಗಳು ತನಿಖೆಗೊಳಪಡಿಸುತ್ತಾರೆ ಎಂದರು.

ರಾಜ್ಯಸರ್ಕಾರ ಯಾವುದೇ ರೀತಿಯ ನಿರ್ದೇಶನ ನೀಡುವುದಿಲ್ಲ. ಸೌಜನ್ಯ ಅವರ ತಾಯಿ ದೂರು ನೀಡಿರುವ ಬಗ್ಗೆಯೂ ಎಸ್‍ಐಟಿ ಅವರೇ ಪರಿಶೀಲನೆ ಮಾಡುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಬಂಧಿತ ಆರೋಪಿ ಚಿನ್ನಯ್ಯನನ್ನು ಬೆಂಗಳೂರಿಗೆ ಕರೆತರುವುದು ಸೇರಿದಂತೆ ಎಲ್ಲಾ ರೀತಿಯ ಪ್ರಕ್ರಿಯೆಗಳನ್ನು ಎಸ್‍ಐಟಿಯವರು ನಿರ್ಧರಿಸುತ್ತಾರೆ. ಆತನಿಗೆ ಆಶ್ರಯ ಕೊಟ್ಟವರನ್ನು ಬಂಧಿಸಬೇಕೆ? ಬೇಡವೇ? ಎಂಬುದು ಕೂಡ ಎಸ್‍ಐಟಿ ಆಧಿಕಾರಿಗಳ ವಿವೇಚನೆಗೆ ಸೇರಿದೆ.ವಿರೋಧ ಪಕ್ಷಗಳು ಹೇಳಿದಂತೆ ತನಿಖೆ ನಡೆಸುವುದಾಗಲೀ, ಕಾಲಮಿತಿ ವಿಧಿಸುವುದಾಗಲೀ ಸಾಧ್ಯವಿಲ್ಲ. ರಾಜಕೀಯಕ್ಕಾಗಿ ಅವರು ಮಾತನಾಡುತ್ತಾರೆ. ಅದಕ್ಕೆ ನಾನು ಪ್ರತಿಕ್ರಿಯಿಸುವ ಅಗತ್ಯ ಇಲ್ಲ ಸ್ಷಷ್ಟಪಡಿಸಿದರು.

ತನಿಖೆ ಉತ್ತಮವಾಗಿ ನಡೆಯುತ್ತಿದೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸೇರಿದಂತೆ ಎಲ್ಲರೂ ಎಸ್‍ಐಟಿಯನ್ನು ಸ್ವಾಗತ ಮಾಡಿದ್ದಾರೆ. ಈ ಸಂದರ್ಭದಲ್ಲಿ ಎನ್‍ಐಎ ಸಂಸ್ಥೆಗೆ ವಹಿಸಬೇಕು ಎಂದರೆ ಅದು ಅಸಾಧ್ಯ. ನಾವು, ನೀವು ಅಥವಾ ಬೇರೆಯವರು ಹೇಳಿದಂತೆ ಆಗುವುದಿಲ್ಲ. ಎಸ್‍ಐಟಿಗೆ ನಿಯಮ ಬದ್ಧವಾದ ಕ್ರಮಗಳಿವೆ. ಅದರ ಪ್ರಕಾರವೇ ನಡೆಯುತ್ತದೆ ಎಂದರು.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿನಲ್ಲಿ ಡಿಎಂಕೆಗೆ ಆರಂಭಿಕ ಮುನ್ನಡೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಡಿಎಂಕೆ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ತಮಿಳುನಾಡಿನಲ್ಲಿ ಡಿಎಂಕೆ 71ಕ್ಕೂ ಹೆಚ್ಚು…

25 mins ago

ಸೊಳ್ಳೆಗಳ ಕಾಟ; ಸಾಂಕ್ರಾಮಿಕ ರೋಗದ ಭೀತಿ

ಪ್ರಶಾಂತ್ ಎಸ್. ಮನೆಗಳ ಮುಂದೆ ನಿಲ್ಲುವ ಚರಂಡಿ ನೀರು! ವಾರ್ಡ್ ಸಂಖ್ಯೆ ೬೫ರ ನಿವಾಸಿಗಳಿಗೆ ತಪ್ಪದ ಸಂಕಷ್ಟ  ಮೈಸೂರು: ಸಣ್ಣ…

27 mins ago

ಹಳ್ಳದಲ್ಲಿ ಸಿಗುವ ಕಲುಷಿತ ನೀರೇ ಇವರಿಗೆ ಆಸರೆ!

ಮಂಜು ಕೋಟೆ ಎಚ್.ಡಿ.ಕೋಟೆ ತಾಲ್ಲೂಕಿನ ಗೂಳೂರು ಹಾಡಿ ಜನರು ಪ್ರತಿನಿತ್ಯ ಎದುರಿಸುತ್ತಿರುವ ದಯನೀಯ ಸ್ಥಿತಿಯಿದು ಎಚ್.ಡಿ.ಕೋಟೆ: ರಾಜ್ಯದಲ್ಲಿ ಯಾವುದೇ ಸರ್ಕಾರ…

36 mins ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಆರಂಭಿಕ ಮುನ್ನಡೆ

ಕೋಲ್ಕತ್ತಾ: ತೀವ್ರ ಹಣಾಹಣಿ ಏರ್ಪಟ್ಟಿರುವ ಪಶ್ಚಿಮ ಬಂಗಾಳ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ.…

44 mins ago

ಸಿಎಂ ತವರಲ್ಲಿ ಬೇಸಿಗೆ ಕಾಲದಲ್ಲೂ ಕ್ಷೀರ ಕ್ರಾಂತಿ

ಕೆ.ಬಿ.ರಮೇಶನಾಯಕ ಪ್ರತಿನಿತ್ಯ ೯.೨೭ ಲಕ್ಷ ಲೀಟರ್ ಹಾಲು ಉತ್ಪಾದನೆ ಪ್ರಸಕ್ತ ಸಾಲಿನಲ್ಲಿ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ  ಮೈಸೂರು: ಹೈನುಗಾರಿಕೆಯನ್ನು ನಂಬಿರುವ…

50 mins ago

ರಾಜ್ಯದ 2 ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಶುರು

ಬೆಂಗಳೂರು: ರಾಜ್ಯದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಶುರುವಾಗಿದೆ. ಅದೇ ರೀತಿ…

59 mins ago