ರಾಜ್ಯ

ಧರ್ಮಸ್ಥಳ ಪ್ರಕರಣ | ತಾರ್ಕಿಕ ಅಂತ್ಯ ಕಾಣುವವರೆಗೂ ವಿಚಾರಣೆ ಮುಂದುವರೆಯಲಿದೆ : ಗೃಹ ಸಚಿವ ಪರಮೇಶ್ವರ್

ಬೆಂಗಳೂರು : ಧರ್ಮಸ್ಥಳದಲ್ಲಿನ ಎಸ್‍ಐಟಿ ತನಿಖೆ ಎಲ್ಲಿಗೆ ಹೋಗುತ್ತದೆ ಎಂದು ಹೇಳಲಾಗುವುದಿಲ್ಲ. ತಾರ್ಕಿಕ ಅಂತ್ಯ ಕಾಣುವವರೆಗೂ ವಿಚಾರಣೆ ಮುಂದುವರೆಯಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಎಸ್‍ಐಟಿ ಸಂಸ್ಥೆಯ ಮುಖ್ಯಸ್ಥ ಪ್ರಣಬ್ ಮೊಹಾಂತಿ ಇಂದು ತಮನ್ನು ಭೇಟಿ ಮಾಡಿ, ಚರ್ಚೆ ನಡೆಸಿದ್ದಾರೆ. ಸಮಾಲೋಚನೆಯ ವಿಚಾರಗಳನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದರು.‌

ಎಸ್‍ಐಟಿಯವರಿಗೆ ಈಗಾಗಲೇ ತನಿಖೆಯ ಮಾರ್ಗ ಸೂಚಿಗಳನ್ನು ನೀಡಲಾಗಿದೆ. ಅದರಂತೆ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ತನಿಖೆ ಬೇಗ ಮುಗಿಸಿ ಎಂದು ಹೇಳಬಹುದಷ್ಟೇ. ಅದರೆ ಬೇಗ ವರದಿ ಕೊಡಿ, ಈ ವಾರದಲ್ಲೇ ತನಿಖೆ ಮುಗಿಸಿ, ಮುಂದಿನವಾರ ವರದಿ ಕೊಡಿ ಎಂದು ಸೂಚನೆ ನೀಡಲು ಅವಕಾಶವಿಲ್ಲ ಎಂದು ಹೇಳಿದರು.

ಧರ್ಮಸ್ಥಳದಲ್ಲಿ ಉತ್ಖನನ ಮಾಡಿದಾಗ ದೊರೆತ್ತಿರುವ ಹಲವಾರು ಅಂಶಗಳನ್ನು ಎಫ್‍ಎಸ್‍ಎಲ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಸಾಕಷ್ಟು ರೀತಿಯ ವಿಶ್ಲೇಷಣೆಗಳು ನಡೆಯಬೇಕಿದೆ. ವರದಿ ಯಾವ ರೀತಿ ಇರುತ್ತದೆ ಎಂದು ನನಗೆ ಗೊತ್ತಿಲ್ಲ. ಅನಗತ್ಯವಾಗಿ ಊಹ-ಪೋಹಗಳಿಗೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಹೇಳಿದರು.

ತನಿಖೆಗೆ ಕಾಲಮಿತಿ ವಿಧಿಸಿಲ್ಲ. ತ್ವರಿತವಾಗಿ ಪ್ರಕ್ರಿಯೆಗಳನ್ನು ನಡೆಸಿ ಎಂದು ಸಲಹೆ ನೀಡಬಹುದು. ಆದರೆ ಎಲ್ಲವನ್ನು ವೈಜ್ಞಾನಿಕವಾಗಿ ಪರಿಶೀಲಿಸಿ ಅಗತ್ಯ ಕ್ರಮಕೈಗೊಳ್ಳ ಬೇಕಿರುವುದರಿಂದ ಒತ್ತಡ ಹೇರುವುದು ಸರಿಯಲ್ಲ. ವಿಚಾರಣಾ ಹಂತದಲ್ಲಿ ಬೇರೆ ಬೇರೆ ರೀತಿಯ ಮಾಹಿತಿಗಳು ಸಿಕ್ಕರೆ ಅವುಗಳನ್ನು ಎಸ್‍ಐಟಿ ಅಧಿಕಾರಿಗಳು ತನಿಖೆಗೊಳಪಡಿಸುತ್ತಾರೆ ಎಂದರು.

ರಾಜ್ಯಸರ್ಕಾರ ಯಾವುದೇ ರೀತಿಯ ನಿರ್ದೇಶನ ನೀಡುವುದಿಲ್ಲ. ಸೌಜನ್ಯ ಅವರ ತಾಯಿ ದೂರು ನೀಡಿರುವ ಬಗ್ಗೆಯೂ ಎಸ್‍ಐಟಿ ಅವರೇ ಪರಿಶೀಲನೆ ಮಾಡುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಬಂಧಿತ ಆರೋಪಿ ಚಿನ್ನಯ್ಯನನ್ನು ಬೆಂಗಳೂರಿಗೆ ಕರೆತರುವುದು ಸೇರಿದಂತೆ ಎಲ್ಲಾ ರೀತಿಯ ಪ್ರಕ್ರಿಯೆಗಳನ್ನು ಎಸ್‍ಐಟಿಯವರು ನಿರ್ಧರಿಸುತ್ತಾರೆ. ಆತನಿಗೆ ಆಶ್ರಯ ಕೊಟ್ಟವರನ್ನು ಬಂಧಿಸಬೇಕೆ? ಬೇಡವೇ? ಎಂಬುದು ಕೂಡ ಎಸ್‍ಐಟಿ ಆಧಿಕಾರಿಗಳ ವಿವೇಚನೆಗೆ ಸೇರಿದೆ.ವಿರೋಧ ಪಕ್ಷಗಳು ಹೇಳಿದಂತೆ ತನಿಖೆ ನಡೆಸುವುದಾಗಲೀ, ಕಾಲಮಿತಿ ವಿಧಿಸುವುದಾಗಲೀ ಸಾಧ್ಯವಿಲ್ಲ. ರಾಜಕೀಯಕ್ಕಾಗಿ ಅವರು ಮಾತನಾಡುತ್ತಾರೆ. ಅದಕ್ಕೆ ನಾನು ಪ್ರತಿಕ್ರಿಯಿಸುವ ಅಗತ್ಯ ಇಲ್ಲ ಸ್ಷಷ್ಟಪಡಿಸಿದರು.

ತನಿಖೆ ಉತ್ತಮವಾಗಿ ನಡೆಯುತ್ತಿದೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸೇರಿದಂತೆ ಎಲ್ಲರೂ ಎಸ್‍ಐಟಿಯನ್ನು ಸ್ವಾಗತ ಮಾಡಿದ್ದಾರೆ. ಈ ಸಂದರ್ಭದಲ್ಲಿ ಎನ್‍ಐಎ ಸಂಸ್ಥೆಗೆ ವಹಿಸಬೇಕು ಎಂದರೆ ಅದು ಅಸಾಧ್ಯ. ನಾವು, ನೀವು ಅಥವಾ ಬೇರೆಯವರು ಹೇಳಿದಂತೆ ಆಗುವುದಿಲ್ಲ. ಎಸ್‍ಐಟಿಗೆ ನಿಯಮ ಬದ್ಧವಾದ ಕ್ರಮಗಳಿವೆ. ಅದರ ಪ್ರಕಾರವೇ ನಡೆಯುತ್ತದೆ ಎಂದರು.

ಆಂದೋಲನ ಡೆಸ್ಕ್

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

3 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

3 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

3 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

5 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

5 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

6 hours ago