ರಾಜ್ಯ

ಕುಮಾರಸ್ವಾಮಿ ಕುಟುಂಬದ ಆಸ್ತಿ ರಾಜ್ಯದ ಮೂರು ಬಜೆಟ್‌ನಷ್ಟಿದೆ: ಜಮೀರ್‌ ಅಹ್ಮದ್ ಖಾನ್‌

ಚನ್ನಪಟ್ಟಣ: ಕುಮಾರಸ್ವಾಮಿ ಮತ್ತು ಅವರ ಕುಟುಂಬ ಮಾಡಿರುವ ಆಸ್ತಿ ಮೊತ್ತವು ರಾಜ್ಯದ ಮೂರು ಬಜೆಟ್‌ ಮಂಡಿಸುವಷ್ಟಿದೆ. ಅಷ್ಟೊಂದು ಭೂಮಿ ಮತ್ತು ಹಣ ಕೊಳ್ಳೆ ಹೊಡೆದಿದ್ದಾರೆ ಎಂದು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಆರೋಪ ಮಾಡಿದರು.

ನಗರದ ಬಾಲಕರ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಭಾನುವಾರ ನಡೆದ ಕಾಂಗ್ರೆಸ್‌ ಪಕ್ಷದ ಮೂರನೇ ದಿನದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ಭಾಷಣದ ಉದ್ದಕ್ಕೂ ಕುಮಾರಸ್ವಾಮಿ ವಿರುದ್ದ ವಾಗ್ದಾಳಿ ನಡೆಸಿದರು.

ನಾನು ಜೆಡಿಎಸ್‌ನಲ್ಲಿದ್ದಾಗ ದಿನದ 16 ತಾಸು ಅವರೊಂದಿಗೆ ಇರುತ್ತಿದೆ. ಆದರೆ, ಅವರ ಪ್ಯಾಂಟೊಳಗಿರುವ ಖಾಕಿ ಚಡ್ಡಿ ವಿಷಯವೇ ಗೊತ್ತಾಗಲಿಲ್ಲ. ಬಿಜೆಪಿಗಿಂತ ಹೆಚ್ಚು ಕೋಮುವಾದ ತುಂಬಿಕೊಂಡಿರುವ ಅವರನ್ನ ನಂಬಬಾರದು ಎಂದು ವ್ಯಂಗವಾಡಿದರು.

ಜೆಡಿಎಸ್‌ ಬರಿ ಡವ್‌ ಮಾಡಿಕೊಂಡು ಗೆಲ್ಲುತ್ತಾ ಬಂದಿದೆ ಹೊರತು ಕೆಲಸ ಮಾಡಿಲ್ಲ. ಮುಡಾ ವಿಷಯದಲ್ಲಿ ಸಿದ್ದರಾಮಯ್ಯ ಅವರು ಎಳ್ಳಷ್ಟು ತಪ್ಪೆಸಗಿಲ್ಲ. ಅವರ ಕುರ್ಚಿ ಅಲ್ಲಾಡಿಸಲು ಯಾವ ನನ್ನ ಮಗನಿಂದಲೂ ಸಾಧ್ಯವಿಲ್ಲ ಎಂದು ಜಮೀರ್‌ ಆಕ್ರೋಶ ವ್ಯಕ್ತಪಡಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

1 hour ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

2 hours ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

3 hours ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

4 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

4 hours ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

4 hours ago