ಚನ್ನಪಟ್ಟಣ: ಕುಮಾರಸ್ವಾಮಿ ಮತ್ತು ಅವರ ಕುಟುಂಬ ಮಾಡಿರುವ ಆಸ್ತಿ ಮೊತ್ತವು ರಾಜ್ಯದ ಮೂರು ಬಜೆಟ್ ಮಂಡಿಸುವಷ್ಟಿದೆ. ಅಷ್ಟೊಂದು ಭೂಮಿ ಮತ್ತು ಹಣ ಕೊಳ್ಳೆ ಹೊಡೆದಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಆರೋಪ ಮಾಡಿದರು.
ನಗರದ ಬಾಲಕರ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಪಕ್ಷದ ಮೂರನೇ ದಿನದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ಭಾಷಣದ ಉದ್ದಕ್ಕೂ ಕುಮಾರಸ್ವಾಮಿ ವಿರುದ್ದ ವಾಗ್ದಾಳಿ ನಡೆಸಿದರು.
ನಾನು ಜೆಡಿಎಸ್ನಲ್ಲಿದ್ದಾಗ ದಿನದ 16 ತಾಸು ಅವರೊಂದಿಗೆ ಇರುತ್ತಿದೆ. ಆದರೆ, ಅವರ ಪ್ಯಾಂಟೊಳಗಿರುವ ಖಾಕಿ ಚಡ್ಡಿ ವಿಷಯವೇ ಗೊತ್ತಾಗಲಿಲ್ಲ. ಬಿಜೆಪಿಗಿಂತ ಹೆಚ್ಚು ಕೋಮುವಾದ ತುಂಬಿಕೊಂಡಿರುವ ಅವರನ್ನ ನಂಬಬಾರದು ಎಂದು ವ್ಯಂಗವಾಡಿದರು.
ಜೆಡಿಎಸ್ ಬರಿ ಡವ್ ಮಾಡಿಕೊಂಡು ಗೆಲ್ಲುತ್ತಾ ಬಂದಿದೆ ಹೊರತು ಕೆಲಸ ಮಾಡಿಲ್ಲ. ಮುಡಾ ವಿಷಯದಲ್ಲಿ ಸಿದ್ದರಾಮಯ್ಯ ಅವರು ಎಳ್ಳಷ್ಟು ತಪ್ಪೆಸಗಿಲ್ಲ. ಅವರ ಕುರ್ಚಿ ಅಲ್ಲಾಡಿಸಲು ಯಾವ ನನ್ನ ಮಗನಿಂದಲೂ ಸಾಧ್ಯವಿಲ್ಲ ಎಂದು ಜಮೀರ್ ಆಕ್ರೋಶ ವ್ಯಕ್ತಪಡಿಸಿದರು.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…