ಚನ್ನಪಟ್ಟಣ: ಕುಮಾರಸ್ವಾಮಿ ಮತ್ತು ಅವರ ಕುಟುಂಬ ಮಾಡಿರುವ ಆಸ್ತಿ ಮೊತ್ತವು ರಾಜ್ಯದ ಮೂರು ಬಜೆಟ್ ಮಂಡಿಸುವಷ್ಟಿದೆ. ಅಷ್ಟೊಂದು ಭೂಮಿ ಮತ್ತು ಹಣ ಕೊಳ್ಳೆ ಹೊಡೆದಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಆರೋಪ ಮಾಡಿದರು.
ನಗರದ ಬಾಲಕರ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಪಕ್ಷದ ಮೂರನೇ ದಿನದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ಭಾಷಣದ ಉದ್ದಕ್ಕೂ ಕುಮಾರಸ್ವಾಮಿ ವಿರುದ್ದ ವಾಗ್ದಾಳಿ ನಡೆಸಿದರು.
ನಾನು ಜೆಡಿಎಸ್ನಲ್ಲಿದ್ದಾಗ ದಿನದ 16 ತಾಸು ಅವರೊಂದಿಗೆ ಇರುತ್ತಿದೆ. ಆದರೆ, ಅವರ ಪ್ಯಾಂಟೊಳಗಿರುವ ಖಾಕಿ ಚಡ್ಡಿ ವಿಷಯವೇ ಗೊತ್ತಾಗಲಿಲ್ಲ. ಬಿಜೆಪಿಗಿಂತ ಹೆಚ್ಚು ಕೋಮುವಾದ ತುಂಬಿಕೊಂಡಿರುವ ಅವರನ್ನ ನಂಬಬಾರದು ಎಂದು ವ್ಯಂಗವಾಡಿದರು.
ಜೆಡಿಎಸ್ ಬರಿ ಡವ್ ಮಾಡಿಕೊಂಡು ಗೆಲ್ಲುತ್ತಾ ಬಂದಿದೆ ಹೊರತು ಕೆಲಸ ಮಾಡಿಲ್ಲ. ಮುಡಾ ವಿಷಯದಲ್ಲಿ ಸಿದ್ದರಾಮಯ್ಯ ಅವರು ಎಳ್ಳಷ್ಟು ತಪ್ಪೆಸಗಿಲ್ಲ. ಅವರ ಕುರ್ಚಿ ಅಲ್ಲಾಡಿಸಲು ಯಾವ ನನ್ನ ಮಗನಿಂದಲೂ ಸಾಧ್ಯವಿಲ್ಲ ಎಂದು ಜಮೀರ್ ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…
ನಾಗಮಂಗಲ : ಮಂಡ್ಯ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಪಕ್ಷಾತೀತವಾಗಿ ನನ್ನನ್ನು ಈ ಕ್ಷೇತ್ರದ ಜನರು…