ಚನ್ನಪಟ್ಟಣ: ಕುಮಾರಸ್ವಾಮಿ ಮತ್ತು ಅವರ ಕುಟುಂಬ ಮಾಡಿರುವ ಆಸ್ತಿ ಮೊತ್ತವು ರಾಜ್ಯದ ಮೂರು ಬಜೆಟ್ ಮಂಡಿಸುವಷ್ಟಿದೆ. ಅಷ್ಟೊಂದು ಭೂಮಿ ಮತ್ತು ಹಣ ಕೊಳ್ಳೆ ಹೊಡೆದಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಆರೋಪ ಮಾಡಿದರು.
ನಗರದ ಬಾಲಕರ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಪಕ್ಷದ ಮೂರನೇ ದಿನದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ಭಾಷಣದ ಉದ್ದಕ್ಕೂ ಕುಮಾರಸ್ವಾಮಿ ವಿರುದ್ದ ವಾಗ್ದಾಳಿ ನಡೆಸಿದರು.
ನಾನು ಜೆಡಿಎಸ್ನಲ್ಲಿದ್ದಾಗ ದಿನದ 16 ತಾಸು ಅವರೊಂದಿಗೆ ಇರುತ್ತಿದೆ. ಆದರೆ, ಅವರ ಪ್ಯಾಂಟೊಳಗಿರುವ ಖಾಕಿ ಚಡ್ಡಿ ವಿಷಯವೇ ಗೊತ್ತಾಗಲಿಲ್ಲ. ಬಿಜೆಪಿಗಿಂತ ಹೆಚ್ಚು ಕೋಮುವಾದ ತುಂಬಿಕೊಂಡಿರುವ ಅವರನ್ನ ನಂಬಬಾರದು ಎಂದು ವ್ಯಂಗವಾಡಿದರು.
ಜೆಡಿಎಸ್ ಬರಿ ಡವ್ ಮಾಡಿಕೊಂಡು ಗೆಲ್ಲುತ್ತಾ ಬಂದಿದೆ ಹೊರತು ಕೆಲಸ ಮಾಡಿಲ್ಲ. ಮುಡಾ ವಿಷಯದಲ್ಲಿ ಸಿದ್ದರಾಮಯ್ಯ ಅವರು ಎಳ್ಳಷ್ಟು ತಪ್ಪೆಸಗಿಲ್ಲ. ಅವರ ಕುರ್ಚಿ ಅಲ್ಲಾಡಿಸಲು ಯಾವ ನನ್ನ ಮಗನಿಂದಲೂ ಸಾಧ್ಯವಿಲ್ಲ ಎಂದು ಜಮೀರ್ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…