ಬೆಂಗಳೂರು: ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಬದಲಿಸಿ ಹೊಸ ಸಿಎಂ ಆಗುವ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಬೆಳೆಯುತ್ತಲೇ ಇದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ.
ಮುಡಾ ಹಗರಣದಿಂದ ಸಿಎಂ ಸಿದ್ದರಾಮಯ್ಯ ಭಾರೀ ಮುಜುಗರಕ್ಕೆ ಒಳಗಾಗಿದ್ದಾರೆ ಎನ್ನುತ್ತಿರುವ ಬೆನ್ನಲ್ಲೇ ಈಗ ಕಾಂಗ್ರೆಸ್ನಲ್ಲಿ ಸಿಎಂ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗುತ್ತಲೇ ಹೋಗುತ್ತಿದೆ.
ಈ ಬೆಳವಣಿಗೆಗಳ ನಡುವೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಟ್ವೀಟ್ ಮಾಡಿದ್ದು, ಕಾಂಗ್ರೆಸ್ನಲ್ಲಿ ಸತೀಶ್ ಜಾರಕಿಹೊಳಿ, ಡಿಕೆಶಿ, ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ ಆಯ್ತು ಈಗ ಆರ್.ವಿ.ದೇಶಪಾಂಡೆ ಅವರು ಸಿಎಂ ಆಗುವ ಆಕಾಂಕ್ಷಿಗಳ ಪಟ್ಟಿ ಸೇರ್ಪಡೆಯಾಗಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ರಾಜ್ಯದ ಅಭಿವೃದ್ಧಿಗೆ ದುಡಿಯುವುದಕ್ಕಿಂತ ವೈಯಕ್ತಿಕ ವರ್ಚಸ್ಸನ್ನು ಹೆಚ್ಚಿಸಿಕೊಳ್ಳುವವರೇ ಹೆಚ್ಚಾಗಿದ್ದಾರೆ. ಆಡಳಿತ, ಕಾನೂನು ಸುವ್ಯವಸ್ಥೆ ನಿಷ್ಕ್ರಿಯವಾಗಿದೆ. ಇದು ಈ ಸರ್ಕಾರ ಕಥೆ, ವ್ಯಥೆ ಎಂದು ಲೇವಡಿ ಮಾಡಿದ್ದಾರೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…