ರಾಜ್ಯ

ಮುಸುಕುಧಾರಿ ದೂರುದಾರ ಸರ್ಕಾರಕ್ಕೆ ಮುಸುಕು ಹಾಕಿದ್ದಾನೆ: ಆರ್.‌ಅಶೋಕ್‌ ಕಿಡಿ

ಚಿತ್ರದುರ್ಗ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಇದೆಲ್ಲವೂ ನಗರ ನಕ್ಸಲರ ಕೈವಾಡ. ಷಡ್ಯಂತ್ರದ ಹಿಂದಿರುವವರು ಯಾರು ಎಂಬುದನ್ನು ಸರ್ಕಾರ ಬಹಿರಂಗ ಪಡಿಸಲಿ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಚಿತ್ರದುರ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ವಿಚಾರವಾಗಿ ಷಡ್ಯಂತ್ರ ನಡೆದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ಹೇಳಿದ್ದಾರೆ. ಯಾರು ಷಡ್ಯಂತ್ರ ನಡೆಸಿದವರು ಎಂಬುದನ್ನು ಬಹಿರಂಗಪಡಿಸಬೇಕು. ಮೊದಲು ಎಸ್‌ಐಟಿ ಅಧಿಕಾರಿಗಳು ಮಧ್ಯಂತರ ವರದಿ ಬಿಡುಗಡೆ ಮಾಡಲಿ ಎಂದರು.

ಎಲ್ಲಾ ಷಡ್ಯಂತ್ರಗಳ ಹಿಂದೆ ನಗರ ನಕ್ಸಲರು ಇದ್ದಾರೆ. ನಗರ ನಕ್ಸಲರು ಸಿಎಂ ಸಿದ್ದರಾಮಯ್ಯ ಅವರನ್ನು ಸುತ್ತುವರೆದು ಈ ತನಿಖೆ ನಡೆಸಿದ್ದಾರೆ. ಮುಸುಕುಧಾರಿ ದೂರುದಾರ ಸರ್ಕಾರಕ್ಕೆ ಮುಸುಕು ಹಾಕಿದ್ದಾನೆ. ಬೆಟ್ಟ ಅಗೆದರೂ ಇಲಿಯೂ ಸಿಗಲಿಲ್ಲ. ಮುಸುಕುಧಾರಿ ಇನ್ನೂ ನೂರು ಕಡೆ ತೋರಿಸಲು ಹೊರಟಿದ್ದಾನೆ. ಕಡೆಗೆ ಮಂಜುನಾಥನ ಕೆಳಗೆ ಹೂತಿದ್ದೇನೆ ಎನ್ನವಂಥದ್ದೂ ನಡೆಯುತ್ತಿದೆ. ಹಿಂದೂಗಳನ್ನು ಇಷ್ಟೊಂದು ಕಡೆಗಣಿಸುವುದಾ? ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

8 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

8 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

8 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

8 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

8 hours ago