ಚಿತ್ರದುರ್ಗ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಇದೆಲ್ಲವೂ ನಗರ ನಕ್ಸಲರ ಕೈವಾಡ. ಷಡ್ಯಂತ್ರದ ಹಿಂದಿರುವವರು ಯಾರು ಎಂಬುದನ್ನು ಸರ್ಕಾರ ಬಹಿರಂಗ ಪಡಿಸಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಚಿತ್ರದುರ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ವಿಚಾರವಾಗಿ ಷಡ್ಯಂತ್ರ ನಡೆದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಹೇಳಿದ್ದಾರೆ. ಯಾರು ಷಡ್ಯಂತ್ರ ನಡೆಸಿದವರು ಎಂಬುದನ್ನು ಬಹಿರಂಗಪಡಿಸಬೇಕು. ಮೊದಲು ಎಸ್ಐಟಿ ಅಧಿಕಾರಿಗಳು ಮಧ್ಯಂತರ ವರದಿ ಬಿಡುಗಡೆ ಮಾಡಲಿ ಎಂದರು.
ಎಲ್ಲಾ ಷಡ್ಯಂತ್ರಗಳ ಹಿಂದೆ ನಗರ ನಕ್ಸಲರು ಇದ್ದಾರೆ. ನಗರ ನಕ್ಸಲರು ಸಿಎಂ ಸಿದ್ದರಾಮಯ್ಯ ಅವರನ್ನು ಸುತ್ತುವರೆದು ಈ ತನಿಖೆ ನಡೆಸಿದ್ದಾರೆ. ಮುಸುಕುಧಾರಿ ದೂರುದಾರ ಸರ್ಕಾರಕ್ಕೆ ಮುಸುಕು ಹಾಕಿದ್ದಾನೆ. ಬೆಟ್ಟ ಅಗೆದರೂ ಇಲಿಯೂ ಸಿಗಲಿಲ್ಲ. ಮುಸುಕುಧಾರಿ ಇನ್ನೂ ನೂರು ಕಡೆ ತೋರಿಸಲು ಹೊರಟಿದ್ದಾನೆ. ಕಡೆಗೆ ಮಂಜುನಾಥನ ಕೆಳಗೆ ಹೂತಿದ್ದೇನೆ ಎನ್ನವಂಥದ್ದೂ ನಡೆಯುತ್ತಿದೆ. ಹಿಂದೂಗಳನ್ನು ಇಷ್ಟೊಂದು ಕಡೆಗಣಿಸುವುದಾ? ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…