ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಸಚಿವರು ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಕೆಳಗಿಳಿಸಿ, ಹೊಸಬರಿಗೆ ಸ್ಥಾನ ಸಿಗುವಂತೆ ಮಾಡಬೇಕು ಎಂದು ಸಚಿವರೇ ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ.
ನಿನ್ನೆ ಸಚಿವ ಸತೀಶ್ ಜಾರಕಿಹೊಳಿ ಅವರು ಮಾಧ್ಯಮಗಳ ಮುಂದೆಯೇ ಬಹಿರಂಗವಾಗಿ ಡಿಕೆಶಿ ವಿರುದ್ಧ ಅಸಮಾಧಾನ ಹೊರಹಾಕಿದ್ದರು.
ಈ ವಿಚಾರದ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಸಿದ್ದರಾಮಯ್ಯ ಸಿಎಂ ಸ್ಥಾನ ಬಿಡುತ್ತಿಲ್ಲ. ಡಿ.ಕೆ.ಶಿವಕುಮಾರ್ ಅಧ್ಯಕ್ಷ ಸ್ಥಾನ ಬಿಡುತ್ತಿಲ್ಲ. ಮೊನ್ನೆ ಸುರ್ಜೆವಾಲಾ ಯಾರೂ ಕೂಡ ಬಹಿರಂಗವಾಗಿ ಮಾತನಾಡಬೇಡಿ ಎಂದು ಖಡಕ್ ಸೂಚನೆ ನೀಡಿದ್ದರು. ಆದರೆ ನಿನ್ನೆಯಿಂದಲೇ ಎಲ್ಲರೂ ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಿಂದಲೇ ಸರ್ಕಾರ ಪತನವಾಗುವುದು ಗ್ಯಾರಂಟಿ ಎಂದು ಭವಿಷ್ಯ ನುಡಿದರು.
ಇನ್ನು ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಜಾತಿಗಣತಿ ವರದಿಗೆ ನಮ್ಮ ವಿರೋಧ ಇಲ್ಲ. ಎಲ್ಲರೂ ಒಪ್ಪುವಂತೆ ಜಾತಿಗಣತಿ ಆಗಬೇಕು. ಎಲ್ಲಾ ಮನೆಗಳ ಸಮೀಕ್ಷೆ ಆಗಬೇಕು. ಒಕ್ಕಲಿಗರು ಲಿಂಗಾಯತರನ್ನು ವಿಭಜಿಸಿದ್ದಾರೆ. ಇದೆಲ್ಲಾ ಕೇವಲ ಸಿದ್ದರಾಮಯ್ಯನವರ ಟ್ರಕ್ಸ್ ಅಷ್ಟೇ. ವೈಜ್ಞಾನಿಕವಾಗಿಯೇ ಜಾತಿಗಣತಿ ಆಗಬೇಕು ಎಂದು ಆಗ್ರಹಿಸಿದರು.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…