ಬೆಂಗಳೂರು: ಇಂದು ರಾತ್ರಿ ಖಗ್ರಾಸ ಚಂದ್ರಗ್ರಹಣ ಸಂಭವಿಸಿದೆ. ರಾತ್ರಿ 9.57ಕ್ಕೆ ಆರಂಭವಾಗಿ ತಡರಾತ್ರಿ 1.26ಕ್ಕೆ ಅಂತ್ಯವಾಗಲಿದ್ದು, ರಕ್ತ ವರ್ಣದಲ್ಲಿ ಚಂದ್ರನ ದರ್ಶನವಾಗಲಿದೆ.
ಖಗೋಳದ ಅಪೂರ್ವ ವಿದ್ಯಾಮಾನ ಖಗ್ರಾಸ ಚಂದ್ರಗ್ರಹಣ ಇಂದು ರಾತ್ರಿ ಜರುಗಲಿದ್ದು, ಚಂದ್ರ ರಕ್ತವರ್ಣ ಅಥವಾ ತಾಮ್ರವರ್ಣದಲ್ಲಿ ಗೋಚರಿಸಲಿದ್ದಾನೆ.
5 ಗಂಟೆ 27 ನಿಮಿಷಗಳ ಕಾಲ ಗ್ರಹಣ ಇರಲಿದೆ. ಒಂದು ಗಂಟೆ 22 ನಿಮಿಷಗಳ ಕಾಲ ಸಂಪೂರ್ಣ ಗ್ರಹಣ ಇರಲಿದ್ದು, ಬರಿ ಗಣ್ಣಿನಲ್ಲೇ ಚಂದ್ರನನ್ನು ವೀಕ್ಷಿಸಬಹುದಾಗಿದೆ.
ಇಂದು ರಾತ್ರಿ 8.58ಕ್ಕೆ ಚಂದ್ರಗ್ರಹಣ ಆರಂಭವಾಗಲಿದ್ದು, 9.57ರಿಂದ ಭಾಗಶಃ ಚಂದ್ರಗ್ರಹಣ ಶುರುವಾಗಲಿದೆ. ಇದು ರಾತ್ರಿ 11ರಿಂದ ಸಂಪೂರ್ಣ ಗ್ರಹಣ ಆರಂಭವಾಗುತ್ತದೆ. ಈ ಅವಧಿಯಲ್ಲಿ ಕೆಂಪು ಚಂದಿರನನ್ನು ವೀಕ್ಷಣೆ ಮಾಡಬಹುದಾಗಿದೆ. ತಡರಾತ್ರಿ 1.26ಕ್ಕೆ ಗ್ರಹಣ ಮುಕ್ತಾಯವಾಗಲಿದೆ.
ಸೂರ್ಯ, ಭೂಮಿ ಹಾಗೂ ಚಂದ್ರ ಸರಳರೇಖೆಯಲ್ಲಿ ಬಂದಾಗ ಚಂದ್ರನ ಮೇಲೆ ಬೀಳುವ ಸೂರ್ಯನ ಬೆಳಕನ್ನು ಭೂಮಿ ತಡೆಯುತ್ತದೆ. ಆಗ ಚಂದ್ರ ರಕ್ತವರ್ಣದ ಚಂದ್ರ ಗೋಚರಿಸುತ್ತದೆ. ಚಂದ್ರಗ್ರಹಣದ ಹಿನ್ನೆಲೆಯಲ್ಲಿ ದೇವಾಲಯಗಳನ್ನು ಇಂದು ಮಧ್ಯಾಹ್ನದಿಂದಲೇ ಬಂದ್ ಮಾಡಲಾಗುತ್ತದೆ.
ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…
ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್ನಿಂದ ನೋಟಿಸ್…
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…