ಮೈಸೂರು : ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿಯೊಳಗಿನ ಒಳ ಜಗಳ ಮತ್ತೊಂದು ಹಂತಕ್ಕೆ ತಿರುವು ಪಡೆದಿದ್ದು, ತಮ್ಮದೇ ಬಿಜೆಪಿ ಪಕ್ಷದ ಶಾಸಕ ಎಸ್.ಆರ್. ವಿಶ್ವನಾಥ್ ಅವರು ಸ್ವಪಕ್ಷದ ನಾಯಕ ಅಶೋಕ್ ಅವರ ವಿರುದ್ಧ ಸಮಧಾನ ಹೊರಹಾಕಿದ್ದಾರೆ.
ಅಶೋಕ್ ವಿರುದ್ಧ ಕಿಡಿಕಾರಿದ ಎಸ್.ಆರ್. ವಿಶ್ವನಾಥ್ ಅಶೋಕ್ ಬಕೆಟ್ ಹಿಡಿದುಕೊಂಡೇ ರಾಜಕಾರಣ ಮಾಡುತ್ತಾರೆ ಎಂದು ದೂರಿದ್ದರು. ಈ ಸಂಬಂಧ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಬಿಜೆಪಿಯವರಿಗೆ ಬಿಜೆಪಿಯವರೇ ಕೊಟ್ಟಿರುವ ಮತ್ತೊಂದು ಹೆಸರು ಬಕೆಟ್ ಜನತಾ ಪಾರ್ಟಿ ಎಂದು ಕಾಲೆಳೆದಿದ್ದಾರೆ.
ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್, ಅಶೋಕ್ ವಿರುದ್ಧ ನೀಡಿರುವ ಹೇಳಿಕೆನ್ನು ಉಲ್ಲೇಖಿಸಿ ಕಾಂಗ್ರೆಸ್ ಪೋಸ್ಟ್ ಒಂದನ್ನು ಹಂಚಿಕೊಂಡಿದೆ. ಅದರಲ್ಲಿ ʼ ಆರ್. ಅಶೋಕ್ ಅವರೇ, ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ಯಾರಿಗೆ ಬಕೆಟ್ ಹಿಡಿದಿರಿ? ಯಾವ ಬ್ರಾಂಡ್ ಬಕೆಟ್ ಹಿಡಿದಿರಿ? ಯಾರಿಗೆ ಬಕೆಟ್ ಹಿಡಿದು ನಿಮ್ಮ ಅಕ್ರಮಗಳನ್ನು ಮುಚ್ಚಿಕೊಂಡಿರಿ? ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
ಮತ್ತೊಂದು ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿಗೆ ಬಿಜೆಪಿಗರಿಂದಲೇ ಸಿಕ್ಕಿದ್ದು ಅದೆಷ್ಟು ಹೆಸರುಗಳು, ಭ್ರಷ್ಟ ಜನತಾ ಪಾರ್ಟಿ, ಬ್ಲಾಕ್ಮೇಲ್ ಜನತಾ ಪಾರ್ಟಿ, ಬ್ಲೂ ಬಾಯ್ಸ್ ಜನತಾ ಪಾರ್ಟಿ, ಈಗ ಹೊಸದಾಗಿ ಬಕೆಟ್ ಜನತಾ ಪಾರ್ಟಿ ಸೇರ್ಪಡೆಯಾಗಿದೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…